<p><strong>ಅಥಣಿ:</strong> ಸೈಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ ಮಾಡಿದ್ದ ಆರೋಪಿಯಿಂದ ದೂರುದಾರನಿಗೆ ಹಣ ಕೊಡಿಸುವಲ್ಲಿ ಸಹಾಯ ಮಾಡಿದ್ದ ಅಥಣಿ ಸಿಪಿಐ ಸಂತೋಷ ಹಳ್ಳೂರ ದೂರುದಾರನಿಗೆ ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಭತರ ರೆಡ್ಡಿ ನೇತೃತ್ವದ ತಂಡ ಬುಧವಾರ ಅಥಣಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿತು.</p>.<p>ಅಥಣಿ ನಿವಾಸಿ ಮೀರಸಾಬ ಮುಜಾವರ ಲೋಕಾಯುಕ್ತ ಕಚೇರಿಗೆ ಸಿಪಿಐ ಸಂತೋಷ ಹಳ್ಳೂರ ಮೇಲೆ ದೂರು ದಾಖಲಿಸಿದ್ದರು. ಅಥಣಿ ನಿವಾಸಿ ಅನುಪಕುಮಾರ ನಾಯರ ಎಂಬುವರಿಗೆ ಮೀರಸಾಬ ಮುಜಾವರ ಎರಡು ಸೈಟ್ ಖರೀದಿ ವ್ಯವಹಾರಕ್ಕೆ ಸಂಬಂಧಿಸಿದಂತೆ ₹20 ಲಕ್ಷ ನೀಡಿದ್ದರು.</p>.<p>2 ಸೈಟ್ ಕೊಡಿಸುವುದಾಗಿ ಹೇಳಿ ಅನುಪಕುಮಾರ ಹಣ ಪಡೆದಿದ್ದರು. ಅವಧಿ ಮುಗಿದರೂ ಸೈಟ್ ಕೊಡಿಸದೇ, ಹಣವೂ ಮರಳಿಸದೇ ಸತಾಯಿಸುತ್ತಿದ್ದಾಗ, ಅನುಪಕುಮಾರ ಅವರಿಂದ ಮೀರಸಾಬ ಅವರಿಗೆ ಎಲ್ಲಾ ಹಣವನ್ನ ಮರಳಿ ಕೊಡಿಸುವಲ್ಲಿ ಸಿಪಿಐ ಸಂತೋಷ ಹಳ್ಳೂರ ಸಹಾಯ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ₹1 ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ ಮೀರಸಾಬ ಆಡಿಯೊವೊಂದರ ಆಧಾರದ ಮೇಲೆ ದೂರು ದಾಖಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ:</strong> ಸೈಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ ಮಾಡಿದ್ದ ಆರೋಪಿಯಿಂದ ದೂರುದಾರನಿಗೆ ಹಣ ಕೊಡಿಸುವಲ್ಲಿ ಸಹಾಯ ಮಾಡಿದ್ದ ಅಥಣಿ ಸಿಪಿಐ ಸಂತೋಷ ಹಳ್ಳೂರ ದೂರುದಾರನಿಗೆ ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಭತರ ರೆಡ್ಡಿ ನೇತೃತ್ವದ ತಂಡ ಬುಧವಾರ ಅಥಣಿ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿತು.</p>.<p>ಅಥಣಿ ನಿವಾಸಿ ಮೀರಸಾಬ ಮುಜಾವರ ಲೋಕಾಯುಕ್ತ ಕಚೇರಿಗೆ ಸಿಪಿಐ ಸಂತೋಷ ಹಳ್ಳೂರ ಮೇಲೆ ದೂರು ದಾಖಲಿಸಿದ್ದರು. ಅಥಣಿ ನಿವಾಸಿ ಅನುಪಕುಮಾರ ನಾಯರ ಎಂಬುವರಿಗೆ ಮೀರಸಾಬ ಮುಜಾವರ ಎರಡು ಸೈಟ್ ಖರೀದಿ ವ್ಯವಹಾರಕ್ಕೆ ಸಂಬಂಧಿಸಿದಂತೆ ₹20 ಲಕ್ಷ ನೀಡಿದ್ದರು.</p>.<p>2 ಸೈಟ್ ಕೊಡಿಸುವುದಾಗಿ ಹೇಳಿ ಅನುಪಕುಮಾರ ಹಣ ಪಡೆದಿದ್ದರು. ಅವಧಿ ಮುಗಿದರೂ ಸೈಟ್ ಕೊಡಿಸದೇ, ಹಣವೂ ಮರಳಿಸದೇ ಸತಾಯಿಸುತ್ತಿದ್ದಾಗ, ಅನುಪಕುಮಾರ ಅವರಿಂದ ಮೀರಸಾಬ ಅವರಿಗೆ ಎಲ್ಲಾ ಹಣವನ್ನ ಮರಳಿ ಕೊಡಿಸುವಲ್ಲಿ ಸಿಪಿಐ ಸಂತೋಷ ಹಳ್ಳೂರ ಸಹಾಯ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ₹1 ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ ಮೀರಸಾಬ ಆಡಿಯೊವೊಂದರ ಆಧಾರದ ಮೇಲೆ ದೂರು ದಾಖಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>