<p>ಬೆಳಗಾವಿ: ‘ಇಲ್ಲಿನ ಮಹಾನಗರಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರತಿ ಅಭ್ಯರ್ಥಿಗೆ ₹ 3 ಲಕ್ಷ ಗರಿಷ್ಠ ವೆಚ್ಚ ಮಿತಿ ನಿಗದಿಪಡಿಸಲಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.</p>.<p>ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಸ್ಪರ್ಧಿಸಲು ಬಯಸುವವರು ನಾಮಪತ್ರದೊಂದಿಗೆ ಠೇವಣಿ ಸಲ್ಲಿಸಬೇಕು. ಸಾಮಾನ್ಯ ವರ್ಗದವರು ₹ 5000 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಹಿಂದುಳಿದ ವರ್ಗದವರು ಮತ್ತು ಮಹಿಳೆಯರಿಗೆ ₹ 2500 ನಿಗದಿಪಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಒಬ್ಬ ಅಭ್ಯರ್ಥಿಯು ಅದೇ ವಾರ್ಡ್ನಲ್ಲಿ ಒಂದಕ್ಕಿಂತ ಹೆಚ್ಚು ನಾಮಪತ್ರಗಳನ್ನು ಸಲ್ಲಿಸಿದರೆ ಹೆಚ್ಚಿನ ಠೇವಣಿ ಅಗತ್ಯವಿಲ್ಲ. ನಿಗದಿತ ಠೇವಣಿಯನ್ನು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗೆ ನಗದಾಗಿ ನೀಡಬಹುದು ಅಥವಾ ಸರ್ಕಾರಿ ಖಜಾನೆಯಲ್ಲಿ ಪಾವತಿಸಿದ ಬಗ್ಗೆ ರಸೀದಿಯನ್ನು ಲಗತ್ತಿಸಬೇಕು’ ಎಂದು ತಿಳಿಸಿದರು.</p>.<p>ಸೂಚಕರು:</p>.<p>‘ಮಾನ್ಯತೆ ಪಡೆದ ಅಭ್ಯರ್ಥಿಯಾಗಿದ್ದಲ್ಲಿ ನಾಮಪತ್ರದ ಜೊತೆ ಒಬ್ಬ ಸೂಚಕರು, ಪಕ್ಷೇತರ ಅಭ್ಯರ್ಥಿಯಾಗಿದ್ದಲ್ಲಿ 6 ಜನ ಸೂಚಕರ ಸಹಿ ಕಡ್ಡಾಯವಾಗಿ ಇರಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ಮಹಾನಗರಪಾಲಿಕೆ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರಬೇಕು. ನಾಮಪತ್ರಗಳನ್ನು ನಿಗದಿಪಡಿಸಿದ ದಿನಗಳಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ಸಂಬಂಧಿಸಿದ ಚುನಾವಣಾ/ ಸಹಾಯಕ ಚುನಾವಣಾ ಅಧಿಕಾರಿಗೆ ಸಲ್ಲಿಸಬೇಕು. ಅಭ್ಯರ್ಥಿ ಒಳಗೊಂಡಂತೆ ಐವರು ಮಾತ್ರ ಚುನಾವಣಾ ಅಧಿಕಾರಿ ಪ್ರವೇಶಿಸಲು ಅವಕಾಶವಿದೆ’ ಎಂದು ವಿವರಿಸಿದರು.</p>.