<p><strong>ಬೈಲಹೊಂಗಲ</strong>: ತಾಲ್ಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೆದ್ದಾರಿಯಲ್ಲಿ ಗುರುವಾರ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ, ಮೂರು ಕರುಗಳು ಮೃತಪಟ್ಟಿವೆ.</p>.<p>ಮಹಾರಾಷ್ಟ್ರ ನೋಂದಣಿ ಹೊಂದಿದ ಕ್ಯಾಂಟರ್ನಲ್ಲಿ 12 ಗೋವುಗಳನ್ನು ತುಂಬಿಕೊಂಡು ಸಾಗುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಪರಾರಿಯಾಗಿದ್ದಾನೆ. ಘಟನೆಯಲ್ಲಿ 3 ಕರುಗಳು ಮೃತಪಟ್ಟಿದ್ದು, ಎರಡು ಹಸುಗಳ ಸ್ಥಿತಿ ಗಂಭೀರವಾಗಿವೆ. ಏಳು ಹಸುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p>ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕ್ಯಾಂಟರ್ನಲ್ಲಿ ಸಿಲುಕಿದ್ದ ಹಸುಗಳನ್ನು ಹೊರ ತೆಗೆದರು. ಉಳಿದ 9 ಗೋವುಗಳನ್ನು ವಶಕ್ಕೆ ಪಡೆದು ಇಂಚಲದ ಗೋಶಾಲೆಗೆ ಸಾಗಿಸಿದರು.</p>.<p>ಸ್ಥಳಕ್ಕೆ ಸಿಪಿಐ ಪಂಚಾಕ್ಷರಿ ಸಾಲಿಮಠ, ಪಿಎಸ್ಐ ಗುರುರಾಜ ಕಲಬುರ್ಗಿ, ಸಿಬ್ಬಂದಿಗಳು ಭೇಟಿ ನೀಡಿ ತನಿಖೆ ನಡೆಸಿದರು.</p>.<p>ಹಿಂದೂಪರ ಸಂಘಟನೆ ಪ್ರಮುಖ ಕುಮಾರ ಗಣಾಚಾರಿ, ಈರಯ್ಯಾ ಚಿಕ್ಕಮಠ, ಶಿವಾನಂದ ಕಲ್ಲೂರ, ಅಭಿಷೇಕ ಬೆನಕಟ್ಟಿ, ನಾಗಪ್ಪ ಸಂಗೊಳ್ಳಿ, ಶಿವು ತಿಗಡಿ, ಮಂಜುನಾಥ ಕರಿಗಾರ ನೇತೃತ್ವದಲ್ಲಿ ಹಲವಾರು ಯುವಕರು ಗೋ ಸೇವೆ ಮಾಡಿದರು. ಮೃತ ಗೋವುಗಳ ಪೂಜೆ ಮಾಡಿ ಅಂತ್ಯಸಂಸ್ಕಾರ ನೆರವೇರಿಸಿದರು.</p>.<p>ಶ್ರೀರಾಮಸೇನೆ ಹಿಂದೂಸ್ತಾನ ಮುಖ್ಯಸ್ಥ ರಮಾಕಾಂತ ಕುಂಡಸ್ಕರ ಭೇಟಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಲಹೊಂಗಲ</strong>: ತಾಲ್ಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೆದ್ದಾರಿಯಲ್ಲಿ ಗುರುವಾರ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ, ಮೂರು ಕರುಗಳು ಮೃತಪಟ್ಟಿವೆ.</p>.<p>ಮಹಾರಾಷ್ಟ್ರ ನೋಂದಣಿ ಹೊಂದಿದ ಕ್ಯಾಂಟರ್ನಲ್ಲಿ 12 ಗೋವುಗಳನ್ನು ತುಂಬಿಕೊಂಡು ಸಾಗುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಪರಾರಿಯಾಗಿದ್ದಾನೆ. ಘಟನೆಯಲ್ಲಿ 3 ಕರುಗಳು ಮೃತಪಟ್ಟಿದ್ದು, ಎರಡು ಹಸುಗಳ ಸ್ಥಿತಿ ಗಂಭೀರವಾಗಿವೆ. ಏಳು ಹಸುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p>ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕ್ಯಾಂಟರ್ನಲ್ಲಿ ಸಿಲುಕಿದ್ದ ಹಸುಗಳನ್ನು ಹೊರ ತೆಗೆದರು. ಉಳಿದ 9 ಗೋವುಗಳನ್ನು ವಶಕ್ಕೆ ಪಡೆದು ಇಂಚಲದ ಗೋಶಾಲೆಗೆ ಸಾಗಿಸಿದರು.</p>.<p>ಸ್ಥಳಕ್ಕೆ ಸಿಪಿಐ ಪಂಚಾಕ್ಷರಿ ಸಾಲಿಮಠ, ಪಿಎಸ್ಐ ಗುರುರಾಜ ಕಲಬುರ್ಗಿ, ಸಿಬ್ಬಂದಿಗಳು ಭೇಟಿ ನೀಡಿ ತನಿಖೆ ನಡೆಸಿದರು.</p>.<p>ಹಿಂದೂಪರ ಸಂಘಟನೆ ಪ್ರಮುಖ ಕುಮಾರ ಗಣಾಚಾರಿ, ಈರಯ್ಯಾ ಚಿಕ್ಕಮಠ, ಶಿವಾನಂದ ಕಲ್ಲೂರ, ಅಭಿಷೇಕ ಬೆನಕಟ್ಟಿ, ನಾಗಪ್ಪ ಸಂಗೊಳ್ಳಿ, ಶಿವು ತಿಗಡಿ, ಮಂಜುನಾಥ ಕರಿಗಾರ ನೇತೃತ್ವದಲ್ಲಿ ಹಲವಾರು ಯುವಕರು ಗೋ ಸೇವೆ ಮಾಡಿದರು. ಮೃತ ಗೋವುಗಳ ಪೂಜೆ ಮಾಡಿ ಅಂತ್ಯಸಂಸ್ಕಾರ ನೆರವೇರಿಸಿದರು.</p>.<p>ಶ್ರೀರಾಮಸೇನೆ ಹಿಂದೂಸ್ತಾನ ಮುಖ್ಯಸ್ಥ ರಮಾಕಾಂತ ಕುಂಡಸ್ಕರ ಭೇಟಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>