‘ಗ್ರಾಮದ ಅಭಿವೃದ್ಧಿಗೆ ಪಂಚಾಯ್ತಿಯಿಂದ ಆದ್ಯತೆ ನೀಡಿದ್ದೇವೆ. ಉದ್ಯಾನ, ಹೈಟೆಕ್ ಡಿಜಿಟಲ್ ಲೈಬ್ರರಿ, ಸಭಾಭವನ, ಕೆರೆ ಅಭಿವೃದ್ಧಿ, ಶಾಲೆಗೆ ಕಾಂಪೌಂಡ್, ಆಟದ ಮೈದಾನ, ಮಳೆ ನೀರು ಸಂಗ್ರಹ ವ್ಯವಸ್ಥೆ, ಇಂಗು ಗುಂಡಿ ಮಾಡಲಾಗಿದೆ. ₹ 58 ಲಕ್ಷ ವೆಚ್ಚದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನಲ್ಲಿ ನೀರು ಪೂರೈಕೆ ಮಾಡುವ ಕಾಮಗಾರಿ ಪ್ರಗತಿಯಲ್ಲಿದೆ. ವೀರವನಿತೆ ಬೆಳವಡಿ ಮಲ್ಲಮ್ಮಳ ನಾಡಿನಲ್ಲಿ ಜನಿಸಿದ್ದು ನಮ್ಮ ಹೆಮ್ಮೆ. ಈ ಗ್ರಾಮದ ಸಮಗ್ರ ಅಭಿವೃದ್ಧಿ ನಮ್ಮ ಧ್ಯೇಯವಾಗಿದೆ’ ಎಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆರೇಣುಕಾ ಕುರಿ ತಿಳಿಸಿದರು.