ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ನಿಂದ ಬಂದು ಗೆದ್ದವರೆಲ್ಲರಿಗೂ ಸಚಿವ ಸ್ಥಾನ ನೀಡುವುದಾಗಿ ಯಡಿಯೂರಪ್ಪ ಅವರು ಆಶ್ವಾಸನೆ ಕೊಟ್ಟಿದ್ದರು. ಈಗ ಅವರಿಗೆ ಯಾವುದೋ ಸಮಸ್ಯೆ ಬಂದಿರಬಹುದು. ಹೀಗಾಗಿ ಸುಮ್ಮನಿದ್ದೇನೆ. ಮುಂದಿನ ದಿನಗಳಲ್ಲಿ ಭರವಸೆಯಂತೆ ನಡೆದುಕೊಳ್ಳುವ ವಿಶ್ವಾಸವಿದೆ. ಹೀಗಾಗಿ, ಪಕ್ಷಕ್ಕೆ ಮುಜುಗರವಾಗುವ ಕೆಲಸ ಮಾಡುವುದಿಲ್ಲ’ ಎಂದರು.