ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಬಸ್‌ ಹರಿದು ಇಬ್ಬರು ಭಕ್ತರ ಸಾವು

Last Updated 11 ಜನವರಿ 2020, 10:07 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ಸವದತ್ತಿ ಬಳಿಯ ಯಲ್ಲಮ್ಮನ ಗುಡ್ಡ– ಜೋಗುಳಬಾವಿ ಮಾರ್ಗದಲ್ಲಿ ಶುಕ್ರವಾರ ಸಂಜೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ಡಿಪೊಗೆ ಸೇರಿದ ಬಸ್‌ ಹರಿದ ಪರಿಣಾಮ ಮಹಿಳೆಯೂ ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದಾರೆ.

ಬೆಳಗಾವಿ ನಗರದ ಶಹಾಪುರದ ನಿಕಿತಾ ರಮೇಶ ಹದಗಲ್‌ (25) ಹಾಗೂ ಬಸಪ್ಪ ವೆಂಕಪ್ಪ ಹಳೇಮನಿ (34) ಅವರು ಮೃತರಾಗಿದ್ದಾರೆ. ಯಲ್ಲಮ್ಮನ ಜಾತ್ರೆ ಮುಗಿಸಿಕೊಡು ರಸ್ತೆಯ ಬದಿಯಿಂದ ಇವರು ನಡೆದುಕೊಂಡು ಹೋಗುತ್ತಿದ್ದಾಗ, ಹಿಂಬದಿಯಿಂದ ಬಸ್‌ ಢಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಬಸ್‌ ಯಲ್ಲಮ್ಮನಗುಡ್ಡದಿಂದ ಧಾರವಾಡಕ್ಕೆ ಹೊರಟಿತ್ತು. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT