ಇದಾದ ಕೆಲವೇ ನಿಮಿಷಗಳಲ್ಲಿ ಬಂದ ಸತೀಶ ಜಾರಕಿಹೊಳಿ ಬೆಂಬಲಿಗರು ಚುನಾವಣಾ ಅಧಿಕಾರಿ ಎದುರು ಹಾಜರಾದರೂ, ನಾಮಪತ್ರ ಸಲ್ಲಿಸಲಿಲ್ಲ. ‘ವರಿಷ್ಠರು ಅವಿರೋಧ ಆಯ್ಕೆಗೆ ನಿರ್ಧಾರ ಮಾಡಿರುವುದರಿಂದ ನಮ್ಮ ಕಡೆಯವರು ನಾಮಪತ್ರ ಸಲ್ಲಿಸಲಿಲ್ಲ. ನಾನೂ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದರೆ, ಸಾಧ್ಯವಾಗಲಿಲ್ಲ. ಇದರಿಂದ ಬೇಸರವಾಗಿದೆ. ಮುಖಂಡರ ನಡುವೆ ಏನೇನು ಚರ್ಚೆ, ಸಂಧಾನ ನಡೆದಿದೆಯೋ ಎನ್ನುವುದು ಗೊತ್ತಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ನಾಯಕರು ನೋಡಿಕೊಳ್ಳುತ್ತಾರೆ’ ಎಂದು ನಿರ್ದೇಶಕ ಪ್ರಸಾದ ಪಾಟೀಲ ಮಾರ್ಮಿಕವಾಗಿ ತಿಳಿಸಿದರು.