ಕೋವಿಡ್- 19 ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದೇವೆ. ಏ.18ರಂದು ಸರ್ವ ಪಕ್ಷಗಳ ಸಭೆ ಕರೆದಿದ್ದೇನೆ. ಎಲ್ಲರೊಂದಿಗೂ ಚರ್ಚಿಸಿ, ಕೊರೊನಾ ರಾತ್ರಿ ಕರ್ಫ್ಯೂ ಅನ್ನು ಇತರ ಜಿಲ್ಲೆಗಳಿಗೂ ವಿಸ್ತರಿಸಲು ಯೋಚಿಸಲಾಗುತ್ತಿದೆ. ಜನರು ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಳ್ಳುವ ಮೂಲಕ ಸೋಂಕು ಹರಡದಂತೆ ನೋಡಿಕೊಳ್ಳಬೇಕು. ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಕೋರಿದರು.