<p><strong>ಬೆಳಗಾವಿ</strong>: ಖೋಟಾ ನೋಟಿನ ಬಂಡಲ್ಗಳನ್ನು ಸಿದ್ಧಪಡಿಸಿದ್ದ ಹಾಗೂ ಜನರಿಗೆ ಮೋಸ ಮಾಡಲು ಯೋಜಿಸಿದ್ದ ಆರೋಪದ ಮೇಲೆ ನಾಲ್ವರನ್ನು ಜಿಲ್ಲೆಯ ಘಟಪ್ರಭಾ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>‘ಗೋಕಾಕ ತಾಲ್ಲೂಕು ದೂಪದಾಳದ ಮಹಮದಇಸಾಕ ದೇಸಾಯಿ, ಮುನಾಫ ರಫೀಕ, ರಾಯಬಾಗ ತಾಲ್ಲೂಕು ಸಿದ್ದಾಪೂರದ ಗುಂಡು ಸದಾಶಿವ ಪಾಟೀಲ ಮತ್ತು ಗೋಕಾಕದ ಆದಿಜಾಂಬವ ನಗರದ ಮಲ್ಲಿಕಾರ್ಜುನ ಕನ್ಮಡ್ಡಿ ಬಂಧಿತರು. ಅವರಿಂದ ಪೇಪಲ್ ಬಂಡಲ್ಗಳು, ತಲಾ 2 ಕಾರ್ ಹಾಗೂ ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.</p>.<p>‘ಇವರು ಎರಡೂ ಬದಿಯಲ್ಲಿ ₹ 500 ಮುಖಬೆಲೆಯ ಅಸಲಿ ನೋಟುಗಳನ್ನು ಹಾಕಿ ಒಳಗಡೆ ಕಾಗದದ ಪೇಪರ್ಗಳನ್ನಿಟ್ಟು ನೋಟಿನ ಬಂಡಲ್ಗಳಂತೆ ಕಾಣುವಂತೆ ತಯಾರಿಸಿದ್ದರು. ಅವು ಖೋಟಾ ನೋಟುಗಳೆಂದು ಹೇಳಿ ₹ 1 ಲಕ್ಷ ಅಸಲಿ ನೋಟುಗಳನ್ನು ಪಡೆದುಕೊಂಡು ತಮ್ಮ ಬಳಿ ಇರುವ ಬಂಡಲ್ಗಳನ್ನು ಯಾರಿಗೋ ಕೊಡಲು ಯೋಜಿಸಿದ್ದರು. ದೂಪದಾಳದ ಮಹಮದಇಸಾಕ ಅವರ ಮನೆಯಲ್ಲಿ ಬಂಡಲ್ಗಳನ್ನು ತಯಾರಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>ಪಿಎಸ್ಐ ಎಚ್.ವೈ. ಬಾಲದಂಡಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಖೋಟಾ ನೋಟಿನ ಬಂಡಲ್ಗಳನ್ನು ಸಿದ್ಧಪಡಿಸಿದ್ದ ಹಾಗೂ ಜನರಿಗೆ ಮೋಸ ಮಾಡಲು ಯೋಜಿಸಿದ್ದ ಆರೋಪದ ಮೇಲೆ ನಾಲ್ವರನ್ನು ಜಿಲ್ಲೆಯ ಘಟಪ್ರಭಾ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>‘ಗೋಕಾಕ ತಾಲ್ಲೂಕು ದೂಪದಾಳದ ಮಹಮದಇಸಾಕ ದೇಸಾಯಿ, ಮುನಾಫ ರಫೀಕ, ರಾಯಬಾಗ ತಾಲ್ಲೂಕು ಸಿದ್ದಾಪೂರದ ಗುಂಡು ಸದಾಶಿವ ಪಾಟೀಲ ಮತ್ತು ಗೋಕಾಕದ ಆದಿಜಾಂಬವ ನಗರದ ಮಲ್ಲಿಕಾರ್ಜುನ ಕನ್ಮಡ್ಡಿ ಬಂಧಿತರು. ಅವರಿಂದ ಪೇಪಲ್ ಬಂಡಲ್ಗಳು, ತಲಾ 2 ಕಾರ್ ಹಾಗೂ ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.</p>.<p>‘ಇವರು ಎರಡೂ ಬದಿಯಲ್ಲಿ ₹ 500 ಮುಖಬೆಲೆಯ ಅಸಲಿ ನೋಟುಗಳನ್ನು ಹಾಕಿ ಒಳಗಡೆ ಕಾಗದದ ಪೇಪರ್ಗಳನ್ನಿಟ್ಟು ನೋಟಿನ ಬಂಡಲ್ಗಳಂತೆ ಕಾಣುವಂತೆ ತಯಾರಿಸಿದ್ದರು. ಅವು ಖೋಟಾ ನೋಟುಗಳೆಂದು ಹೇಳಿ ₹ 1 ಲಕ್ಷ ಅಸಲಿ ನೋಟುಗಳನ್ನು ಪಡೆದುಕೊಂಡು ತಮ್ಮ ಬಳಿ ಇರುವ ಬಂಡಲ್ಗಳನ್ನು ಯಾರಿಗೋ ಕೊಡಲು ಯೋಜಿಸಿದ್ದರು. ದೂಪದಾಳದ ಮಹಮದಇಸಾಕ ಅವರ ಮನೆಯಲ್ಲಿ ಬಂಡಲ್ಗಳನ್ನು ತಯಾರಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>ಪಿಎಸ್ಐ ಎಚ್.ವೈ. ಬಾಲದಂಡಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>