ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ಆರ್. ಅಂಬೇಡ್ಕರ ಪುತ್ಥಳಿ ಅನಾವರಣ

Last Updated 27 ಜೂನ್ 2018, 11:23 IST
ಅಕ್ಷರ ಗಾತ್ರ

ಚಿಕ್ಕೋಡಿ: ‘ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಉಜ್ವಲ ಭವಿಷ್ಯ ರೂಪಿಸಿದರೆ ಮಾತ್ರ ಡಾ.ಬಿ.ಆರ್. ಅಂಬೇಡ್ಕರ ಕನಸು ನನಸಾಗಲಿದೆ’ ಎಂದು ದಲಿತ ಮುಖಂಡ ಶೇಖರ ಪ್ರಭಾತ ಹೇಳಿದರು.

ತಾಲ್ಲೂಕಿನ ಕೇರೂರ ಗ್ರಾಮದಲ್ಲಿ ಮಂಗಳವಾರ ಛತ್ರಪತಿ ಶಾಹುಮಹಾರಾಜರ 144ನೇ ಜಯಂತಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ ಪುತ್ಥಳಿ ಪ್ರತಿಷ್ಠಾಪನೆ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಇಂದಿನ ಯುವಕರು ಅಂಬೇಡ್ಕರ್ ಹಾಗೂ ಶಾಹುಮಹಾರಾಜರ ಆದರ್ಶ ಪಾಲನೆ ಮಾಡಿದರೆ ಜೀವನದಲ್ಲಿ ಯಶಸ್ವಿ ಕಾಣಲು ಸಾಧ್ಯ. ಅಂಬೇಡ್ಕರ್ ಹಾಗೂ ಶಾಹುಮಹಾರಾಜರು ಹಿಂದುಳಿದ ವರ್ಗದ ಜನರ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಶಿಕ್ಷಣಕ್ಕೆ ಒತ್ತು ನೀಡಿ ಸಂಘಟನೆ ಮಾಡಿದಾಗ ಮಾತ್ರ ದಲಿತ ಸಮಾಜ ಉದ್ಧಾರವಾಗುತ್ತದೆ ಎಂಬ ಸಂದೇಶವನ್ನು ಸಹ ಸಾರಿದ್ದಾರೆ’ ಎಂದರು.

ದಲಿತ ಮುಖಂಡ ಮಹಾದೇವ ಮುನ್ನೋಳ್ಳಿಕರ, ಬಿಎಸ್‌ಪಿ ಮುಖಂಡ ದಿವಾಕರ ಬಡಿಗೇರ, ಅಪ್ಪಾಸಾಹೇಬ್ ಕೆಂಚನ್ನವರ ಮಾತನಾಡಿದರು.

ಮಹಾಂತೇಶ ಮಾಳಗೆ, ಮಹಾಂತೇಶ ಬೇವಿನಗಿಡದ, ಸಂಜಯ ಚುಗಚೆ, ಅರುಣ ಬ್ಯಾಳಿ, ಅಶೋಕ ಚುಗಚೆ, ದಯಾನಂದ ಬೇವಿನಗಿಡದ, ಅರುಣ ಹವಾಲ್ದಾರ, ಲಕ್ಷ್ಮಣ ಜಯಗೋಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT