‘ಬೆಳಗಾವಿ ಜಿಲ್ಲೆ ವಿಭಜಿಸಿದರೆ ಗೋಕಾಕ ಹಾಗೂ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ರಚನೆ ಆಗಬೇಕು ಎಂಬ ಆಗ್ರಹ ನಮ್ಮದೂ ಆಗಿದೆ. ಅದಕ್ಕೂ ಮುನ್ನ ತಾಲ್ಲೂಕುಗಳ ವಿಗಂಡಣೆ ಆಗಬೇಕು ಎಂದು ಸಲಹೆ ಕೊಟ್ಟಿದ್ದೇನೆ. ಮೊನ್ನೆ ಯರಗಟ್ಟಿ ಘೋಷಣೆಯಾಗಿದ್ದು, ಅಧಿಕೃತವಾಗಿ ಅಸ್ತಿತ್ವಕ್ಕೆ ಬರಬೇಕಿದೆ. ಇನ್ನೂ ಕೆಲವು ಆಗಬೇಕು. ಕುಡಚಿ ಅಥವಾ ಹಾರೂಗೇರಿಯಲ್ಲಿ ಒಂದನ್ನು ತಾಲ್ಲೂಕು ಮಾಡಬೇಕು. ನಂತರ ಜಿಲ್ಲೆ ರಚನೆಯಾದರೆ ಒಳ್ಳೆಯದಾಗುತ್ತದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಇದ್ದಾಗಲೂ ಈ ಚರ್ಚೆ ಆಗಿತ್ತು’ ಎಂದರು.