<p>ಬೆಳಗಾವಿ: ‘ನಮಗೆ ಜಾತಿ ಗಣತಿ ಬಗ್ಗೆ ಅಷ್ಟೊಂದು ಸಮಾಧಾನ ಮತ್ತು ತೃಪ್ತಿ ಇಲ್ಲ. ಹಾಗಾಗಿ ಮರು ಜಾತಿ ಗಣತಿ ಮಾಡಬೇಕು’ ಎಂದು ಶ್ರೀಶೈಲ ಪೀಠದ ಚನ್ನಸಿದ್ಧರಾಮ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲರನ್ನೂ ಸಂಪರ್ಕಿಸದೆ ಮಾಡಿದ ಜಾತಿ ಗಣತಿ ಅವೈಜ್ಞಾನಿಕವಾಗಿದೆ ಎಂಬುದು ನಮ್ಮ ಅಭಿಪ್ರಾಯವೂ ಆಗಿದೆ. ನಮ್ಮ ಸಮುದಾಯದ ಮಠಾಧೀಶರು, ಅಖಿಲ ಭಾರತ ವೀರಶೈವ ಮಹಾಸಭಾ ಅಭಿಪ್ರಾಯವೂ ಇದೇ ಆಗಿದೆ. ಸರ್ಕಾರ ಈ ವರದಿ ಜಾರಿಗಾಗಿ ಜಿದ್ದಿಗೆ ಬಿದ್ದರೆ, ಸಮಾಜದ ಹಿರಿಯರೆಲ್ಲ ಸೇರಿಕೊಂಡು ಚರ್ಚಿಸಿ ಮುಂದಿನ ಹೆಜ್ಜೆ ಬಗ್ಗೆ ನಿರ್ಣಯ ಕೈಗೊಳ್ಳುತ್ತೇವೆ’ ಎಂದರು.</p>.<p>‘ಅಲ್ಪಸಂಖ್ಯಾತರನ್ನು ಬಹುಸಂಖ್ಯಾತರೆಂದು ಬಿಂಬಿಸುತ್ತಿರುವುದನ್ನು ಮಹಾಸಭಾದ ಅಧಿವೇಶನದಲ್ಲೇ ಖಂಡಿಸಿದ್ದೇವೆ. ಮಹಾಸಭಾದೊಂದಿಗೆ ನಿರಂತರವಾಗಿ ಚರ್ಚಿಸುತ್ತಿದ್ದೇವೆ. ಮತ್ತೆ ಜಾತಿ ಗಣತಿ ಮಾಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತೇವೆ’ ಎಂದು ತಿಳಿಸಿದರು. </p>.<p>ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ನಮಗೆ ಜಾತಿ ಗಣತಿ ಬಗ್ಗೆ ಅಷ್ಟೊಂದು ಸಮಾಧಾನ ಮತ್ತು ತೃಪ್ತಿ ಇಲ್ಲ. ಹಾಗಾಗಿ ಮರು ಜಾತಿ ಗಣತಿ ಮಾಡಬೇಕು’ ಎಂದು ಶ್ರೀಶೈಲ ಪೀಠದ ಚನ್ನಸಿದ್ಧರಾಮ ಶಿವಾಚಾರ್ಯ ಸ್ವಾಮೀಜಿ ಹೇಳಿದರು.</p>.<p>ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲರನ್ನೂ ಸಂಪರ್ಕಿಸದೆ ಮಾಡಿದ ಜಾತಿ ಗಣತಿ ಅವೈಜ್ಞಾನಿಕವಾಗಿದೆ ಎಂಬುದು ನಮ್ಮ ಅಭಿಪ್ರಾಯವೂ ಆಗಿದೆ. ನಮ್ಮ ಸಮುದಾಯದ ಮಠಾಧೀಶರು, ಅಖಿಲ ಭಾರತ ವೀರಶೈವ ಮಹಾಸಭಾ ಅಭಿಪ್ರಾಯವೂ ಇದೇ ಆಗಿದೆ. ಸರ್ಕಾರ ಈ ವರದಿ ಜಾರಿಗಾಗಿ ಜಿದ್ದಿಗೆ ಬಿದ್ದರೆ, ಸಮಾಜದ ಹಿರಿಯರೆಲ್ಲ ಸೇರಿಕೊಂಡು ಚರ್ಚಿಸಿ ಮುಂದಿನ ಹೆಜ್ಜೆ ಬಗ್ಗೆ ನಿರ್ಣಯ ಕೈಗೊಳ್ಳುತ್ತೇವೆ’ ಎಂದರು.</p>.<p>‘ಅಲ್ಪಸಂಖ್ಯಾತರನ್ನು ಬಹುಸಂಖ್ಯಾತರೆಂದು ಬಿಂಬಿಸುತ್ತಿರುವುದನ್ನು ಮಹಾಸಭಾದ ಅಧಿವೇಶನದಲ್ಲೇ ಖಂಡಿಸಿದ್ದೇವೆ. ಮಹಾಸಭಾದೊಂದಿಗೆ ನಿರಂತರವಾಗಿ ಚರ್ಚಿಸುತ್ತಿದ್ದೇವೆ. ಮತ್ತೆ ಜಾತಿ ಗಣತಿ ಮಾಡಬೇಕೆಂದು ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತೇವೆ’ ಎಂದು ತಿಳಿಸಿದರು. </p>.<p>ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>