<p><strong>ಬೆಳಗಾವಿ:</strong> ‘ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಎತ್ತಿ ಕಟ್ಟಲು ರಾಜ್ಯ ಸರ್ಕಾರವು ಸದನವನ್ನೇ ಬಳಸಿಕೊಳ್ಳುತ್ತಿರುವುದು ಖಂಡನೀಯ. ಇದರಿಂದ ಸಿದ್ದರಾಮಯ್ಯ ಅವರೇ ಶಾಸನ ಸಭೆಯ ಪಾವಿತ್ರ್ಯ ಹಾಳು ಮಾಡಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.</p>.<p>ಇಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮನರೇಗಾ ಯೋಜನೆಯನ್ನು ಪ್ರಧಾನಿ ಮೋದಿ ಅವರು ವಿಬಿ– ಜಿ ರಾಮ್ ಜಿ ಎಂದು ಸ್ವರೂಪ ನೀಡಿದ್ದಾರೆ. ದೇಶದ ಬಡವರು ಮತ್ತು ಕಾರ್ಮಿಕರಿಗೆ ಅನುಕೂಲ ಆಗಬೇಕು ಎಂಬುದು ಇದರ ಉದ್ದೇಶ. ಈ ಬಗ್ಗೆ ಗೊಂದಲಗಳಿದ್ದರೆ ಚರ್ಚಿಸಬೇಕು. ಆದರೆ, ಅದೇ ನೆಪದಲ್ಲಿ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರದ ವಿರುದ್ಧ ದ್ವೇಷ ಸಾಧಿಸಲು ಹೊರಟಿರುವುದು ಸರಿಯಲ್ಲ’ ಎಂದರು.</p>.<p>ರಾಜ್ಯ ರಾಜಕಾರಣಕ್ಕೆ ಮರಳುವುದಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ‘ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿ ಕೊಡುಗೆ ನೀಡಿದ್ದಾರೆ. ಮತ್ತೆ ರಾಜ್ಯ ರಾಜಕಾಣಕ್ಕೆ ಬಂದರೆ ಅದರಲ್ಲಿ ತಪ್ಪೇನಿದೆ?’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಎತ್ತಿ ಕಟ್ಟಲು ರಾಜ್ಯ ಸರ್ಕಾರವು ಸದನವನ್ನೇ ಬಳಸಿಕೊಳ್ಳುತ್ತಿರುವುದು ಖಂಡನೀಯ. ಇದರಿಂದ ಸಿದ್ದರಾಮಯ್ಯ ಅವರೇ ಶಾಸನ ಸಭೆಯ ಪಾವಿತ್ರ್ಯ ಹಾಳು ಮಾಡಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.</p>.<p>ಇಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮನರೇಗಾ ಯೋಜನೆಯನ್ನು ಪ್ರಧಾನಿ ಮೋದಿ ಅವರು ವಿಬಿ– ಜಿ ರಾಮ್ ಜಿ ಎಂದು ಸ್ವರೂಪ ನೀಡಿದ್ದಾರೆ. ದೇಶದ ಬಡವರು ಮತ್ತು ಕಾರ್ಮಿಕರಿಗೆ ಅನುಕೂಲ ಆಗಬೇಕು ಎಂಬುದು ಇದರ ಉದ್ದೇಶ. ಈ ಬಗ್ಗೆ ಗೊಂದಲಗಳಿದ್ದರೆ ಚರ್ಚಿಸಬೇಕು. ಆದರೆ, ಅದೇ ನೆಪದಲ್ಲಿ ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರದ ವಿರುದ್ಧ ದ್ವೇಷ ಸಾಧಿಸಲು ಹೊರಟಿರುವುದು ಸರಿಯಲ್ಲ’ ಎಂದರು.</p>.<p>ರಾಜ್ಯ ರಾಜಕಾರಣಕ್ಕೆ ಮರಳುವುದಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ವಿಜಯೇಂದ್ರ, ‘ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿ ಕೊಡುಗೆ ನೀಡಿದ್ದಾರೆ. ಮತ್ತೆ ರಾಜ್ಯ ರಾಜಕಾಣಕ್ಕೆ ಬಂದರೆ ಅದರಲ್ಲಿ ತಪ್ಪೇನಿದೆ?’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>