<p><strong>ಬೆಳಗಾವಿ</strong>: ಜಮೀನನ್ನು ಅಣ್ಣ– ತಮ್ಮಂದಿರ ಹೆಸರಿಗೆ ಮಾಡಿಕೊಡಲು ₹500 ಲಂಚ ಪಡೆದ ಗ್ರಾಮಲೆಕ್ಕಿಗನಿಗೆ (ವಿಲೇಜ್ ಅಕೌಂಟಂಟ್) ಸುಪ್ರೀಂಕೋರ್ಟ್ 30 ವರ್ಷಗಳ ಬಳಿಕ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.</p><p>‘ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮ ಲೆಕ್ಕಿಗ ನಾಗೇಶ ದೊಂಡು ಶಿವಂಗೇಕರ ಬಂಧಿತ. ಸುಪ್ರೀಂಕೋರ್ಟ್ ಆದೇಶದಂತೆ ಅವರನ್ನು ಬುಧವಾರ ಬಂಧಿಸಿ, ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ’ ಎಂದು ಲೋಕಾಯುಕ್ತ ಎಸ್ಪಿ ಹನುಮಂತರಾಯ ತಿಳಿಸಿದ್ದಾರೆ.</p><p><strong>ಪ್ರಕರಣ ಏನು?:</strong></p><p>1995ರಲ್ಲಿ ಕಡೋಲಿ ರೈತ ಲಕ್ಷ್ಮಣ ರುಕ್ಕಣ್ಣ ಕಟಾಂಬಳೆ ಅವರು ತಮ್ಮ ಸಹೋದರನೊಂದಿಗೆ ಜಮೀನು ಹಂಚಿಕೆ (ವಾಟ್ನಿ) ಮಾಡಿ ಉತಾರ ಕೊಡಲು ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಗ್ರಾಮಲೆಕ್ಕಿಗ ₹500 ಲಂಚ ಕೇಳಿದ್ದರು. ಇದನ್ನು ರೈತ ಲೋಕಾಯುಕ್ತ ಅಧಿಕಾರಿಗಳಿಗೆ ತಿಳಿಸಿದ್ದರು. ಜಾಲ ಬೀಸಿದ ಅಧಿಕಾರಿಗಳು ಲಂಚ ಪಡೆಯುವಾಗ ಬಂಧಿಸಿದ್ದರು.</p><p>ಆಗಿನ ಬೆಳಗಾವಿ ಜಿಲ್ಲಾ ಲೋಕಾಯುಕ್ತ ಉಪ ಅಧೀಕ್ಷಕ ಎಂ.ಎಸ್. ದಂಡಿನ ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯವು 2006ರ ಜೂನ್ 14ರಂದು ನಾಗೇಶಗೆ ಒಂದು ವರ್ಷ ಕಠಿಣ ಶಿಕ್ಷೆ ಹಾಗೂ ₹1,000 ದಂಡ ವಿಧಿಸಿತ್ತು.</p><p>ಇದನ್ನು ಪ್ರಶ್ನಿಸಿ ನಾಗೇಶ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. 2012ರ ಮಾರ್ಚ್ 9ರಂದು ಹೈಕೋರ್ಟ್, ನಾಗೇಶ ನಿರಪರಾಧಿ ಎಂದು ತೀರ್ಪು ನೀಡಿತ್ತು.</p><p>ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಲೋಕಾಯುಕ್ತ ಅಧಿಕಾರಿಗಳು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೇ ಏಪ್ರಿಲ್ 16ರಂದು ಸುಪ್ರೀಂಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿತು. ಅಲ್ಲದೇ ಬೆಳಗಾವಿ ವಿಶೇಷ ನ್ಯಾಯಾಲಯ ನೀಡಿದ ಆದೇಶವನ್ನು ಎತ್ತಿ ಹಿಡಿಯಿತು. ಆಪಾದಿತನ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿತ್ತು. ಆದೇಶದಂತೆ ಬುಧವಾರ ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಜಮೀನನ್ನು ಅಣ್ಣ– ತಮ್ಮಂದಿರ ಹೆಸರಿಗೆ ಮಾಡಿಕೊಡಲು ₹500 ಲಂಚ ಪಡೆದ ಗ್ರಾಮಲೆಕ್ಕಿಗನಿಗೆ (ವಿಲೇಜ್ ಅಕೌಂಟಂಟ್) ಸುಪ್ರೀಂಕೋರ್ಟ್ 30 ವರ್ಷಗಳ ಬಳಿಕ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.