ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಸ್ಥಾನದ ಭರವಸೆ ನೀಡಿದ್ದಾರೆ: ಕುಮಠಳ್ಳಿ

Last Updated 29 ನವೆಂಬರ್ 2020, 15:02 IST
ಅಕ್ಷರ ಗಾತ್ರ

ಬೆಳಗಾವಿ: ‘ನನಗೆ ಸಚಿವ ಸ್ಥಾನ ಕೊಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಆದರೆ, ಪದೇ ಪದೇ ಕೇಳಲು ಹೋಗುವುದಿಲ್ಲ. ಕಾಯುತ್ತೇನೆ’ ಎಂದು ಅಥಣಿ ಶಾಸಕ ಮಹೇಶ ಕುಮಠಳ್ಳಿ ತಿಳಿಸಿದರು.

ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್‌ನಿಂದ ಬಂದು ಗೆದ್ದವರೆಲ್ಲರಿಗೂ ಸಚಿವ ಸ್ಥಾನ ನೀಡುವುದಾಗಿ ಯಡಿಯೂರಪ್ಪ ಅವರು ಆಶ್ವಾಸನೆ ಕೊಟ್ಟಿದ್ದರು. ಈಗ ಅವರಿಗೆ ಯಾವುದೋ ಸಮಸ್ಯೆ ಬಂದಿರಬಹುದು. ಹೀಗಾಗಿ ಸುಮ್ಮನಿದ್ದೇನೆ. ಮುಂದಿನ ದಿನಗಳಲ್ಲಿ ಭರವಸೆಯಂತೆ ನಡೆದುಕೊಳ್ಳುವ ವಿಶ್ವಾಸವಿದೆ. ಹೀಗಾಗಿ, ಪಕ್ಷಕ್ಕೆ ಮುಜುಗರವಾಗುವ ಕೆಲಸ ಮಾಡುವುದಿಲ್ಲ’ ಎಂದರು.

‘ಸದ್ಯ ನನಗೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಮಂಡಳಿಯಿಂದ 97,137 ಮನೆಗಳ ನಿರ್ಮಾಣಕ್ಕೂ ಅನುಮೋದನೆ ಕೊಟ್ಟಿದ್ದಾರೆ. ಸ್ಲಂ ಜನರ ಕಣ್ಣೀರು ಒರೆಸುವ ಒಳ್ಳೆಯ ಅವಕಾಶ ನನಗೆ ಸಿಕ್ಕಿದೆ. ಬಿಜೆಪಿ ಸೇರಿದ್ದಕ್ಕೆ ಸಂತೋಷವಿದೆ. ಕ್ಷೇತ್ರದ ಅಭಿವೃದ್ಧಿಗೆ ಸಚಿವರು ತಕ್ಷಣವೇ ಸ್ಪಂದಿಸುತ್ತಾರೆ. ಮೂಲ–ವಲಸಿಗರು ಎನ್ನುವುದು ಇಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT