<p><strong>ಬೆಳಗಾವಿ:</strong> ಜಿಲ್ಲೆಯ ಸಂಕೇಶ್ವರದ ಎಸ್.ಡಿ. ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ಬಸ್ಸಿನ ‘ಬ್ರೇಕ್ಫೇಲ್’ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದಾಗಿ ಎಲ್ಲ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ.</p>.<p>ಮಹಾರಾಷ್ಟ್ರದ ಮಹಾಬಲೇಶ್ವರಕ್ಕೆ 50 ವಿದ್ಯಾರ್ಥಿಗಳು ಶಿಕ್ಷಕರ ಜತೆಗೆ ಬುಧವಾರ ನಸುಕಿನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಸಾರಿಗೆ ಸಂಸ್ಥೆಯ ಸಂಕೇಶ್ವರ ಘಟಕಕ್ಕೆ ಸೇರಿದ ಬಸ್ಸಿನ ಬ್ರೇಕ್ ಮಹಾಬಲೇಶ್ವರ ಘಟ್ ರಸ್ತೆಯಲ್ಲೇ ವಿಫಲವಾಯಿತು.</p>.<p>ಎಡಭಾಗಕ್ಕೆ ಕಡಿದಾದ ಕಂದಕ ಬಲಭಾಗಕ್ಕೆ ಗುಡ್ಡವಿರುವ ಈ ರಸ್ತೆಯಲ್ಲಿ ಚಾಲಕ ವಿಚಲಿತಗೊಳ್ಳದೇ, ಬಸ್ಸನ್ನು ಗುಡ್ಡದ ಮಣ್ಣಿನ ಭಾಗಕ್ಕೆ ಗುದ್ದಿಸಿದರು. ತಕ್ಷಣ ಬಸ್ ಎಂಜಿನ್ ಬಂದ್ ಆಯಿತು.</p>.<p>ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇತರ ವಾಹನಗಳ ಸವಾರರು ವಿದ್ಯಾರ್ಥಿಗಳ ನೆರವಿಗೆ ಧಾವಿಸಿದರು. ಎಲ್ಲರನ್ನೂ ಬಸ್ಸಿನಿಂದ ಇಳಿಸಿ, ನೀರು ಕೊಟ್ಟು ಸಂತೈಸಿದರು.</p>.<p>ಕೆಲವು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಬಿಟ್ಟರೆ ಯಾವುದೇ ತೊಂದರೆಯಾಗಿಲ್ಲ ಎಂದು ಪ್ರವಾಸದಲ್ಲಿದ್ದವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಜಿಲ್ಲೆಯ ಸಂಕೇಶ್ವರದ ಎಸ್.ಡಿ. ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ಬಸ್ಸಿನ ‘ಬ್ರೇಕ್ಫೇಲ್’ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದಾಗಿ ಎಲ್ಲ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ.</p>.<p>ಮಹಾರಾಷ್ಟ್ರದ ಮಹಾಬಲೇಶ್ವರಕ್ಕೆ 50 ವಿದ್ಯಾರ್ಥಿಗಳು ಶಿಕ್ಷಕರ ಜತೆಗೆ ಬುಧವಾರ ನಸುಕಿನಲ್ಲಿ ಪ್ರವಾಸಕ್ಕೆ ತೆರಳಿದ್ದರು. ಸಾರಿಗೆ ಸಂಸ್ಥೆಯ ಸಂಕೇಶ್ವರ ಘಟಕಕ್ಕೆ ಸೇರಿದ ಬಸ್ಸಿನ ಬ್ರೇಕ್ ಮಹಾಬಲೇಶ್ವರ ಘಟ್ ರಸ್ತೆಯಲ್ಲೇ ವಿಫಲವಾಯಿತು.</p>.<p>ಎಡಭಾಗಕ್ಕೆ ಕಡಿದಾದ ಕಂದಕ ಬಲಭಾಗಕ್ಕೆ ಗುಡ್ಡವಿರುವ ಈ ರಸ್ತೆಯಲ್ಲಿ ಚಾಲಕ ವಿಚಲಿತಗೊಳ್ಳದೇ, ಬಸ್ಸನ್ನು ಗುಡ್ಡದ ಮಣ್ಣಿನ ಭಾಗಕ್ಕೆ ಗುದ್ದಿಸಿದರು. ತಕ್ಷಣ ಬಸ್ ಎಂಜಿನ್ ಬಂದ್ ಆಯಿತು.</p>.<p>ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಇತರ ವಾಹನಗಳ ಸವಾರರು ವಿದ್ಯಾರ್ಥಿಗಳ ನೆರವಿಗೆ ಧಾವಿಸಿದರು. ಎಲ್ಲರನ್ನೂ ಬಸ್ಸಿನಿಂದ ಇಳಿಸಿ, ನೀರು ಕೊಟ್ಟು ಸಂತೈಸಿದರು.</p>.<p>ಕೆಲವು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಬಿಟ್ಟರೆ ಯಾವುದೇ ತೊಂದರೆಯಾಗಿಲ್ಲ ಎಂದು ಪ್ರವಾಸದಲ್ಲಿದ್ದವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>