<p><strong>ಹುಕ್ಕೇರಿ</strong>: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಕಲ್ಯಾಣ ಸಂಸ್ಥೆ, ಕರಗುಪ್ಪಿಯ ನಮ್ಮೂರ ಬಾನುಲಿ ಸಮುದಾಯ ರೇಡಿಯೊ ಕೇಂದ್ರದ ಆಶ್ರಯದಲ್ಲಿ ಪಟ್ಟಣದ ವಿರಕ್ತಮಠದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಗ್ರಾಮೀಣ ಭಾಗದ ಕಿಶೋರಿಯರಿಗೆ ಚರ್ಚಾ ಸ್ಪರ್ಧೆ ಆಯೋಜಿಸಲಾಗಿತ್ತು.</p>.<p>ಸಂಪನ್ಮೂಲ ವ್ಯಕ್ತಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎ.ಕರಗುಪ್ಪಿ ಮಾತನಾಡಿ, ‘ನವ ವಿವಾಹಿತರು ಕುಟುಂಬ ಯೋಜನಾ ವಿಧಾನಗಳ ಬಗ್ಗೆ ಸ್ಥಳೀಯ ಆರೋಗ್ಯ ಸಂಸ್ಥೆಗಳಿಗೆ ಸಂಪರ್ಕಿಸಿ ಮಾಹಿತಿ ಪಡೆಯಬೇಕು’ ಎಂದರು.</p>.<p>‘ಜನಸಂಖ್ಯೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಕಿಶೋರಿಯರಿಗೆ ಅರಿವು ಮೂಡಿಸುವುದು ಇಂದಿನ ಅಗತ್ಯ. ಗ್ರಾಮೀಣ ಪ್ರದೇಶದಲ್ಲಿ ಇನ್ನೂ ಕಡಿಮೆಯಾಗದ ಬಾಲ್ಯವಿವಾಹ, ಲಿಂಗ ಅಸಮಾನತೆ, ಲೈಂಗಿಕ ಶೋಷಣೆ ಬಗ್ಗೆ ಅರಿವು ಮೂಡಿಸಬೇಕಾಗಿದೆ’ ಎಂದರು.</p>.<p>ತಾಲ್ಲೂಕಿನ ಕರ್ನಾಟಕ ಪಬ್ಲಿಕ್ ಶಾಲೆ ಯರಗಟ್ಟಿಯ ಕಿರಣ ಚೌಗಲಾ, ‘ಮಹಿಳಾ ಕಲ್ಯಾಣ ಸಂಸ್ಥೆಯು ಸಖಿ ಯೋಜನೆಯಡಿ ಕಿಶೋರಿಯರಿಗಾಗಿ ವಿವಿಧ ಕಾರ್ಯಕ್ರಮಗಳ ಮೂಲಕ ಜನಸಂಖ್ಯಾ ನಿಯಂತ್ರಣ, ಬಾಲ್ಯವಿವಾಹ, ಮಹಿಳೆಯರ ಮತ್ತು ಮಕ್ಕಳ ಮಾರಾಟ, ಲಿಂಗ ತಾರತಮ್ಯ ಕುರಿತು ನಿರಂತರವಾಗಿ ಅರಿವು ಮೂಡಿಸುತ್ತಿದೆ’ ಎಂದರು.</p>.<p>ಭಾಷಣ ಸ್ಪರ್ಧೆಯಲ್ಲಿ ಹುಕ್ಕೇರಿ ತಾಲ್ಲೂಕಿನ ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p>ವಿಜೇತರು: ಜಿ.ಎಚ್.ಎಸ್. ಅವರಗೋಳ ಸರ್ಕಾರಿ ಪ್ರೌಢಶಾಲೆಯ ಲಲಿತಾ ಓಂಕಾರ ಪ್ರಥಮ, ದ್ವಿತೀಯ ಸ್ಥಾನವನ್ನು ಜಿ.ಎಸ್.ಎಸ್.ಶಿರಗಾಂವ ಪ್ರೌಢಶಾಲೆಯ ಸುಮಾ ಪಂತೋಜಿ ದ್ವಿತೀಯ ಹಾಗೂ ಗುಡಸ್ ಬಿ.ಎಂ.ಅಮ್ಮಣಗಿ ಪ್ರೌಢಶಾಲೆಯ ಸೃಷ್ಟಿ ಭೂಸನ್ನವರ ತೃತೀಯ ಸ್ಥಾನ ಪಡೆದರು.</p>.<p>ಹುಲ್ಲೋಳಿ ಸರ್ಕಾರಿ ಪ್ರೌಢಶಾಲೆಯ ಅರ್ಚನಾ ತಂಗಡಿ, ಗುಡಸ್ ಬಿ.ಎಂ. ಅಮ್ಮಣಗಿ, ಪ್ರೌಢಶಾಲೆಯ ವರ್ಷ ಹೊನ್ನಾಗೋಳ ಹಾಗೂ ಅಮ್ಮಣಗಿ ಸರ್ಕಾರಿ ಪ್ರೌಢಶಾಲೆಯ ಲಕ್ಷ್ಮೀ ವಾಳಕಿ ಸಮಾಧಾನ ಬಹುಮಾನ ಪಡೆದರು.</p>.<p>ಶಿಕ್ಷಕ ಎ.