ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಗೃಹ ಸಚಿವರು, ವಿತ್ತ ಸಚಿವರು ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಕೇಂದ್ರದ ಅಧಿಕಾರಿಗಳ ತಂಡವೂ ಬಂದು ಹೋಗಿದೆ. ರಾಜ್ಯ ಸರ್ಕಾರವೂ ವರದಿ ಸಲ್ಲಿಸಿದೆ. ಅನುದಾನ ಬಿಡುಗಡೆ ವಿಷಯವನ್ನು ಪ್ರಧಾನಿ ಹಾಗೂ ಗೃಹ ಸಚಿವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದಾರೆ’ ಎಂದರು.