‘ಅಥಣಿ ತಾಲ್ಲೂಕಿನ ಜ್ವಲಂತ ಸಮಸ್ಯೆಗಳಾದ ಸವಳು– ಜವಳು, ಪ್ರವಾಹ ನಿರಾಶ್ರಿತರಿಗೆ ನೆರೆ ಪರಿಹಾರ, ಪೂರ್ವ ಭಾಗದ 7 ಹಳ್ಳಿಗಳ ಕೊಟ್ಟಲಗಿ ಯಾತ ನೀರಾವರಿ ಯೋಜನೆ, ಹಿಪ್ಪರಗಿ ಯಾತ ನೀರಾವರಿ ಯೋಜನೆ ಅನುಷ್ಠಾನಗೊಳಿಸು ಕ್ರಮ ಕೈಗೊಳ್ಳಲಾಗುವುದು. ಜನವಾಡ, ಹುಲಗಬಾಳಿ, ರಾಮವಾಡಿ ಮತ್ತು ಕರ್ಲಟ್ಟಿ ಸೇರಿದಂತೆ ಮುಳುಗಡೆಯಾದ ಗ್ರಾಮಗಳನ್ನು ಸಂತ್ರಸ್ತರು ಬಯಸಿದರೆ ಸ್ಥಳಾಂತರ ಮಾಡಲಾಗುವುದು. ಸಂತ್ರಸ್ತರಿಗೆ ಬೇಕಾದ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ’ ಎಂದು ಭರವಸೆ ನೀಡಿದರು.