</p><p>‘ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮ ಲೆಕ್ಕಿಗ ನಾಗೇಶ ದೊಂಡು ಶಿವಂಗೇಕರ ಬಂಧಿತ. ಸುಪ್ರೀಂಕೋರ್ಟ್ ಆದೇಶದಂತೆ ಅವರನ್ನು ಬುಧವಾರ ಬಂಧಿಸಿ, ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ’ ಎಂದು ಲೋಕಾಯುಕ್ತ ಎಸ್ಪಿ ಹನುಮಂತರಾಯ ತಿಳಿಸಿದ್ದಾರೆ.</p><p><strong>ಪ್ರಕರಣ ಏನು?:</strong></p><p>1995ರಲ್ಲಿ ಕಡೋಲಿ ರೈತ ಲಕ್ಷ್ಮಣ ರುಕ್ಕಣ್ಣ ಕಟಾಂಬಳೆ ಅವರು ತಮ್ಮ ಸಹೋದರನೊಂದಿಗೆ ಜಮೀನು ಹಂಚಿಕೆ (ವಾಟ್ನಿ) ಮಾಡಿ ಉತಾರ ಕೊಡಲು ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಗ್ರಾಮಲೆಕ್ಕಿಗ ₹500 ಲಂಚ ಕೇಳಿದ್ದರು. ಇದನ್ನು ರೈತ ಲೋಕಾಯುಕ್ತ ಅಧಿಕಾರಿಗಳಿಗೆ ತಿಳಿಸಿದ್ದರು. ಜಾಲ ಬೀಸಿದ ಅಧಿಕಾರಿಗಳು ಲಂಚ ಪಡೆಯುವಾಗ ಬಂಧಿಸಿದ್ದರು.</p><p>ಆಗಿನ ಬೆಳಗಾವಿ ಜಿಲ್ಲಾ ಲೋಕಾಯುಕ್ತ ಉಪ ಅಧೀಕ್ಷಕ ಎಂ.ಎಸ್. ದಂಡಿನ ನ್ಯಾಯಾಲಯಕ್ಕೆ ದೋಷರೋಪ ಪಟ್ಟಿ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯವು 2006ರ ಜೂನ್ 14ರಂದು ನಾಗೇಶಗೆ ಒಂದು ವರ್ಷ ಕಠಿಣ ಶಿಕ್ಷೆ ಹಾಗೂ ₹1,000 ದಂಡ ವಿಧಿಸಿತ್ತು.</p><p>ಇದನ್ನು ಪ್ರಶ್ನಿಸಿ ನಾಗೇಶ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. 2012ರ ಮಾರ್ಚ್ 9ರಂದು ಹೈಕೋರ್ಟ್, ನಾಗೇಶ ನಿರಪರಾಧಿ ಎಂದು ತೀರ್ಪು ನೀಡಿತ್ತು.</p><p>ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಲೋಕಾಯುಕ್ತ ಅಧಿಕಾರಿಗಳು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೇ ಏಪ್ರಿಲ್ 16ರಂದು ಸುಪ್ರೀಂಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿತು. ಅಲ್ಲದೇ ಬೆಳಗಾವಿ ವಿಶೇಷ ನ್ಯಾಯಾಲಯ ನೀಡಿದ ಆದೇಶವನ್ನು ಎತ್ತಿ ಹಿಡಿಯಿತು. ಆಪಾದಿತನ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿತ್ತು. ಆದೇಶದಂತೆ ಬುಧವಾರ ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>