ಬೆಳಗಾವಿ| ಬಸ್– ಬೈಕ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಾರೂಗೇರಿ ಹೊರವಲಯದಲ್ಲಿ ಶನಿವಾರ, ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾಯಬಾಗ ತಾಲ್ಲೂಕಿನ ಹಾಲಶಿರಗೂರು ಗ್ರಾಮದವರಾದ ಭಗವಂತ ಶಿವರಾಯ ಕಾಂಬಳೆ (45), ವಿಶ್ವನಾಥ ಎಸ್. ಕಾಂಬಳೆ (24) ಹಾಗೂ ಕುಮಾರ ಬಾಳಪ್ಪ ಕಾಂಬಳೆ (35) ಮೃತಪಟ್ಟವರು. ಮೂವರೂ ಸಹೋದರ ಸಂಬಂಧಿಗಳಾಗಿದ್ದಾರೆ.
ಸರ್ಕಾರಿ ಬಸ್ ಹಾಲಗಿ ಕಡೆಯಿಂದ ಸಾಂಗ್ಲಿ ಕಡೆಗೆ ಹೊರಟಿತ್ತು. ಮೂವರೂ ಸಹೋದರ ಸಂಬಂಧಿಗಳು ಒಂದೇ ಬೈಕಿನಲ್ಲಿ ಹಾಲಶಿರಗೂರು ಕಡೆಗೆ ಹೊರಟಿದ್ದರು. ಹಾರೂಗೇರಿ– ಕುಡಚಿ ಹೆದ್ದಾರಿ ಮೇಲೆ ವೇಗವಾಗಿ ಬಂದ ವಾಹನಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದವು.
ಬಸ್ಸಿನ ಚಕ್ರಕ್ಕೆ ಸಿಲುಕಿದ ಮೂವರೂ ಸಹೋದರು ಸ್ಥಳದಲ್ಲೇ ಕೊನೆಯುಸಿರೆಳೆದರು. ಅಪಘಾತ ತಪ್ಪಿಸಲು ಬಸ್ ಚಾಲಕ ವಾಹನವನ್ನು ರಸ್ತೆ ಬದಿಗೆ ಇಳಿಸಿದರು. ಕೂದಲೆಳೆ ಅಂದರದಲ್ಲಿ ಬಸ್ ಪಲ್ಟಿಯಾಗುವುದು ತಪ್ಪಿತು ಎಂದು ಪ್ರಯಾಣಿಕರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಕುಡಚಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.