ಬೆಳಗಾವಿ: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಇಲ್ಲಿನ ಹಿಂಡಲಗಾ ಕಾರಾಗೃಹದಲ್ಲಿದ್ದ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ಶನಿವಾರ ಮುಂಜಾನೆ ಕರೆದೊಯ್ದರು.
ಮೂರು ದಿನಗಳವರೆಗೆ ತಮ್ಮ ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು, ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಿದ್ದಾರೆ.
ಶುಕ್ರವಾರ ಇಲ್ಲಿನ ಕಾರಾಗೃಹಕ್ಕೆ ಅವರನ್ನು ಕರೆತರಲಾಗಿತ್ತು. ಅವರನ್ನು ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ನ್ಯಾಯಾಲಯ ಶುಕ್ರವಾರ ಆದೇಶಿಸಿತ್ತು.