<p><strong>ಬೆಳಗಾವಿ: </strong>‘ದೇಶಪಾಂಡೆ ಪ್ರತಿಷ್ಠಾನದಿಂದ ಸಣ್ಣ ಉದ್ದಿಮೆದಾರರನ್ನು ಪ್ರೋತ್ಸಾಹಿಸುವುದಕ್ಕಾಗಿ ಜ. 8 ರಿಂದ 11ರವರೆಗೆ ಇಲ್ಲಿನ ನೆಹರೂ ನಗರದ ಎಪಿಎಂಸಿ ರಸ್ತೆಯಲ್ಲಿರುವ ಬಸವಣ್ಣ ಮಹಾದೇವ ಮಂದಿರದಲ್ಲಿ ‘ಉದ್ಯಮಿ ಸಂತೆ’ ಆಯೋಜಿಸಲಾಗಿದೆ’ ಎಂದು ಯೋಜನಾ ವ್ಯವಸ್ಥಾಪಕ ವೀರಯ್ಯ ಹಿರೇಮಠ ತಿಳಿಸಿದರು.</p>.<p>‘ಬೆಳಿಗ್ಗೆ 10.30ರಿಂದ ರಾತ್ರಿ 9ವರೆಗೆ ಸಂತೆಯು ಸಾರ್ವಜನಿಕರಿಗೆ ಮುಕ್ತವಿರುತ್ತದೆ. ಆಹಾರ ಪದಾರ್ಥಗಳು, ಸಾವಯವ ಉತ್ಪನ್ನಗಳು, ಸಿರಿಧಾನ್ಯಗಳು, ಕೈಮಗ್ಗದ ಸೀರೆಗಳು ಮತ್ತು ಉಡುಪುಗಳು, ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘40 ಮಂದಿ ಸಣ್ಣ ಉದ್ಯಮಿಗಳು ನೋಂದಾಯಿಸಿದ್ದಾರೆ. ಅವರನ್ನು ಪ್ರೋತ್ಸಾಹಿಸುವ ಜೊತೆಗೆ ಗ್ರಾಹಕರಿಗೆ ನೇರವಾಗಿ ಮಾರುಕಟ್ಟೆ ಒದಗಿಸಲು ಪ್ರತಿಷ್ಠಾನದಿಂದ ಈ ಉಪಕ್ರಮವನ್ನು ಅನುಷ್ಠಾನಕ್ಕೆ ತರಲಾಗಿದೆ. ಸಾರ್ವಜನಿಕರು, ಸ್ಥಳೀಯರು ತಯಾರಿಸಿದ ವಸ್ತುಗಳನ್ನು ಖರೀದಿಸಿ ಪ್ರೋತ್ಸಾಹಿಸಬೇಕು’ ಎಂದು ಹೇಳಿದರು.</p>.<p>‘8ರಂದು ಸಂಜೆ 4ಕ್ಕೆ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಉದ್ಘಾಟಿಸುವರು. ಎಸ್ಬಿಐ ಎಫ್ಐಎಂಎಂ ಪ್ರಾದೇಶಿಕ ವ್ಯವಸ್ಥಾಪಕ ಜಿ. ನರಸಿಂಹಮೂರ್ತಿ, ಉದ್ಯಮಿಗಳಾದ ರಾಜೇಂದ್ರ ಬೆಳಗಾವಂಕರ ಹಾಗೂ ಅಮಿತ್ ಕಾಲಕುಂದ್ರಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಆಸಕ್ತರು ಹೆಚ್ಚಿನ ಮಾಹಿತಿಗೆ ಮೊ:9060555509 ಸಂಪರ್ಕಿಸಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ದೇಶಪಾಂಡೆ ಪ್ರತಿಷ್ಠಾನದಿಂದ ಸಣ್ಣ ಉದ್ದಿಮೆದಾರರನ್ನು ಪ್ರೋತ್ಸಾಹಿಸುವುದಕ್ಕಾಗಿ ಜ. 8 ರಿಂದ 11ರವರೆಗೆ ಇಲ್ಲಿನ ನೆಹರೂ ನಗರದ ಎಪಿಎಂಸಿ ರಸ್ತೆಯಲ್ಲಿರುವ ಬಸವಣ್ಣ ಮಹಾದೇವ ಮಂದಿರದಲ್ಲಿ ‘ಉದ್ಯಮಿ ಸಂತೆ’ ಆಯೋಜಿಸಲಾಗಿದೆ’ ಎಂದು ಯೋಜನಾ ವ್ಯವಸ್ಥಾಪಕ ವೀರಯ್ಯ ಹಿರೇಮಠ ತಿಳಿಸಿದರು.</p>.<p>‘ಬೆಳಿಗ್ಗೆ 10.30ರಿಂದ ರಾತ್ರಿ 9ವರೆಗೆ ಸಂತೆಯು ಸಾರ್ವಜನಿಕರಿಗೆ ಮುಕ್ತವಿರುತ್ತದೆ. ಆಹಾರ ಪದಾರ್ಥಗಳು, ಸಾವಯವ ಉತ್ಪನ್ನಗಳು, ಸಿರಿಧಾನ್ಯಗಳು, ಕೈಮಗ್ಗದ ಸೀರೆಗಳು ಮತ್ತು ಉಡುಪುಗಳು, ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘40 ಮಂದಿ ಸಣ್ಣ ಉದ್ಯಮಿಗಳು ನೋಂದಾಯಿಸಿದ್ದಾರೆ. ಅವರನ್ನು ಪ್ರೋತ್ಸಾಹಿಸುವ ಜೊತೆಗೆ ಗ್ರಾಹಕರಿಗೆ ನೇರವಾಗಿ ಮಾರುಕಟ್ಟೆ ಒದಗಿಸಲು ಪ್ರತಿಷ್ಠಾನದಿಂದ ಈ ಉಪಕ್ರಮವನ್ನು ಅನುಷ್ಠಾನಕ್ಕೆ ತರಲಾಗಿದೆ. ಸಾರ್ವಜನಿಕರು, ಸ್ಥಳೀಯರು ತಯಾರಿಸಿದ ವಸ್ತುಗಳನ್ನು ಖರೀದಿಸಿ ಪ್ರೋತ್ಸಾಹಿಸಬೇಕು’ ಎಂದು ಹೇಳಿದರು.</p>.<p>‘8ರಂದು ಸಂಜೆ 4ಕ್ಕೆ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಉದ್ಘಾಟಿಸುವರು. ಎಸ್ಬಿಐ ಎಫ್ಐಎಂಎಂ ಪ್ರಾದೇಶಿಕ ವ್ಯವಸ್ಥಾಪಕ ಜಿ. ನರಸಿಂಹಮೂರ್ತಿ, ಉದ್ಯಮಿಗಳಾದ ರಾಜೇಂದ್ರ ಬೆಳಗಾವಂಕರ ಹಾಗೂ ಅಮಿತ್ ಕಾಲಕುಂದ್ರಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಆಸಕ್ತರು ಹೆಚ್ಚಿನ ಮಾಹಿತಿಗೆ ಮೊ:9060555509 ಸಂಪರ್ಕಿಸಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>