ಬಿ. ಗೋಡಗೇರಿ, ಪ್ರಾಚಾರ್ಯ ಕಿರಣ ಚೌಗಲಾ, ಸುಗಂಧಾ ಅಲ್ಲೊಟ್ಟಿ ಸೇರಿದಂತೆ ಪಾಲಕರು, ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ</strong>: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಕಲ್ಯಾಣ ಸಂಸ್ಥೆ, ಕರಗುಪ್ಪಿಯ ನಮ್ಮೂರ ಬಾನುಲಿ ಸಮುದಾಯ ರೇಡಿಯೊ ಕೇಂದ್ರದ ಆಶ್ರಯದಲ್ಲಿ ಪಟ್ಟಣದ ವಿರಕ್ತಮಠದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಗ್ರಾಮೀಣ ಭಾಗದ ಕಿಶೋರಿಯರಿಗೆ ಚರ್ಚಾ ಸ್ಪರ್ಧೆ ಆಯೋಜಿಸಲಾಗಿತ್ತು.</p>.<p>ಸಂಪನ್ಮೂಲ ವ್ಯಕ್ತಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಿ.ಎ.ಕರಗುಪ್ಪಿ ಮಾತನಾಡಿ, ‘ನವ ವಿವಾಹಿತರು ಕುಟುಂಬ ಯೋಜನಾ ವಿಧಾನಗಳ ಬಗ್ಗೆ ಸ್ಥಳೀಯ ಆರೋಗ್ಯ ಸಂಸ್ಥೆಗಳಿಗೆ ಸಂಪರ್ಕಿಸಿ ಮಾಹಿತಿ ಪಡೆಯಬೇಕು’ ಎಂದರು.</p>.<p>‘ಜನಸಂಖ್ಯೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಕಿಶೋರಿಯರಿಗೆ ಅರಿವು ಮೂಡಿಸುವುದು ಇಂದಿನ ಅಗತ್ಯ. ಗ್ರಾಮೀಣ ಪ್ರದೇಶದಲ್ಲಿ ಇನ್ನೂ ಕಡಿಮೆಯಾಗದ ಬಾಲ್ಯವಿವಾಹ, ಲಿಂಗ ಅಸಮಾನತೆ, ಲೈಂಗಿಕ ಶೋಷಣೆ ಬಗ್ಗೆ ಅರಿವು ಮೂಡಿಸಬೇಕಾಗಿದೆ’ ಎಂದರು.</p>.<p>ತಾಲ್ಲೂಕಿನ ಕರ್ನಾಟಕ ಪಬ್ಲಿಕ್ ಶಾಲೆ ಯರಗಟ್ಟಿಯ ಕಿರಣ ಚೌಗಲಾ, ‘ಮಹಿಳಾ ಕಲ್ಯಾಣ ಸಂಸ್ಥೆಯು ಸಖಿ ಯೋಜನೆಯಡಿ ಕಿಶೋರಿಯರಿಗಾಗಿ ವಿವಿಧ ಕಾರ್ಯಕ್ರಮಗಳ ಮೂಲಕ ಜನಸಂಖ್ಯಾ ನಿಯಂತ್ರಣ, ಬಾಲ್ಯವಿವಾಹ, ಮಹಿಳೆಯರ ಮತ್ತು ಮಕ್ಕಳ ಮಾರಾಟ, ಲಿಂಗ ತಾರತಮ್ಯ ಕುರಿತು ನಿರಂತರವಾಗಿ ಅರಿವು ಮೂಡಿಸುತ್ತಿದೆ’ ಎಂದರು.</p>.<p>ಭಾಷಣ ಸ್ಪರ್ಧೆಯಲ್ಲಿ ಹುಕ್ಕೇರಿ ತಾಲ್ಲೂಕಿನ ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p>ವಿಜೇತರು: ಜಿ.ಎಚ್.ಎಸ್. ಅವರಗೋಳ ಸರ್ಕಾರಿ ಪ್ರೌಢಶಾಲೆಯ ಲಲಿತಾ ಓಂಕಾರ ಪ್ರಥಮ, ದ್ವಿತೀಯ ಸ್ಥಾನವನ್ನು ಜಿ.ಎಸ್.ಎಸ್.ಶಿರಗಾಂವ ಪ್ರೌಢಶಾಲೆಯ ಸುಮಾ ಪಂತೋಜಿ ದ್ವಿತೀಯ ಹಾಗೂ ಗುಡಸ್ ಬಿ.ಎಂ.ಅಮ್ಮಣಗಿ ಪ್ರೌಢಶಾಲೆಯ ಸೃಷ್ಟಿ ಭೂಸನ್ನವರ ತೃತೀಯ ಸ್ಥಾನ ಪಡೆದರು.</p>.<p>ಹುಲ್ಲೋಳಿ ಸರ್ಕಾರಿ ಪ್ರೌಢಶಾಲೆಯ ಅರ್ಚನಾ ತಂಗಡಿ, ಗುಡಸ್ ಬಿ.ಎಂ. ಅಮ್ಮಣಗಿ, ಪ್ರೌಢಶಾಲೆಯ ವರ್ಷ ಹೊನ್ನಾಗೋಳ ಹಾಗೂ ಅಮ್ಮಣಗಿ ಸರ್ಕಾರಿ ಪ್ರೌಢಶಾಲೆಯ ಲಕ್ಷ್ಮೀ ವಾಳಕಿ ಸಮಾಧಾನ ಬಹುಮಾನ ಪಡೆದರು.</p>.<p>ಶಿಕ್ಷಕ ಎ.ಬಿ. ಗೋಡಗೇರಿ, ಪ್ರಾಚಾರ್ಯ ಕಿರಣ ಚೌಗಲಾ, ಸುಗಂಧಾ ಅಲ್ಲೊಟ್ಟಿ ಸೇರಿದಂತೆ ಪಾಲಕರು, ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>