ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ ಅಧಿಕಾರಿಗಳು

Last Updated 7 ನವೆಂಬರ್ 2020, 2:41 IST
ಅಕ್ಷರ ಗಾತ್ರ

ಬೆಳಗಾವಿ: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಇಲ್ಲಿನ ಹಿಂಡಲಗಾ ಕಾರಾಗೃಹದಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ಶನಿವಾರ ಮುಂಜಾನೆ ಕರೆದೊಯ್ದರು.

ಮೂರು ದಿನಗಳವರೆಗೆ ತಮ್ಮ ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು, ಅವರನ್ನು ಹೆಚ್ಚಿನ‌ ವಿಚಾರಣೆಗೆ ಒಳಪಡಿಸಲಿದ್ದಾರೆ.

ಶುಕ್ರವಾರ ಇಲ್ಲಿನ ಕಾರಾಗೃಹಕ್ಕೆ ಅವರನ್ನು ಕರೆತರಲಾಗಿತ್ತು. ಅವರನ್ನು ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ನ್ಯಾಯಾಲಯ ಶುಕ್ರವಾರ ಆದೇಶಿಸಿತ್ತು.

ನ್ಯಾಯಾಲಯದ ಆದೇಶ ಪ್ರತಿಯನ್ನು ಜೈಲಿನ ಅಧಿಕಾರಿಗಳಿಗೆ ಹಾಜರುಪಡಿಸಿದ ಸಿಬಿಐ ಅಧಿಕಾರಿಗಳು ಪ್ರಕ್ರಿಯೆ ಪೂರ್ಣಗೊಳಿಸಿ ತಮ್ಮ ವಶಕ್ಕೆ ಪಡೆದರು.

ಇಂದು ವಿನಯ ಹುಟ್ಟುಹಬ್ಬವೂ ಹೌದು. ಹುಟ್ಟುಹಬ್ಬ ಆಚರಿಸಿಕೊಳ್ಳಲಾಗಲಿಲ್ಲ ಎಂಬ ದುಗುಡ ಅವರ ಮುಖದಲ್ಲಿ ಕಾಣಿಸುತ್ತಿತ್ತು.

ಅವರನ್ನು ಸಿಬಿಐ ಅಧಿಕಾರಿಗಳು ಎಲ್ಲಿಗೆ ಕರೆದುಕೊಂಡು ಎನ್ನುವ ಮಾಹಿತಿ ಲಭ್ಯವಾಗಲಿಲ್ಲ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT