‘ಬೆಳಗಾವಿ, ಚಿಕ್ಕೋಡಿ, ಗೋಕಾಕ ಮತ್ತು ಅಥಣಿ ತಾಲ್ಲೂಕುಗಳಲ್ಲಿ ಒಟ್ಟು 22 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ 22 ಮಂದಿ ಹಿರಿಯ ಪ್ರಾಚಾರ್ಯರನ್ನು ಪ್ರಶ್ನೆಪತ್ರಿಕಾ ಪಾಲಕ(ಕಸ್ಟೋಡಿಯನ್)ರನ್ನಾಗಿ ನೇಮಿಸಲಾಗುವುದು. ಪ್ರತಿ ಕೇಂದ್ರಕ್ಕೆ ಇಬ್ಬರಂತೆ ಒಟ್ಟು 44 ಉಪನ್ಯಾಸಕರನ್ನು ವಿಶೇಷ ಜಾಗೃತಾ ದಳದ ಅಧಿಕಾರಿಗಳನ್ನಾಗಿ ಈಗಾಗಲೇ ನಿಯೋಜಿಸಲಾಗಿದೆ. ಅವರು ಪರೀಕ್ಷೆಯ ದಿನದಂದು ಕಡ್ಡಾಯವಾಗಿ ಆಯಾ ಕೇಂದ್ರಗಳಲ್ಲಿ ಉಪಸ್ಥಿತರಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.