ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ಭೀತಿ ಮೂಡಿಸುವ ಪೋಸ್ಟ್: ಪ್ರಕರಣ ದಾಖಲು

Last Updated 10 ಆಗಸ್ಟ್ 2020, 14:18 IST
ಅಕ್ಷರ ಗಾತ್ರ

ಯಮಕನಮರಡಿ: ಹುಕ್ಕೇರಿ ತಾಲ್ಲೂಕಿನ ಮಣಗುತ್ತಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ತೆರವು ಸಂಬಂಧಿಸಿದಂತೆ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್ ಹಾಕಿದ್ದ ವ್ಯಕ್ತಿ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪುಣೆಯ, ಹಾಲಿ ಮೀರಜ್‌ನ ನಿವಾಸಿ ದಿನೇಶ ಕದಮ ಆರೋಪಿ.

‘ಗ್ರಾಮದಲ್ಲಿ ಅನಧಿಕೃತವಾಗಿ ಕೆಲವರು ಶಿವಾಜಿ ಪ್ರತಿಮೆ ಪ್ರತಿಷ್ಠಾಪಿಸಿದ್ದರು. ಅದನ್ನು ಹಿರಿಯರು ಹಾಗೂ ಸಮಾಜದ ಮುಖಂಡರು ಕೂಡಿ ತೆರವುಗೊಳಿಸಿದ್ದಾರೆ. ಆದರೆ, ಈ ಬಗ್ಗೆ ಆರೋಪಿಯು ಭಾಷೆಗಳು, ಜಾತಿಗಳ ನಡುವೆ ದ್ವೇಷ, ವೈಮನಸ್ಸು ಉಂಟು ಮಾಡುವ ಅಥವಾ ಬೆಳೆಸುವಂತಹ ವದಂತಿ ಹಬ್ಬಿಸುವ ಅಥವಾ ಅಪಾಯ ಭೀತಿ ಹುಟ್ಟಿಸುವ ಪೋಸ್ಟ್ ಮಾಡಿದ್ದರು. ಶಾಂತಿ ಹಾಗೂ ಸೌಹಾರ್ದಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT