‘ಬಸವ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಬೇಕು ಎಂದು ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಅದಕ್ಕಾಗಿ ತಯಾರಿಯನ್ನೂ ಮಾಡಿಕೊಳ್ಳಲಾಗಿತ್ತು. ಆದರೆ, ಕೊರೊನಾ ವೈರಾಣು ಹರಡುವ ಭೀತಿಯಿಂದಾಗಿ ಸಾರ್ವಜನಿಕ ಆಚರಣೆ ರದ್ದುಪಡಿಸಲಾಗಿದೆ. ಸೋಂಕು ಹರಡದಂತೆ ನೋಡಿಕೊಳ್ಳಲು ಅಂತರ ಕಾಯ್ದುಕೊಳ್ಳುವ ಅನಿವಾರ್ಯತೆ ಇರುವುದರಿಂದಾಗಿ ಎಲ್ಲರೂ ಮನೆಯಲ್ಲೇ ಕುಟುಂಬದವರೊಂದಿಗೆ ವಚನ ಪಠಣ ಮಾಡುತ್ತಾ ಜಯಂತಿ ಆಚರಿಸಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.