<p><strong>ಬೆಳಗಾವಿ:</strong> ‘ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ(ಬುಡಾ) ವ್ಯಾಪ್ತಿಯಲ್ಲಿ ನಿರ್ಮಾಣವಾಗಲಿರುವ ಹೊಸ ಬಡಾವಣೆಗಳಿಗೆ ಉದ್ಯಾನ, ರಸ್ತೆ, ಒಳಚರಂಡಿ ಮತ್ತಿತರ ಸೌಕರ್ಯಗಳನ್ನು ಒದಗಿಸಬೇಕಿರುವ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಈ ಬಗ್ಗೆ ಅಧಿಕಾರಿಗಳೂ ಪರಿಶೀಲಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನಿರ್ದೇಶನ ನೀಡಿದರು.</p>.<p>ಇಲ್ಲಿನ ಬುಡಾ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ನಿಯಮ ಬಾಹಿರವಾಗಿರುವ ಬಡಾವಣೆಗಳಿಗೆ ಅನುಮತಿ ನೀಡಬಾರದು. ಅಧಿಕಾರಿಗಳು ಪರಿಶೀಲಿಸಿದ ನಂತರವೇ, ಪ್ರಾಧಿಕಾರದಿಂದ ಅನುಮೋದನೆ ನೀಡಬೇಕು’ ಎಂದು ಹೇಳಿದರು.</p>.<p>ನಿವೇಶನಗಳ ದರ ನಿಗದಿ, ಹಂಚಿಕೆ ಕುರಿತು ಮಾಹಿತಿ ಪಡೆದ ಸಚಿವರು, ಇ-ಹರಾಜು ಹಾಗೂ ಮ್ಯಾನ್ಯುವಲ್ ಹರಾಜು ಪ್ರಕ್ರಿಯೆ ವೇಳೆ ಪಾಲಿಸಬೇಕಿರುವ ನಿಯಮಗಳ ಬಗ್ಗೆ ಚರ್ಚಿಸಿದರು.</p>.<p>‘ಬೆಳಗಾವಿ ನಗರದಲ್ಲಿ ವಿಶಾಲವಾದ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು. ಇದಕ್ಕೆ ಅಗತ್ಯವಾಗಿರುವ ಜಮೀನು ಗುರುತಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ‘ಹೊಸ ಬಡಾವಣೆಗಳಲ್ಲಿ ಉದ್ಯಾನ, ಒಳಚರಂಡಿ, ರಸ್ತೆ, ವಿದ್ಯುತ್ ಸೇರಿದಂತೆ ಎಲ್ಲ ಮೂಲಸೌಕರ್ಯಗಳಿರಬೇಕು. ಇವುಗಳನ್ನು ಒದಗಿಸದ ಬಡಾವಣೆಗಳಿಗೆ ಅನುಮತಿ ನೀಡಲೇಬಾರದು’ ಎಂದು ಹೇಳಿದರು.</p>.<p>ಶಾಸಕ ಅಭಯ ಪಾಟೀಲ, ‘ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಳ್ಳುವ ಯೋಜನೆಗಳು ಹಾಗೂ ಅವುಗಳಿಗೆ ಮಂಜೂರಾತಿ ನೀಡುವ ಕುರಿತು ಸಂಬಂಧಿತ ಶಾಸಕರ ಗಮನಕ್ಕೆ ತಂದು ನಿರ್ಣಯ ಕೈಗೊಳ್ಳಬೇಕು. ಈಗಾಗಲೇ ನಿರ್ಮಾಣಗೊಂಡ ಬಡಾವಣೆಗಳಲ್ಲಿ ನಿಯಮಾವಳಿ ಪಾಲನೆಯಾದ ಕುರಿತು ಸಮೀಕ್ಷೆ ಕೈಗೊಳ್ಳಬೇಕು’ ಎಂದು ಸೂಚಿಸಿದರು.</p>.<p>ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ‘ಕಣಬರ್ಗಿ ಬಡಾವಣೆ ಅಭಿವೃದ್ಧಿಗೆ ₹87 ಕೋಟಿ ಅನುದಾನ ಮೀಸಲಿಡಲಾಗಿದೆ. ಇತರೆ ಅಭಿವೃದ್ಧಿ ಕೆಲಸಗಳಿಗೆ ₹9 ಕೋಟಿ ಅನುದಾನ ಲಭ್ಯವಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ಹೊರತುಪಡಿಸಿ, ಉಳಿದ ಕಾಮಗಾರಿಗಳಿಗೆ ಅದನ್ನು ಬಳಸಬಹುದು’ ಎಂದರು. ಶಾಸಕ ಆಸೀಫ್ ಸೇಠ್ ಇತರರಿದ್ದರು.</p>.