<p><strong>ಬೆಳಗಾವಿ:</strong> ‘ಗಡಿ ಹಾಗೂ ಭಾಷೆ ಸಮಸ್ಯೆಯನ್ನು ಭಾವನಾತ್ಮಕವಾಗಿ ನೋಡದೆ, ಸೌಹಾರ್ದದಿಂದ ಬಗೆಹರಿಸಬೇಕು’ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ಭಾಗದಲ್ಲಿ ಕನ್ನಡ ಮತ್ತು ಮರಾಠಿ ಭಾಷೆಯ ಜನರು ಸೌಹಾರ್ದದಿಂದ ಬಾಳುತ್ತಿದ್ದಾರೆ. ಆದರೆ, ಕೆಲವೇ ಕೆಲವರಿಂದ ಈ ಸಂಬಂಧಕ್ಕೆ ಧಕ್ಕೆ ಆಗುತ್ತಿದೆ’ ಎಂದು ಆರೋಪಿಸಿದರು.</p>.<p>‘ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ನೆಲ, ಜಲದ ವಿಷಯಗಳನ್ನು ಎರಡೂ ಕಡೆಯ ಸರ್ಕಾರಗಳು ನೋಡಿಕೊಳ್ಳುತ್ತವೆ. ಹೀಗಾಗಿ, ಯಾರು ಕೂಡ ಭಾವನಾತ್ಮಕವಾಗಿ ಪ್ರಚೋದನೆಗೆ ಒಳಗಾಗಬಾರದು. ಮಸಿ ಬಳಿಯುವುದು ಅಥವಾ ಕಲ್ಲು ಎಸೆಯುವುದರಿಂದ ಪರಿಹಾರ ಸಿಗುವುದಿಲ್ಲ. ಎರಡೂ ಕಡೆಯವರಿಗೆ ಪರಸ್ಪರ ತಿಳಿವಳಿಕೆ ಬರಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಗಡಿ ಹಾಗೂ ಭಾಷೆ ಸಮಸ್ಯೆಯನ್ನು ಭಾವನಾತ್ಮಕವಾಗಿ ನೋಡದೆ, ಸೌಹಾರ್ದದಿಂದ ಬಗೆಹರಿಸಬೇಕು’ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ಭಾಗದಲ್ಲಿ ಕನ್ನಡ ಮತ್ತು ಮರಾಠಿ ಭಾಷೆಯ ಜನರು ಸೌಹಾರ್ದದಿಂದ ಬಾಳುತ್ತಿದ್ದಾರೆ. ಆದರೆ, ಕೆಲವೇ ಕೆಲವರಿಂದ ಈ ಸಂಬಂಧಕ್ಕೆ ಧಕ್ಕೆ ಆಗುತ್ತಿದೆ’ ಎಂದು ಆರೋಪಿಸಿದರು.</p>.<p>‘ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ನೆಲ, ಜಲದ ವಿಷಯಗಳನ್ನು ಎರಡೂ ಕಡೆಯ ಸರ್ಕಾರಗಳು ನೋಡಿಕೊಳ್ಳುತ್ತವೆ. ಹೀಗಾಗಿ, ಯಾರು ಕೂಡ ಭಾವನಾತ್ಮಕವಾಗಿ ಪ್ರಚೋದನೆಗೆ ಒಳಗಾಗಬಾರದು. ಮಸಿ ಬಳಿಯುವುದು ಅಥವಾ ಕಲ್ಲು ಎಸೆಯುವುದರಿಂದ ಪರಿಹಾರ ಸಿಗುವುದಿಲ್ಲ. ಎರಡೂ ಕಡೆಯವರಿಗೆ ಪರಸ್ಪರ ತಿಳಿವಳಿಕೆ ಬರಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>