<p>‘ಒಟ್ಟು 415 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಮತಗಟ್ಟಗೆ ಒಬ್ಬ ಪ್ರಿಸೈಡಿಂಗ್ ಅಧಿಕಾರಿ ಹಾಗೂ ಮೂವರು ಮತಗಟ್ಟೆ ಅಧಿಕಾರಿಗಳು ಮತ್ತು ಶೇ 10ರಷ್ಟು ಹೆಚ್ಚುವರಿ ಸೇರಿ ಒಟ್ಟು 1,826 ಸಿಬ್ಬಂದಿ ನೇಮಕ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ಇವಿಎಂ, ಮಾದರಿ ನೀತಿಸಂಹಿತೆ, ದೂರು ನಿರ್ವಹಣಾ ವಿಷಯಗಳು, ತರಬೇತಿ, ಮಸ್ಟರಿಂಗ್–ಡಿ ಮಸ್ಟರಿಂಗ್ ಮತ್ತು ಎಣಿಕೆ ಕೇಂದ್ರಗಳ ವ್ಯವಸ್ಥೆ, ವರದಿಗಳು, ಚುನಾವಣಾ/ ವೆಚ್ಚ ವೀಕ್ಷಕರು, ಅಭ್ಯರ್ಥಿಗಳ ಚುನಾವಣಾ ವೆಚ್ಚ ನಿರ್ವಹಣೆ ಹಾಗೂ ಮತಗಟ್ಟೆ ಸಿಬ್ಬಂದಿ ನೇಮಕಾತಿಗಾಗಿ 9 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ’ ಎಂದರು.</p>.<p>ಇವಿಎಂ, ನೋಟಾ:</p>.<p>‘ಇವಿಎಂ (ವಿದ್ಯುನ್ಮಾನ ಮತಯಂತ್ರ)ಗಳನ್ನು ಬಳಸಲಾಗುವುದು. ನೋಟಾ (ಮೇಲಿನ ಯಾರೂ ಇಲ್ಲ) ಮತಕ್ಕೆ ಅವಕಾಶವಿದೆ. ಅಣಕು ಮತದಾನದ ಮೂಲಕ ಜಾಗೃತಿ ಮೂಡಿಸುವ ಕಾಲಕ್ಕೆ ನೋಟಾ ಬಗ್ಗೆಯೂ ತಿಳಿಸಲಾಗುವುದು. ಕಾನೂನು ಮತ್ತು ಸುವ್ಯವಸ್ಥೆ ಪಾಲನೆಗಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು’ ಎಂದು ಹೇಳಿದರು.</p>.<p>‘ಬಿ.ಕೆ. ಮಾಡೆಲ್ ಪ್ರೌಢಶಾಲೆಯಲ್ಲಿ ಚುನಾವಣಾ ಸಾಮಗ್ರಿಗಳನ್ನು ಹಂಚಿಕೆ ಮಾಡಲಾಗುವುದು ಮತ್ತು ಸಂಗ್ರಹಿಸಲಾಗುವುದು. ಕ್ಯಾಂಪ್ನ ಸಂತ ಜೋಸೆಫ್ ಕಾನ್ವೆಂಟ್ ಹಾಗೂ ಸಂತ ಪಾಲ್ ಶಾಲೆಯಲ್ಲಿ ಚುನಾವಣಾ ಸಿಬ್ಬಂದಿಗೆ ತರಬೇತಿ ನೀಡಲಾಗುವುದು’.</p>.<p>‘ಪ್ರಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ನೀಡಲಾಗುವ ಮಾರ್ಗಸೂಚಿಗಳನ್ನು ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್ ಮಾರ್ಗಸೂಚಿಗಳನ್ನೂ ಅನುಸರಿಸಬೇಕು’ ಎಂದು ಸೂಚಿಸಿದರು.</p>.<p>‘ಆ. 16ರಂದು ಅಧಿಸೂಚನೆ ಹೊರಡಿಸಲಾಗುವುದು. ಅಂದಿನಿಂದಲೇ ಮಾದರಿ ನೀತಿಸಂಹಿತೆ ಜಾರಿಗೆ ಬರಲಿದೆ. ಎಲ್ಲ 58 ವಾರ್ಡ್ಗಳ ಚುನಾವಣಾಧಿಕಾರಿ/ ಸಹಾಯಕ ಚುನಾವಣಾಧಿಕಾರಿ ಕಚೇರಿಗಳನ್ನು ನಗರಪಾಲಿಕೆಯಲ್ಲಿ ಸ್ಥಾಪಿಸಲಾಗಿದೆ. ಎಲ್ಲ ಮತಗಟ್ಟೆಗಳನ್ನೂ ಶೇ 100ರಷ್ಟು ಪರಿಶೀಲಿಸಿ, ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಲಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು ಜುಲೈ 9ರಂದೇ ಪ್ರಚುರಪಡಿಸಲಾಗಿದೆ. ಮತಪತ್ರದಲ್ಲಿ ಅಭ್ಯರ್ಥಿಗಳ ಭಾವಚಿತ್ರ ಮುದ್ರಿಸಲಾಗುವುದು’ ಎಂದು ಮಾಹಿತಿ ನೀಡಿದರು.</p>.<p class="Subhead">ಅಂಕಿ ಅಂಶ</p>.<p>4,28,364</p>.<p>ಒಟ್ಟು ಮತದಾರರು</p>.<p>2,13,526</p>.<p>ಪುರುಷರು</p>.<p>2,14838</p>.<p>ಮಹಿಳೆಯರು</p>.<p>402</p>.<p>ಮೂಲ ಮತಗಟ್ಟೆಗಳು</p>.<p>13</p>.<p>ಉಪ ಮತಗಟ್ಟೆಗಳು</p>.<p>415</p>.<p>ಒಟ್ಟು ಮತಗಟ್ಟೆಗಳು</p>.<p>12</p>.<p>ನೇಮಕವಾಗಿರುವ ಚುನಾವಣಾಧಿಕಾರಿಗಳು</p>.<p>12</p>.<p>ಸಹಾಯಕ ಚುನಾವಣಾಧಿಕಾರಿಗಳು</p>.<p>1,826</p>.<p>ಸಿಬ್ಬಂದಿ ನೇಮಕ</p>.<p class="Subhead">ಮಾರ್ಗಸೂಚಿ ಪಾಲನೆ</p>.<p>ಕೋವಿಡ್–19 ಮಾರ್ಗಸೂಚಿ ಅನ್ವಯ ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಿ, ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಲಾಗುವುದು.<br />–ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಇಲ್ಲಿನ ಮಹಾನಗರಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರತಿ ಅಭ್ಯರ್ಥಿಗೆ ₹ 3 ಲಕ್ಷ ಗರಿಷ್ಠ ವೆಚ್ಚ ಮಿತಿ ನಿಗದಿಪಡಿಸಲಾಗಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.</p>.<p>ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಸ್ಪರ್ಧಿಸಲು ಬಯಸುವವರು ನಾಮಪತ್ರದೊಂದಿಗೆ ಠೇವಣಿ ಸಲ್ಲಿಸಬೇಕು. ಸಾಮಾನ್ಯ ವರ್ಗದವರು ₹ 5000 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಹಿಂದುಳಿದ ವರ್ಗದವರು ಮತ್ತು ಮಹಿಳೆಯರಿಗೆ ₹ 2500 ನಿಗದಿಪಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>‘ಒಬ್ಬ ಅಭ್ಯರ್ಥಿಯು ಅದೇ ವಾರ್ಡ್ನಲ್ಲಿ ಒಂದಕ್ಕಿಂತ ಹೆಚ್ಚು ನಾಮಪತ್ರಗಳನ್ನು ಸಲ್ಲಿಸಿದರೆ ಹೆಚ್ಚಿನ ಠೇವಣಿ ಅಗತ್ಯವಿಲ್ಲ. ನಿಗದಿತ ಠೇವಣಿಯನ್ನು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗೆ ನಗದಾಗಿ ನೀಡಬಹುದು ಅಥವಾ ಸರ್ಕಾರಿ ಖಜಾನೆಯಲ್ಲಿ ಪಾವತಿಸಿದ ಬಗ್ಗೆ ರಸೀದಿಯನ್ನು ಲಗತ್ತಿಸಬೇಕು’ ಎಂದು ತಿಳಿಸಿದರು.</p>.<p>ಸೂಚಕರು:</p>.<p>‘ಮಾನ್ಯತೆ ಪಡೆದ ಅಭ್ಯರ್ಥಿಯಾಗಿದ್ದಲ್ಲಿ ನಾಮಪತ್ರದ ಜೊತೆ ಒಬ್ಬ ಸೂಚಕರು, ಪಕ್ಷೇತರ ಅಭ್ಯರ್ಥಿಯಾಗಿದ್ದಲ್ಲಿ 6 ಜನ ಸೂಚಕರ ಸಹಿ ಕಡ್ಡಾಯವಾಗಿ ಇರಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ಮಹಾನಗರಪಾಲಿಕೆ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರಬೇಕು. ನಾಮಪತ್ರಗಳನ್ನು ನಿಗದಿಪಡಿಸಿದ ದಿನಗಳಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ಸಂಬಂಧಿಸಿದ ಚುನಾವಣಾ/ ಸಹಾಯಕ ಚುನಾವಣಾ ಅಧಿಕಾರಿಗೆ ಸಲ್ಲಿಸಬೇಕು. ಅಭ್ಯರ್ಥಿ ಒಳಗೊಂಡಂತೆ ಐವರು ಮಾತ್ರ ಚುನಾವಣಾ ಅಧಿಕಾರಿ ಪ್ರವೇಶಿಸಲು ಅವಕಾಶವಿದೆ’ ಎಂದು ವಿವರಿಸಿದರು.</p>.<p>‘ಒಟ್ಟು 415 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಮತಗಟ್ಟಗೆ ಒಬ್ಬ ಪ್ರಿಸೈಡಿಂಗ್ ಅಧಿಕಾರಿ ಹಾಗೂ ಮೂವರು ಮತಗಟ್ಟೆ ಅಧಿಕಾರಿಗಳು ಮತ್ತು ಶೇ 10ರಷ್ಟು ಹೆಚ್ಚುವರಿ ಸೇರಿ ಒಟ್ಟು 1,826 ಸಿಬ್ಬಂದಿ ನೇಮಕ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ಇವಿಎಂ, ಮಾದರಿ ನೀತಿಸಂಹಿತೆ, ದೂರು ನಿರ್ವಹಣಾ ವಿಷಯಗಳು, ತರಬೇತಿ, ಮಸ್ಟರಿಂಗ್–ಡಿ ಮಸ್ಟರಿಂಗ್ ಮತ್ತು ಎಣಿಕೆ ಕೇಂದ್ರಗಳ ವ್ಯವಸ್ಥೆ, ವರದಿಗಳು, ಚುನಾವಣಾ/ ವೆಚ್ಚ ವೀಕ್ಷಕರು, ಅಭ್ಯರ್ಥಿಗಳ ಚುನಾವಣಾ ವೆಚ್ಚ ನಿರ್ವಹಣೆ ಹಾಗೂ ಮತಗಟ್ಟೆ ಸಿಬ್ಬಂದಿ ನೇಮಕಾತಿಗಾಗಿ 9 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ’ ಎಂದರು.</p>.<p>ಇವಿಎಂ, ನೋಟಾ:</p>.<p>‘ಇವಿಎಂ (ವಿದ್ಯುನ್ಮಾನ ಮತಯಂತ್ರ)ಗಳನ್ನು ಬಳಸಲಾಗುವುದು. ನೋಟಾ (ಮೇಲಿನ ಯಾರೂ ಇಲ್ಲ) ಮತಕ್ಕೆ ಅವಕಾಶವಿದೆ. ಅಣಕು ಮತದಾನದ ಮೂಲಕ ಜಾಗೃತಿ ಮೂಡಿಸುವ ಕಾಲಕ್ಕೆ ನೋಟಾ ಬಗ್ಗೆಯೂ ತಿಳಿಸಲಾಗುವುದು. ಕಾನೂನು ಮತ್ತು ಸುವ್ಯವಸ್ಥೆ ಪಾಲನೆಗಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು’ ಎಂದು ಹೇಳಿದರು.</p>.<p>‘ಬಿ.