<p><strong>ಬೆಳಗಾವಿ: </strong>ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಇಲ್ಲಿನ ಹಿಂಡಲಗಾ ಕಾರಾಗೃಹದಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ಶನಿವಾರ ಮುಂಜಾನೆ ಕರೆದೊಯ್ದರು.</p>.<p>ಮೂರು ದಿನಗಳವರೆಗೆ ತಮ್ಮ ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು, ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಿದ್ದಾರೆ.</p>.<p>ಶುಕ್ರವಾರ ಇಲ್ಲಿನ ಕಾರಾಗೃಹಕ್ಕೆ ಅವರನ್ನು ಕರೆತರಲಾಗಿತ್ತು. ಅವರನ್ನು ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ನ್ಯಾಯಾಲಯ ಶುಕ್ರವಾರ ಆದೇಶಿಸಿತ್ತು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/former-congress-minister-vinay-kulakarni-arrested-in-murder-case-776660.html" target="_blank">ಯೋಗೀಶಗೌಡ ಕೊಲೆ ಪ್ರಕರಣ:ಕಾಂಗ್ರೆಸ್ನಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ</a></p>.<p>ನ್ಯಾಯಾಲಯದ ಆದೇಶ ಪ್ರತಿಯನ್ನು ಜೈಲಿನ ಅಧಿಕಾರಿಗಳಿಗೆ ಹಾಜರುಪಡಿಸಿದ ಸಿಬಿಐ ಅಧಿಕಾರಿಗಳು ಪ್ರಕ್ರಿಯೆ ಪೂರ್ಣಗೊಳಿಸಿ ತಮ್ಮ ವಶಕ್ಕೆ ಪಡೆದರು.</p>.<p>ಇಂದು ವಿನಯ ಹುಟ್ಟುಹಬ್ಬವೂ ಹೌದು. ಹುಟ್ಟುಹಬ್ಬ ಆಚರಿಸಿಕೊಳ್ಳಲಾಗಲಿಲ್ಲ ಎಂಬ ದುಗುಡ ಅವರ ಮುಖದಲ್ಲಿ ಕಾಣಿಸುತ್ತಿತ್ತು.</p>.<p>ಅವರನ್ನು ಸಿಬಿಐ ಅಧಿಕಾರಿಗಳು ಎಲ್ಲಿಗೆ ಕರೆದುಕೊಂಡು ಎನ್ನುವ ಮಾಹಿತಿ ಲಭ್ಯವಾಗಲಿಲ್ಲ.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/district/dharwad/former-minister-vinay-kulkarni-for-3-days-in-cbi-custody-776972.html" target="_blank">ಮಾಜಿ ಸಚಿವ ವಿನಯ ಕುಲಕರ್ಣಿ ಮೂರು ದಿನ ಸಿಬಿಐ ವಶಕ್ಕೆ</a></p>.<p><a href="https://www.prajavani.net/district/dharwad/yogesh-gouda-murder-vinay-kulkarni-protest-near-police-station-776769.html" target="_blank">ವಿನಯ್ ಕುಲಕರ್ಣಿ ಬಂಧನ: ಠಾಣೆ ಎದುರು ಪ್ರತಿಭಟನೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಇಲ್ಲಿನ ಹಿಂಡಲಗಾ ಕಾರಾಗೃಹದಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ಶನಿವಾರ ಮುಂಜಾನೆ ಕರೆದೊಯ್ದರು.</p>.<p>ಮೂರು ದಿನಗಳವರೆಗೆ ತಮ್ಮ ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು, ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಿದ್ದಾರೆ.</p>.<p>ಶುಕ್ರವಾರ ಇಲ್ಲಿನ ಕಾರಾಗೃಹಕ್ಕೆ ಅವರನ್ನು ಕರೆತರಲಾಗಿತ್ತು. ಅವರನ್ನು ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ನ್ಯಾಯಾಲಯ ಶುಕ್ರವಾರ ಆದೇಶಿಸಿತ್ತು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/former-congress-minister-vinay-kulakarni-arrested-in-murder-case-776660.html" target="_blank">ಯೋಗೀಶಗೌಡ ಕೊಲೆ ಪ್ರಕರಣ:ಕಾಂಗ್ರೆಸ್ನಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ</a></p>.<p>ನ್ಯಾಯಾಲಯದ ಆದೇಶ ಪ್ರತಿಯನ್ನು ಜೈಲಿನ ಅಧಿಕಾರಿಗಳಿಗೆ ಹಾಜರುಪಡಿಸಿದ ಸಿಬಿಐ ಅಧಿಕಾರಿಗಳು ಪ್ರಕ್ರಿಯೆ ಪೂರ್ಣಗೊಳಿಸಿ ತಮ್ಮ ವಶಕ್ಕೆ ಪಡೆದರು.</p>.<p>ಇಂದು ವಿನಯ ಹುಟ್ಟುಹಬ್ಬವೂ ಹೌದು. ಹುಟ್ಟುಹಬ್ಬ ಆಚರಿಸಿಕೊಳ್ಳಲಾಗಲಿಲ್ಲ ಎಂಬ ದುಗುಡ ಅವರ ಮುಖದಲ್ಲಿ ಕಾಣಿಸುತ್ತಿತ್ತು.</p>.<p>ಅವರನ್ನು ಸಿಬಿಐ ಅಧಿಕಾರಿಗಳು ಎಲ್ಲಿಗೆ ಕರೆದುಕೊಂಡು ಎನ್ನುವ ಮಾಹಿತಿ ಲಭ್ಯವಾಗಲಿಲ್ಲ.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/district/dharwad/former-minister-vinay-kulkarni-for-3-days-in-cbi-custody-776972.html" target="_blank">ಮಾಜಿ ಸಚಿವ ವಿನಯ ಕುಲಕರ್ಣಿ ಮೂರು ದಿನ ಸಿಬಿಐ ವಶಕ್ಕೆ</a></p>.<p><a href="https://www.prajavani.net/district/dharwad/yogesh-gouda-murder-vinay-kulkarni-protest-near-police-station-776769.html" target="_blank">ವಿನಯ್ ಕುಲಕರ್ಣಿ ಬಂಧನ: ಠಾಣೆ ಎದುರು ಪ್ರತಿಭಟನೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>