<p><strong>ಬೆಳಗಾವಿ: </strong>ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪರವಾಗಿ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಶುಕ್ರವಾರ ವಿವಿಧೆಡೆ ಪ್ರಚಾರ ನಡೆಸಿದರು.</p>.<p>ಕೆಎಲ್ಇ ಸಂಸ್ಥೆಯ ಲಿಂಗರಾಜ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ರವಿ, ‘ಬಿಜೆಪಿಗೆ ಅಧಿಕಾರ ಹಿಡಿಯುವುದೇ ಗುರಿ ಅಥವಾ ವೃತ್ತಿಯಲ್ಲ. ಭಾರತದ ಶಕ್ತಿಯನ್ನು ವಿಶ್ವದಾದ್ಯಂತ ಗುರುತಿಸುವಂತೆ ಮಾಡುವುದೇ ನಮ್ಮ ಗುರಿ’ ಎಂದು ತಿಳಿಸಿದರು.</p>.<p>‘ಪಕ್ಷದ ಸಿದ್ಧಾಂತ ಹಾಗೂ ಗುರಿಗಳನ್ನು ಮನವರಿಕೆ ಮಾಡಿಕೊಟ್ಟು ವಿಶ್ವಾಸ ಗಳಿಸಿದೆ. ಜಗತ್ತಿನಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹೆಚ್ಚು ಸಂಸದರು ಮತ್ತು ಶಾಸಕರನ್ನು ಹೊಂದಿದೆ. ಅತಿ ಹೆಚ್ಚು ರಾಜ್ಯಗಳ ಆಡಳಿತ ಹಿಡಿದಿದೆ’ ಎಂದು ಹೇಳಿದರು.</p>.<p>‘ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡಾಗಿನಿಂದ ದೇಶ ಅಭಿವೃದ್ಧಿ ಸಾಧಿಸುತ್ತಿದೆ. ಎಲ್ಲ ರಂಗದ ಪ್ರಗತಿಗೂ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಮನೆಗೂ ಶುದ್ಧ ನೀರು ದೊರೆಯುತ್ತಿದೆ’ ಎಂದರು.</p>.<p>ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ. ಕಾರ್ಯದರ್ಶಿ ಬಿ.ಜಿ. ದೇಸಾಯಿ ಇದ್ದರು.</p>.<p>ಕಣಬರ್ಗಿಯಲ್ಲಿ ನಡೆದ ಯುವ ಸಂಕಲ್ಪ ಸಮಾವೇಶದಲ್ಲಿ ಸಿ.ಟಿ. ರವಿ, ಪಕ್ಷದ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಡಾ.ಕೆ.ಸಿ. ಸಂದೀಪ್ ಕುಮಾರ್, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ, ಶಾಸಕ ಅನಿಲ ಬೆನಕೆ ಮತ್ತು ಮುಖಂಡರು ಪಾಲ್ಗೊಂಡರು.</p>.<p class="Subhead">ಕಾಂಗ್ರೆಸ್ನಿಂದ ಹಗರಣ:</p>.<p>ಇದಕ್ಕೂ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದ ರವಿ, ‘ಎಲ್ಲರೂ ಭ್ರಷ್ಟಾಚಾರ ಮಾಡಬೇಕು ಎನ್ನುವುದು ಕಾಂಗ್ರೆಸ್ನವರ ಮನಸ್ಥಿತಿಯಾಗಿದೆ. ಏಕೆಂದರೆ, ಎಲ್ಲ ಹಗರಣಗಳೂ ಕಾಂಗ್ರೆಸ್ ಸರ್ಕಾರದಲ್ಲೇ ನಡೆದಿವೆ. ಕರ್ನಾಟಕದಲ್ಲಿ ಲೋಕಾಯುಕ್ತ ಮುಚ್ಚಿದ್ದು ಯಾರು? ರಾಜ್ಯದ ಬೊಕ್ಕಸ ಕೊಳ್ಳೆ ಹೊಡೆದರು. ಆ ಪಕ್ಷಕ್ಕೆ ಕರ್ನಾಟಕವು ಎಂಟಿಎಂನಂತೆ ಆಗಿತ್ತು’ ಎಂದು ವಾಗ್ದಾಳಿ ನಡೆಸಿದರು.</p>.<p>‘ಕೋವಿಡ್ ಲಸಿಕೆಗೆ ವಿರೋಧ ಮಾಡಿದ ಆ ಪಕ್ಷದವರು ಸದ್ದಿಲ್ಲದೇ ಲಸಿಕೆ ಪಡೆದರು’ ಎಂದು ವ್ಯಂಗ್ಯವಾಡಿದರು.</p>.<p>‘ಸತೀಶ ಜಾರಕಿಹೊಳಿ ಅವರನ್ನು ಈ ಚುನಾವಣೆಯಲ್ಲಿ ಹರಕೆ ಕುರಿ ಮಾಡಿದ್ದಾರೆ’ ಎಂದು ವಿಶ್ಲೇಷಿಸಿದರು.</p>.<p>‘ದನ–ಕುರಿಗಳಂತೆ ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿದರು’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ, ‘ದನ ಕುರಿಗಳನ್ನು ಅವರಿಗೆ ಹೋಲಿಸಿಕೊಳ್ಳುತ್ತಿದ್ದಾರಂತಾಯ್ತಲ್ಲ? ದನ ಕುರಿಗಳು ಅವರಗಿಂತಲೂ ಮೇಲೂ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪರವಾಗಿ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಶುಕ್ರವಾರ ವಿವಿಧೆಡೆ ಪ್ರಚಾರ ನಡೆಸಿದರು.