ಕೆ. ಮಾಡೆಲ್ ಪ್ರೌಢಶಾಲೆಯಲ್ಲಿ ಚುನಾವಣಾ ಸಾಮಗ್ರಿಗಳನ್ನು ಹಂಚಿಕೆ ಮಾಡಲಾಗುವುದು ಮತ್ತು ಸಂಗ್ರಹಿಸಲಾಗುವುದು. ಕ್ಯಾಂಪ್ನ ಸಂತ ಜೋಸೆಫ್ ಕಾನ್ವೆಂಟ್ ಹಾಗೂ ಸಂತ ಪಾಲ್ ಶಾಲೆಯಲ್ಲಿ ಚುನಾವಣಾ ಸಿಬ್ಬಂದಿಗೆ ತರಬೇತಿ ನೀಡಲಾಗುವುದು’.</p>.<p>‘ಪ್ರಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ನೀಡಲಾಗುವ ಮಾರ್ಗಸೂಚಿಗಳನ್ನು ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಕಡ್ಡಾಯವಾಗಿ ಪಾಲಿಸಬೇಕು. ಕೋವಿಡ್ ಮಾರ್ಗಸೂಚಿಗಳನ್ನೂ ಅನುಸರಿಸಬೇಕು’ ಎಂದು ಸೂಚಿಸಿದರು.</p>.<p>‘ಆ. 16ರಂದು ಅಧಿಸೂಚನೆ ಹೊರಡಿಸಲಾಗುವುದು. ಅಂದಿನಿಂದಲೇ ಮಾದರಿ ನೀತಿಸಂಹಿತೆ ಜಾರಿಗೆ ಬರಲಿದೆ. ಎಲ್ಲ 58 ವಾರ್ಡ್ಗಳ ಚುನಾವಣಾಧಿಕಾರಿ/ ಸಹಾಯಕ ಚುನಾವಣಾಧಿಕಾರಿ ಕಚೇರಿಗಳನ್ನು ನಗರಪಾಲಿಕೆಯಲ್ಲಿ ಸ್ಥಾಪಿಸಲಾಗಿದೆ. ಎಲ್ಲ ಮತಗಟ್ಟೆಗಳನ್ನೂ ಶೇ 100ರಷ್ಟು ಪರಿಶೀಲಿಸಿ, ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಲಾಗಿದೆ. ಅಂತಿಮ ಮತದಾರರ ಪಟ್ಟಿಯನ್ನು ಜುಲೈ 9ರಂದೇ ಪ್ರಚುರಪಡಿಸಲಾಗಿದೆ. ಮತಪತ್ರದಲ್ಲಿ ಅಭ್ಯರ್ಥಿಗಳ ಭಾವಚಿತ್ರ ಮುದ್ರಿಸಲಾಗುವುದು’ ಎಂದು ಮಾಹಿತಿ ನೀಡಿದರು.</p>.<p class="Subhead">ಅಂಕಿ ಅಂಶ</p>.<p>4,28,364</p>.<p>ಒಟ್ಟು ಮತದಾರರು</p>.<p>2,13,526</p>.<p>ಪುರುಷರು</p>.<p>2,14838</p>.<p>ಮಹಿಳೆಯರು</p>.<p>402</p>.<p>ಮೂಲ ಮತಗಟ್ಟೆಗಳು</p>.<p>13</p>.<p>ಉಪ ಮತಗಟ್ಟೆಗಳು</p>.<p>415</p>.<p>ಒಟ್ಟು ಮತಗಟ್ಟೆಗಳು</p>.<p>12</p>.<p>ನೇಮಕವಾಗಿರುವ ಚುನಾವಣಾಧಿಕಾರಿಗಳು</p>.<p>12</p>.<p>ಸಹಾಯಕ ಚುನಾವಣಾಧಿಕಾರಿಗಳು</p>.<p>1,826</p>.<p>ಸಿಬ್ಬಂದಿ ನೇಮಕ</p>.<p class="Subhead">ಮಾರ್ಗಸೂಚಿ ಪಾಲನೆ</p>.<p>ಕೋವಿಡ್–19 ಮಾರ್ಗಸೂಚಿ ಅನ್ವಯ ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಿ, ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಲಾಗುವುದು.<br />–ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>