ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಆಗಸ್ಟ್ ಹಾಗೂ ಸೆಪ್ಟೆಂಬರ್ನಲ್ಲಿ ಗ್ರಾಮ ಪಂಚಾಯ್ತಿಗಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ 2029–20 ಮತ್ತು 2020–21ರಲ್ಲಿ ವಿವಿಧ ಯೋಜನೆಗಳಲ್ಲಿ ಮಂಜೂರಾಗಿ ಕಾಮಗಾರಿಗಳು ವಿವಿಧ ಹಂತದಲ್ಲಿ ಸ್ಥಗಿತಗೊಂಡಿದ್ದುದು, ಇದರಿಂದ ಫಲಾನುಭವಿಗಳು ತೊಂದರೆ ಅನುಭವಿಸುತ್ತಿದ್ದುದು ಕಂಡುಬಂದಿತ್ತು. 2019–20ನೇ ಸಾಲಿನಲ್ಲಿ ಉಂಟಾದ ಪ್ರವಾಹದ ಸಂದರ್ಭದಲ್ಲಿ ಹಾನಿಗೊಳಗಾದ ಮನೆಗಳಿಗೆ ಹಣ ಬಿಡುಗಡೆ ಆಗಿರಲಿಲ್ಲ. ಈ ವಿಷಯವನ್ನು ಜನರು ಗಮನಕ್ಕೆ ತಂದಿದ್ದರು ಮತ್ತು ಹಣ ಬಿಡುಗಡೆಗೆ ಕೋರಿದ್ದರು’ ಎಂದು ಮಾಹಿತಿ ನೀಡಿದ್ದಾರೆ.