<p><strong>ಬೆಳಗಾವಿ:</strong> ಇಲ್ಲಿನ ರಾಮತೀರ್ಥ ನಗರ ಬಡಾವಣೆಯ ಮೊದಲ ಕ್ರಾಸ್ನಲ್ಲಿ ಬಹುದಿನಗಳಿಂದ ಉಪಯೋಗಕ್ಕೆ ಬಾರದಂತಾಗಿದ್ದ ತಂಗುದಾಣವನ್ನು, ಸ್ಥಳೀಯರ ಆಶಯದಂತೆ ಗ್ರಂಥಾಲಯ ಕಟ್ಟಡವನ್ನಾಗಿ ರೂಪಿಸಲಾಗಿದೆ.</p>.<p>ತಂಗುದಾಣ ಬಳಕೆಯಾಗದ ಕುರಿತು ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ಸ್ಥಳೀಯರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮನವಿಯನ್ನೂ ಸಲ್ಲಿಸಿದ್ದರು.</p>.<p>ನಿವಾಸಿಗಳು ಸ್ನೇಹ ಸಮಾಜ ಸೇವಾ ಸಂಘಟನೆಯ ಮೂಲಕ ಮಾಜಿ ಮೇಯರ್ ಎನ್.ಬಿ. ನಿರ್ವಾಣಿ, ಸಂಘಟನೆಯ ಅಧ್ಯಕ್ಷ ಸುರೇಶ ಉರಬಿನಹಟ್ಟಿ ನೇತೃತ್ವದಲ್ಲಿ ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿ, ಶಾಸಕ ಅನಿಲ ಬೆನಕೆ ಮತ್ತು ಬೂಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಅವರನ್ನು ಒತ್ತಾಯಿಸಿದ್ದರು. ‘ರಸ್ತೆಯಿಂದ ದೂರದಲ್ಲಿರುವ ತಂಗುದಾಣ ಬಳಕೆ ಆಗುತ್ತಿಲ್ಲ. ಅದನ್ನು ಗ್ರಂಥಾಲಯವಾಗಿ ನಿರ್ಮಿಸಿಕೊಟ್ಟರೆ ಅನುಕೂಲ ಆಗುತ್ತದೆ’ ಎಂಬ ಸಲಹೆಯನ್ನೂ ನೀಡಿದ್ದರು. ಅದರಂತೆ ಬುಡಾದಿಂದ ಕ್ರಮ ವಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಇಲ್ಲಿನ ರಾಮತೀರ್ಥ ನಗರ ಬಡಾವಣೆಯ ಮೊದಲ ಕ್ರಾಸ್ನಲ್ಲಿ ಬಹುದಿನಗಳಿಂದ ಉಪಯೋಗಕ್ಕೆ ಬಾರದಂತಾಗಿದ್ದ ತಂಗುದಾಣವನ್ನು, ಸ್ಥಳೀಯರ ಆಶಯದಂತೆ ಗ್ರಂಥಾಲಯ ಕಟ್ಟಡವನ್ನಾಗಿ ರೂಪಿಸಲಾಗಿದೆ.</p>.<p>ತಂಗುದಾಣ ಬಳಕೆಯಾಗದ ಕುರಿತು ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. ಸ್ಥಳೀಯರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮನವಿಯನ್ನೂ ಸಲ್ಲಿಸಿದ್ದರು.</p>.<p>ನಿವಾಸಿಗಳು ಸ್ನೇಹ ಸಮಾಜ ಸೇವಾ ಸಂಘಟನೆಯ ಮೂಲಕ ಮಾಜಿ ಮೇಯರ್ ಎನ್.ಬಿ. ನಿರ್ವಾಣಿ, ಸಂಘಟನೆಯ ಅಧ್ಯಕ್ಷ ಸುರೇಶ ಉರಬಿನಹಟ್ಟಿ ನೇತೃತ್ವದಲ್ಲಿ ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿ, ಶಾಸಕ ಅನಿಲ ಬೆನಕೆ ಮತ್ತು ಬೂಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಅವರನ್ನು ಒತ್ತಾಯಿಸಿದ್ದರು. ‘ರಸ್ತೆಯಿಂದ ದೂರದಲ್ಲಿರುವ ತಂಗುದಾಣ ಬಳಕೆ ಆಗುತ್ತಿಲ್ಲ. ಅದನ್ನು ಗ್ರಂಥಾಲಯವಾಗಿ ನಿರ್ಮಿಸಿಕೊಟ್ಟರೆ ಅನುಕೂಲ ಆಗುತ್ತದೆ’ ಎಂಬ ಸಲಹೆಯನ್ನೂ ನೀಡಿದ್ದರು. ಅದರಂತೆ ಬುಡಾದಿಂದ ಕ್ರಮ ವಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>