<p><strong>ಬೆಳಗಾವಿ: </strong>ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಸಿಕ್ಕಿಬಿದ್ದ ಚನ್ನಮ್ಮನ ಕಿತ್ತೂರಿನ ತಹಶೀಲ್ದಾರ್ ಸೋಮಲಿಂಗ ಹಾಲಗಿ ಹಾಗೂ ಗುಮಾಸ್ತ ಜಿ.ಪ್ರಸನ್ನ ಅವರನ್ನು ಲೋಕಾಯುಕ್ತ ಪೊಲೀಸರು ಶನಿವಾರ ಇಲ್ಲಿನ ಹಿಂಡಲಗಾ ಜೈಲಿಗೆ ತಂದು ಬಿಟ್ಟರು.</p>.<p>ಖೋದಾನಪುರ ರೈತ ರಾಜೇಂದ್ರ ಇನಾಮದಾರ ಅವರ ಜಮೀನು ಖಾತಾ ಮಾಡಲು ಆರೋಪಿಗಳು ₹5 ಲಕ್ಷ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ಶುಕ್ರವಾರ ರಾತ್ರಿ ₹2 ಲಕ್ಷ ಲಂಚ ತೆಗೆದುಕೊಳ್ಳುವ ವೇಳೆ ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದರು.</p>.<p>ಆರೋಪಿಗಳನ್ನು ಶನಿವಾರ ಬೆಳಿಗ್ಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.</p>.<p>ನ್ಯಾಯಾಧೀಶರು ಇಬ್ಬರೂ ಆರೋಪಿಗಳನ್ನು ಸೋಮವಾರ (ನ.28) ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.</p>.<p>ಸೋಮವಾರ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದಾರೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.</p>.<p>ಪೊಲೀಸ್ ವಾಹನದಲ್ಲಿ ಜೈಲಿಗೆ ಬಂದ ಇಬ್ಬರೂ ಆರೋಪಿಗಳು ಮಾಧ್ಯಮದವರನ್ನು ಕಂಡ ತಕ್ಷಣ ತಮ್ಮ ಬ್ಯಾಗುಗಳನ್ನು ಮುಖಕ್ಕೆ ಮುಚ್ಚಿಕೊಂಡು ಒಳಗೆ ಹೋದರು.</p>.<p><strong>ಓದಿ...<a href="https://www.prajavani.net/district/belagavi/kittur-tahsildar-trapped-by-lokayukta-police-991922.html" target="_blank">ಕಿತ್ತೂರು ತಹಶೀಲ್ದಾರ್ ಲೋಕಾಯುಕ್ತ ಬಲೆಗೆ:ಹಲವು ದಾಖಲೆ, ₹10 ಲಕ್ಷ ನಗದು ವಶ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಸಿಕ್ಕಿಬಿದ್ದ ಚನ್ನಮ್ಮನ ಕಿತ್ತೂರಿನ ತಹಶೀಲ್ದಾರ್ ಸೋಮಲಿಂಗ ಹಾಲಗಿ ಹಾಗೂ ಗುಮಾಸ್ತ ಜಿ.ಪ್ರಸನ್ನ ಅವರನ್ನು ಲೋಕಾಯುಕ್ತ ಪೊಲೀಸರು ಶನಿವಾರ ಇಲ್ಲಿನ ಹಿಂಡಲಗಾ ಜೈಲಿಗೆ ತಂದು ಬಿಟ್ಟರು.</p>.<p>ಖೋದಾನಪುರ ರೈತ ರಾಜೇಂದ್ರ ಇನಾಮದಾರ ಅವರ ಜಮೀನು ಖಾತಾ ಮಾಡಲು ಆರೋಪಿಗಳು ₹5 ಲಕ್ಷ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ಶುಕ್ರವಾರ ರಾತ್ರಿ ₹2 ಲಕ್ಷ ಲಂಚ ತೆಗೆದುಕೊಳ್ಳುವ ವೇಳೆ ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದರು.</p>.<p>ಆರೋಪಿಗಳನ್ನು ಶನಿವಾರ ಬೆಳಿಗ್ಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.</p>.<p>ನ್ಯಾಯಾಧೀಶರು ಇಬ್ಬರೂ ಆರೋಪಿಗಳನ್ನು ಸೋಮವಾರ (ನ.28) ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.</p>.<p>ಸೋಮವಾರ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದಾರೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.</p>.<p>ಪೊಲೀಸ್ ವಾಹನದಲ್ಲಿ ಜೈಲಿಗೆ ಬಂದ ಇಬ್ಬರೂ ಆರೋಪಿಗಳು ಮಾಧ್ಯಮದವರನ್ನು ಕಂಡ ತಕ್ಷಣ ತಮ್ಮ ಬ್ಯಾಗುಗಳನ್ನು ಮುಖಕ್ಕೆ ಮುಚ್ಚಿಕೊಂಡು ಒಳಗೆ ಹೋದರು.</p>.<p><strong>ಓದಿ...<a href="https://www.prajavani.net/district/belagavi/kittur-tahsildar-trapped-by-lokayukta-police-991922.html" target="_blank">ಕಿತ್ತೂರು ತಹಶೀಲ್ದಾರ್ ಲೋಕಾಯುಕ್ತ ಬಲೆಗೆ:ಹಲವು ದಾಖಲೆ, ₹10 ಲಕ್ಷ ನಗದು ವಶ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>