<p><strong>ಬೆಳಗಾವಿ:</strong> ‘ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಅವರನ್ನು ಬದಲಾವಣೆ ಮಾಡಲಾಗುತ್ತದೆ ಎನ್ನುವುದು ಕೆಲವರ ಹಗಲುಗನಸಷ್ಟೆ’ ಎಂದು ನವದೆಹಲಿಯಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ ಹೇಳಿದರು.</p>.<p>‘ಅವರನ್ನು ಆ ಸ್ಥಾನದಿಂದ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಇದನ್ನು ಪಕ್ಷದ ವರಿಷ್ಠರು ಕೂಡ ಸ್ಪಷ್ಟಪಡಿಸಿದ್ದಾರೆ. ಬರುವ ವಿಧಾನಸಭೆ ಚುನಾವಣೆಯನ್ನೂ ಅವರ ನೇತೃತ್ವದಲ್ಲಿಯೇ ನಡೆಸಲಾಗುವುದು’ ಎಂದು ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಯಡಿಯೂರಪ್ಪ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ವಿರುದ್ಧ ವರಿಷ್ಠರು ಕ್ರಮ ಕೈಗೊಳ್ಳಲಿದ್ದಾರೆ’ ಎಂದರು.</p>.<p>‘ಮುಂಬರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ದಿ.ಸುರೇಶ ಅಂಗಡಿ ಅಂಗಡಿ ಅವರ ಕುಟುಂಬದವರಿಗೇ ಟಿಕೆಟ್ ಕೊಡಬೇಕು ಎಂದು ವರಿಷ್ಠರ ಬಳಿ ಅಭಿಪ್ರಾಯ ತಿಳಿಸಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರೂ ಇದನ್ನು ಹೇಳಿದ್ದಾರೆ. ಮುಖ್ಯಮಂತ್ರಿಗೂ ಈ ನಿಟ್ಟಿನಲ್ಲಿಯೇ ಅಪೇಕ್ಷೆ ಇದೆ. ನಾನು ಟಿಕೆಟ್ ಆಕಾಂಕ್ಷಿಯಲ್ಲ; ಅಪೇಕ್ಷೆಯೂ ಇಲ್ಲ. ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾವೆಲ್ಲರೂ ಬದ್ಧವಾಗಿದ್ದೇವೆ’ ಎಂದರು.</p>.<p>‘ಕಾಂಗ್ರೆಸ್ನ ಐವರು ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ’ ಎಂಬ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸವದಿ ಹೇಳಿದ್ದು ಸತ್ಯಕ್ಕೆ ಸಮೀಪವಾಗಿದೆ. ಕಾಂಗ್ರೆಸ್ ಸೇರಿದಂತೆ ಬೇರೆ ಬೇರೆ ಪಕ್ಷಗಳ ನಾಯಕರೂ ಬಿಜೆಪಿ ಸೇರಲಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಅವರನ್ನು ಬದಲಾವಣೆ ಮಾಡಲಾಗುತ್ತದೆ ಎನ್ನುವುದು ಕೆಲವರ ಹಗಲುಗನಸಷ್ಟೆ’ ಎಂದು ನವದೆಹಲಿಯಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ ಹೇಳಿದರು.</p>.<p>‘ಅವರನ್ನು ಆ ಸ್ಥಾನದಿಂದ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಇದನ್ನು ಪಕ್ಷದ ವರಿಷ್ಠರು ಕೂಡ ಸ್ಪಷ್ಟಪಡಿಸಿದ್ದಾರೆ. ಬರುವ ವಿಧಾನಸಭೆ ಚುನಾವಣೆಯನ್ನೂ ಅವರ ನೇತೃತ್ವದಲ್ಲಿಯೇ ನಡೆಸಲಾಗುವುದು’ ಎಂದು ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಯಡಿಯೂರಪ್ಪ ಅವರ ಬಗ್ಗೆ ಹಗುರವಾಗಿ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ವಿರುದ್ಧ ವರಿಷ್ಠರು ಕ್ರಮ ಕೈಗೊಳ್ಳಲಿದ್ದಾರೆ’ ಎಂದರು.</p>.<p>‘ಮುಂಬರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ದಿ.ಸುರೇಶ ಅಂಗಡಿ ಅಂಗಡಿ ಅವರ ಕುಟುಂಬದವರಿಗೇ ಟಿಕೆಟ್ ಕೊಡಬೇಕು ಎಂದು ವರಿಷ್ಠರ ಬಳಿ ಅಭಿಪ್ರಾಯ ತಿಳಿಸಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರೂ ಇದನ್ನು ಹೇಳಿದ್ದಾರೆ. ಮುಖ್ಯಮಂತ್ರಿಗೂ ಈ ನಿಟ್ಟಿನಲ್ಲಿಯೇ ಅಪೇಕ್ಷೆ ಇದೆ. ನಾನು ಟಿಕೆಟ್ ಆಕಾಂಕ್ಷಿಯಲ್ಲ; ಅಪೇಕ್ಷೆಯೂ ಇಲ್ಲ. ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾವೆಲ್ಲರೂ ಬದ್ಧವಾಗಿದ್ದೇವೆ’ ಎಂದರು.</p>.<p>‘ಕಾಂಗ್ರೆಸ್ನ ಐವರು ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ’ ಎಂಬ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸವದಿ ಹೇಳಿದ್ದು ಸತ್ಯಕ್ಕೆ ಸಮೀಪವಾಗಿದೆ. ಕಾಂಗ್ರೆಸ್ ಸೇರಿದಂತೆ ಬೇರೆ ಬೇರೆ ಪಕ್ಷಗಳ ನಾಯಕರೂ ಬಿಜೆಪಿ ಸೇರಲಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>