<p>ನಂತರ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟಿನ ವ್ಯವಸ್ಥಾಪನಾ ಮತ್ತು ಆಡಳಿತ ಸಮಿತಿ ಸಭೆ ನಡೆಯಿತು. ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಆಸೀಫ್ ಸೇಠ್, ವಿಠ್ಠಲ ಹಲಗೇಕರ, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಭಾಗವಹಿಸಿದ್ದರು.</p>.<p>ಈ ಸಭೆಗಳು ಮುಗಿದ ನಂತರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೊಸ ವಾಹನದಲ್ಲಿ ಸತೀಶ ಜಾರಕಿಹೊಳಿ ತೆರಳಿ, ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕಾಗಿ ಅಶೋಕ ನಗರದ ಕ್ರೀಡಾ ಸಂಕೀರ್ಣ ಬಳಿಯ ಜಾಗ ಪರಿಶೀಲಿಸಿದರು.</p>.<div><blockquote>ಬೆಳಗಾವಿಯಲ್ಲಿನ ನೂರಾರು ಮನೆಗಳನ್ನು ಕಾನೂನು ಬಾಹಿರವಾಗಿ ತೆರವುಗೊಳಿಸಿ ಜನರಿಗೆ ಸಮಸ್ಯೆ ತಂದೊಡ್ಡಿದ ಕುರಿತು ಸರ್ಕಾರದ ಗಮನಕ್ಕೆ ತಂದಿದ್ದೇವೆ. ಆ ಮನೆಗಳನ್ನು ಯಾವಾಗ ಯಾರು ನೆಲಸಮ ಮಾಡಿದರು ಎಂಬುದನ್ನು ತಿಳಿಯಬೇಕಿದೆ. ತಪ್ಪಿತಸ್ಥರ ವಿರುದ್ಧ ಶೀಘ್ರವೇ ಕಾನೂನು ಕ್ರಮ ಜರುಗಿಸುತ್ತೇವೆ</blockquote><span class="attribution"> –ಸತೀಶ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ(ಬುಡಾ) ವ್ಯಾಪ್ತಿಯಲ್ಲಿ ನಿರ್ಮಾಣವಾಗಲಿರುವ ಹೊಸ ಬಡಾವಣೆಗಳಿಗೆ ಉದ್ಯಾನ, ರಸ್ತೆ, ಒಳಚರಂಡಿ ಮತ್ತಿತರ ಸೌಕರ್ಯಗಳನ್ನು ಒದಗಿಸಬೇಕಿರುವ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಈ ಬಗ್ಗೆ ಅಧಿಕಾರಿಗಳೂ ಪರಿಶೀಲಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನಿರ್ದೇಶನ ನೀಡಿದರು.</p>.<p>ಇಲ್ಲಿನ ಬುಡಾ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ನಿಯಮ ಬಾಹಿರವಾಗಿರುವ ಬಡಾವಣೆಗಳಿಗೆ ಅನುಮತಿ ನೀಡಬಾರದು. ಅಧಿಕಾರಿಗಳು ಪರಿಶೀಲಿಸಿದ ನಂತರವೇ, ಪ್ರಾಧಿಕಾರದಿಂದ ಅನುಮೋದನೆ ನೀಡಬೇಕು’ ಎಂದು ಹೇಳಿದರು.</p>.<p>ನಿವೇಶನಗಳ ದರ ನಿಗದಿ, ಹಂಚಿಕೆ ಕುರಿತು ಮಾಹಿತಿ ಪಡೆದ ಸಚಿವರು, ಇ-ಹರಾಜು ಹಾಗೂ ಮ್ಯಾನ್ಯುವಲ್ ಹರಾಜು ಪ್ರಕ್ರಿಯೆ ವೇಳೆ ಪಾಲಿಸಬೇಕಿರುವ ನಿಯಮಗಳ ಬಗ್ಗೆ ಚರ್ಚಿಸಿದರು.</p>.