</p>.<p>ಕೆಎಲ್ಇ ಸಂಸ್ಥೆಯ ಲಿಂಗರಾಜ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ರವಿ, ‘ಬಿಜೆಪಿಗೆ ಅಧಿಕಾರ ಹಿಡಿಯುವುದೇ ಗುರಿ ಅಥವಾ ವೃತ್ತಿಯಲ್ಲ. ಭಾರತದ ಶಕ್ತಿಯನ್ನು ವಿಶ್ವದಾದ್ಯಂತ ಗುರುತಿಸುವಂತೆ ಮಾಡುವುದೇ ನಮ್ಮ ಗುರಿ’ ಎಂದು ತಿಳಿಸಿದರು.</p>.<p>‘ಪಕ್ಷದ ಸಿದ್ಧಾಂತ ಹಾಗೂ ಗುರಿಗಳನ್ನು ಮನವರಿಕೆ ಮಾಡಿಕೊಟ್ಟು ವಿಶ್ವಾಸ ಗಳಿಸಿದೆ. ಜಗತ್ತಿನಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹೆಚ್ಚು ಸಂಸದರು ಮತ್ತು ಶಾಸಕರನ್ನು ಹೊಂದಿದೆ. ಅತಿ ಹೆಚ್ಚು ರಾಜ್ಯಗಳ ಆಡಳಿತ ಹಿಡಿದಿದೆ’ ಎಂದು ಹೇಳಿದರು.</p>.<p>‘ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡಾಗಿನಿಂದ ದೇಶ ಅಭಿವೃದ್ಧಿ ಸಾಧಿಸುತ್ತಿದೆ. ಎಲ್ಲ ರಂಗದ ಪ್ರಗತಿಗೂ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಮನೆಗೂ ಶುದ್ಧ ನೀರು ದೊರೆಯುತ್ತಿದೆ’ ಎಂದರು.</p>.<p>ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ. ಕಾರ್ಯದರ್ಶಿ ಬಿ.ಜಿ. ದೇಸಾಯಿ ಇದ್ದರು.</p>.<p>ಕಣಬರ್ಗಿಯಲ್ಲಿ ನಡೆದ ಯುವ ಸಂಕಲ್ಪ ಸಮಾವೇಶದಲ್ಲಿ ಸಿ.ಟಿ. ರವಿ, ಪಕ್ಷದ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಡಾ.ಕೆ.ಸಿ. ಸಂದೀಪ್ ಕುಮಾರ್, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ, ಶಾಸಕ ಅನಿಲ ಬೆನಕೆ ಮತ್ತು ಮುಖಂಡರು ಪಾಲ್ಗೊಂಡರು.</p>.<p class="Subhead">ಕಾಂಗ್ರೆಸ್ನಿಂದ ಹಗರಣ:</p>.<p>ಇದಕ್ಕೂ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದ ರವಿ, ‘ಎಲ್ಲರೂ ಭ್ರಷ್ಟಾಚಾರ ಮಾಡಬೇಕು ಎನ್ನುವುದು ಕಾಂಗ್ರೆಸ್ನವರ ಮನಸ್ಥಿತಿಯಾಗಿದೆ. ಏಕೆಂದರೆ, ಎಲ್ಲ ಹಗರಣಗಳೂ ಕಾಂಗ್ರೆಸ್ ಸರ್ಕಾರದಲ್ಲೇ ನಡೆದಿವೆ. ಕರ್ನಾಟಕದಲ್ಲಿ ಲೋಕಾಯುಕ್ತ ಮುಚ್ಚಿದ್ದು ಯಾರು? ರಾಜ್ಯದ ಬೊಕ್ಕಸ ಕೊಳ್ಳೆ ಹೊಡೆದರು. ಆ ಪಕ್ಷಕ್ಕೆ ಕರ್ನಾಟಕವು ಎಂಟಿಎಂನಂತೆ ಆಗಿತ್ತು’ ಎಂದು ವಾಗ್ದಾಳಿ ನಡೆಸಿದರು.</p>.<p>‘ಕೋವಿಡ್ ಲಸಿಕೆಗೆ ವಿರೋಧ ಮಾಡಿದ ಆ ಪಕ್ಷದವರು ಸದ್ದಿಲ್ಲದೇ ಲಸಿಕೆ ಪಡೆದರು’ ಎಂದು ವ್ಯಂಗ್ಯವಾಡಿದರು.</p>.<p>‘ಸತೀಶ ಜಾರಕಿಹೊಳಿ ಅವರನ್ನು ಈ ಚುನಾವಣೆಯಲ್ಲಿ ಹರಕೆ ಕುರಿ ಮಾಡಿದ್ದಾರೆ’ ಎಂದು ವಿಶ್ಲೇಷಿಸಿದರು.</p>.<p>‘ದನ–ಕುರಿಗಳಂತೆ ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿದರು’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ, ‘ದನ ಕುರಿಗಳನ್ನು ಅವರಿಗೆ ಹೋಲಿಸಿಕೊಳ್ಳುತ್ತಿದ್ದಾರಂತಾಯ್ತಲ್ಲ? ದನ ಕುರಿಗಳು ಅವರಗಿಂತಲೂ ಮೇಲೂ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>