‘ಕಣಬರ್ಗಿಯಲ್ಲಿ ಕೈಗೊಂಡಿರುವ ಯೋಜನೆ ಸಂಖ್ಯೆ 61ಕ್ಕೆ (ಬಡಾವಣೆ ಅಭಿವೃದ್ಧಿ) ಬಿ.ಎಸ್. ಯಡಿಯೂರಪ್ಪ, ಅಲ್ಲೇ ನಿರ್ಮಿಸಲಿರುವ ಬಹುಮಹಡಿ ಸಮುಚ್ಛಯಗಳಿಗೆ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ ಆಂಗಡಿ ಹಾಗೂ ರಾಮತೀರ್ಥ ನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂತರರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನಕ್ಕೆ ಹಾಕಿ ಪಟು ಬಂಡು ಪಾಟೀಲ ಅವರ ಹೆಸರು ನಾಮಕರಣ ಮಾಡಲು ಅನುಮತಿ ಕೋರಿ ಸಭೆಯಲ್ಲಿ ಚರ್ಚಿಸಿ ಪ್ರಸ್ತಾವ ಸಲ್ಲಿಸಲಾಗಿತ್ತು’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.