<p>‘ಬೆಳಗಾವಿ ನಗರದಲ್ಲಿ ವಿಶಾಲವಾದ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು. ಇದಕ್ಕೆ ಅಗತ್ಯವಾಗಿರುವ ಜಮೀನು ಗುರುತಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ‘ಹೊಸ ಬಡಾವಣೆಗಳಲ್ಲಿ ಉದ್ಯಾನ, ಒಳಚರಂಡಿ, ರಸ್ತೆ, ವಿದ್ಯುತ್ ಸೇರಿದಂತೆ ಎಲ್ಲ ಮೂಲಸೌಕರ್ಯಗಳಿರಬೇಕು. ಇವುಗಳನ್ನು ಒದಗಿಸದ ಬಡಾವಣೆಗಳಿಗೆ ಅನುಮತಿ ನೀಡಲೇಬಾರದು’ ಎಂದು ಹೇಳಿದರು.</p>.<p>ಶಾಸಕ ಅಭಯ ಪಾಟೀಲ, ‘ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಳ್ಳುವ ಯೋಜನೆಗಳು ಹಾಗೂ ಅವುಗಳಿಗೆ ಮಂಜೂರಾತಿ ನೀಡುವ ಕುರಿತು ಸಂಬಂಧಿತ ಶಾಸಕರ ಗಮನಕ್ಕೆ ತಂದು ನಿರ್ಣಯ ಕೈಗೊಳ್ಳಬೇಕು. ಈಗಾಗಲೇ ನಿರ್ಮಾಣಗೊಂಡ ಬಡಾವಣೆಗಳಲ್ಲಿ ನಿಯಮಾವಳಿ ಪಾಲನೆಯಾದ ಕುರಿತು ಸಮೀಕ್ಷೆ ಕೈಗೊಳ್ಳಬೇಕು’ ಎಂದು ಸೂಚಿಸಿದರು.</p>.<p>ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ‘ಕಣಬರ್ಗಿ ಬಡಾವಣೆ ಅಭಿವೃದ್ಧಿಗೆ ₹87 ಕೋಟಿ ಅನುದಾನ ಮೀಸಲಿಡಲಾಗಿದೆ. ಇತರೆ ಅಭಿವೃದ್ಧಿ ಕೆಲಸಗಳಿಗೆ ₹9 ಕೋಟಿ ಅನುದಾನ ಲಭ್ಯವಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ಹೊರತುಪಡಿಸಿ, ಉಳಿದ ಕಾಮಗಾರಿಗಳಿಗೆ ಅದನ್ನು ಬಳಸಬಹುದು’ ಎಂದರು. ಶಾಸಕ ಆಸೀಫ್ ಸೇಠ್ ಇತರರಿದ್ದರು.</p>.<p>ನಂತರ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟಿನ ವ್ಯವಸ್ಥಾಪನಾ ಮತ್ತು ಆಡಳಿತ ಸಮಿತಿ ಸಭೆ ನಡೆಯಿತು. ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಆಸೀಫ್ ಸೇಠ್, ವಿಠ್ಠಲ ಹಲಗೇಕರ, ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಭಾಗವಹಿಸಿದ್ದರು.</p>.<p>ಈ ಸಭೆಗಳು ಮುಗಿದ ನಂತರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೊಸ ವಾಹನದಲ್ಲಿ ಸತೀಶ ಜಾರಕಿಹೊಳಿ ತೆರಳಿ, ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕಾಗಿ ಅಶೋಕ ನಗರದ ಕ್ರೀಡಾ ಸಂಕೀರ್ಣ ಬಳಿಯ ಜಾಗ ಪರಿಶೀಲಿಸಿದರು.</p>.<div><blockquote>ಬೆಳಗಾವಿಯಲ್ಲಿನ ನೂರಾರು ಮನೆಗಳನ್ನು ಕಾನೂನು ಬಾಹಿರವಾಗಿ ತೆರವುಗೊಳಿಸಿ ಜನರಿಗೆ ಸಮಸ್ಯೆ ತಂದೊಡ್ಡಿದ ಕುರಿತು ಸರ್ಕಾರದ ಗಮನಕ್ಕೆ ತಂದಿದ್ದೇವೆ. ಆ ಮನೆಗಳನ್ನು ಯಾವಾಗ ಯಾರು ನೆಲಸಮ ಮಾಡಿದರು ಎಂಬುದನ್ನು ತಿಳಿಯಬೇಕಿದೆ. ತಪ್ಪಿತಸ್ಥರ ವಿರುದ್ಧ ಶೀಘ್ರವೇ ಕಾನೂನು ಕ್ರಮ ಜರುಗಿಸುತ್ತೇವೆ</blockquote><span class="attribution"> –ಸತೀಶ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>