ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಅಪಘಾತ: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳ ಸಾವು

Last Updated 8 ಜೂನ್ 2019, 14:16 IST
ಅಕ್ಷರ ಗಾತ್ರ

ನೇಸರಗಿ: ಇಲ್ಲಿಗೆ ಸಮೀಪದ ಮೇಕಲಮರಡಿ ಕ್ರಾಸ್ ಬಳಿ ಬೆಳಗಾವಿ– ಬಾಗಲಕೋಟೆ ಹೆದ್ದಾರಿಯ ಸೇತುವೆಗೆ ಶುಕ್ರವಾರ ರಾತ್ರಿ ಕಾರೊಂದು ಗುದ್ದಿದ ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಎಂಜಿನಿಯರಿಂಗ್‌ ಕಾಲೇಜ್‌ ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಥಣಿ ತಾಲ್ಲೂಕಿನ ಉಗಾರಖುರ್ದ ಗ್ರಾಮದ ಸಂತೋಷ ಮಾಳವಾಡಿ (22) ಹಾಗೂ ರಾಮದುರ್ಗ ತಾಲ್ಲೂಕಿನ ಸುನ್ನಾಳ ಗ್ರಾಮದ ಸಚಿನ ಮಾಳಿ(24) ಸಾವಿಗೀಡಾಗಿದ್ದಾರೆ. ಇವರು ಬೆಳಗಾವಿಯ ಖಾಸಗಿ ಎಂಜಿನಿಯರಿಂಗ್‌ ಕಾಲೇಜೊಂದರ ವಿದ್ಯಾರ್ಥಿಗಳಾಗಿದ್ದರು. ಬಾಗಲಕೋಟೆಯಿಂದ ಬೆಳಗಾವಿಗೆ ವಾಪಸ್ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ನೇಸರಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT