<p><strong>ಬೆಳಗಾವಿ:</strong> ‘ರಾಜ್ಯದಾದ್ಯಂತ ಎಲ್ಲ ಬಸ್ ನಿಲ್ದಾಣಗಳು ಮತ್ತು ದೂರದ ಊರುಗಳಿಗೆ ತೆರಳುವ ಬಸ್ಗಳಲ್ಲಿ ಭದ್ರತಾ ಕ್ರಮವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಲಾಗುವುದು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿ ಸೋಮವಾರ ನಡೆದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ(ಎನ್ಡಬ್ಲ್ಯುಕೆಆರ್ಟಿಸಿ) ಪ್ರಗತಿ ಪರಿಶೀಲನೆ ಸಭೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ಬೆಂಗಳೂರಿನ ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳಿವೆ. ಇದೇ ಮಾದರಿಯಲ್ಲಿ ಎಲ್ಲ ನಿಲ್ದಾಣಗಳಲ್ಲಿ ಅಳವಡಿಸುವ ನಿಟ್ಟಿನಲ್ಲಿ ರಾಮಲಿಂಗಾರೆಡ್ಡಿ ಅವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು’ ಎಂದರು.</p>.<p>‘ಯಲ್ಲಮ್ಮನಗುಡ್ಡದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ₹100 ಕೋಟಿ ಅನುದಾನ ನೀಡಿದರೂ ಸಭೆಗೆ ನನ್ನನ್ನು ಆಹ್ವಾನಿಸುತ್ತಿಲ್ಲ’ ಎಂಬ ಸಂಸದ ಜಗದೀಶ ಶೆಟ್ಟರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸತೀಶ, ‘ಜಗದೀಶ ಶೆಟ್ಟರ್ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಕಾರದ ಸದಸ್ಯರಲ್ಲ. ಹಾಗಾಗಿ ಸಭೆಗೆ ಆಹ್ವಾನಿಸುತ್ತಿಲ್ಲ’ ಎಂದರು.</p>.<p>‘ಎನ್ಡಬ್ಲ್ಯುಕೆಆರ್ಟಿಸಿಯಲ್ಲಿ 300 ಬಸ್ಗಳ ಖರೀದಿಗೆ ಅನುಮತಿ ಸಿಕ್ಕಿದೆ. ಹಂತ ಹಂತವಾಗಿ ಬಸ್ಗಳು ಸಿದ್ಧವಾಗಿ ಬಂದ ನಂತರ, ಬೇಡಿಕೆ ಇರುವ ಘಟಕಗಳಿಗೆ ಒದಗಿಸುತ್ತೇವೆ’ ಎಂದು ಎನ್ಡಬ್ಲ್ಯುಕೆಆರ್ಟಿಸಿ ಅಧ್ಯಕ್ಷ ಭರಮಗೌಡ(ರಾಜು) ಕಾಗೆ ಹೇಳಿದರು.</p>.<p>‘ಈ ಹಿಂದೆ 2,814 ಸಿಬ್ಬಂದಿ ನೇಮಕಕ್ಕೆ ಆದೇಶವಾಗಿತ್ತು. ಈ ಪೈಕಿ 1 ಸಾವಿರ ಸಿಬ್ಬಂದಿ ನೇಮಕಕ್ಕೆ ಆರ್ಥಿಕ ಇಲಾಖೆ ಈಗ ಅನುಮತಿ ಕೊಟ್ಟಿದೆ. ಉಳಿದ ಹುದ್ದೆ ತುಂಬಲು ಕ್ರಮ ವಹಿಸುತ್ತೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ರಾಜ್ಯದಾದ್ಯಂತ ಎಲ್ಲ ಬಸ್ ನಿಲ್ದಾಣಗಳು ಮತ್ತು ದೂರದ ಊರುಗಳಿಗೆ ತೆರಳುವ ಬಸ್ಗಳಲ್ಲಿ ಭದ್ರತಾ ಕ್ರಮವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಲಾಗುವುದು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿ ಸೋಮವಾರ ನಡೆದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ(ಎನ್ಡಬ್ಲ್ಯುಕೆಆರ್ಟಿಸಿ) ಪ್ರಗತಿ ಪರಿಶೀಲನೆ ಸಭೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.</p>.<p>‘ಬೆಂಗಳೂರಿನ ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳಿವೆ. ಇದೇ ಮಾದರಿಯಲ್ಲಿ ಎಲ್ಲ ನಿಲ್ದಾಣಗಳಲ್ಲಿ ಅಳವಡಿಸುವ ನಿಟ್ಟಿನಲ್ಲಿ ರಾಮಲಿಂಗಾರೆಡ್ಡಿ ಅವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು’ ಎಂದರು.</p>.<p>‘ಯಲ್ಲಮ್ಮನಗುಡ್ಡದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ₹100 ಕೋಟಿ ಅನುದಾನ ನೀಡಿದರೂ ಸಭೆಗೆ ನನ್ನನ್ನು ಆಹ್ವಾನಿಸುತ್ತಿಲ್ಲ’ ಎಂಬ ಸಂಸದ ಜಗದೀಶ ಶೆಟ್ಟರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸತೀಶ, ‘ಜಗದೀಶ ಶೆಟ್ಟರ್ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಕಾರದ ಸದಸ್ಯರಲ್ಲ. ಹಾಗಾಗಿ ಸಭೆಗೆ ಆಹ್ವಾನಿಸುತ್ತಿಲ್ಲ’ ಎಂದರು.</p>.<p>‘ಎನ್ಡಬ್ಲ್ಯುಕೆಆರ್ಟಿಸಿಯಲ್ಲಿ 300 ಬಸ್ಗಳ ಖರೀದಿಗೆ ಅನುಮತಿ ಸಿಕ್ಕಿದೆ. ಹಂತ ಹಂತವಾಗಿ ಬಸ್ಗಳು ಸಿದ್ಧವಾಗಿ ಬಂದ ನಂತರ, ಬೇಡಿಕೆ ಇರುವ ಘಟಕಗಳಿಗೆ ಒದಗಿಸುತ್ತೇವೆ’ ಎಂದು ಎನ್ಡಬ್ಲ್ಯುಕೆಆರ್ಟಿಸಿ ಅಧ್ಯಕ್ಷ ಭರಮಗೌಡ(ರಾಜು) ಕಾಗೆ ಹೇಳಿದರು.</p>.<p>‘ಈ ಹಿಂದೆ 2,814 ಸಿಬ್ಬಂದಿ ನೇಮಕಕ್ಕೆ ಆದೇಶವಾಗಿತ್ತು. ಈ ಪೈಕಿ 1 ಸಾವಿರ ಸಿಬ್ಬಂದಿ ನೇಮಕಕ್ಕೆ ಆರ್ಥಿಕ ಇಲಾಖೆ ಈಗ ಅನುಮತಿ ಕೊಟ್ಟಿದೆ. ಉಳಿದ ಹುದ್ದೆ ತುಂಬಲು ಕ್ರಮ ವಹಿಸುತ್ತೇವೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>