ಬಿಜೆಪಿ ಗ್ರಾಮೀಣ ಮಂಡಳದ ಅಧ್ಯಕ್ಷ ಧನಂಜಯ ಜಾಧವ, ‘ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಾರಿಗೊಳಿಸಿರುವ ಜಲಜೀವನ ಯೋಜನೆಯ ಶ್ರೇಯಸ್ಸನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ತಮ್ಮದೇ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಸಂಬಂಧಿಸಿದ ಗುತ್ತಿಗೆದಾರರು ಕಡ್ಡಾಯವಾಗಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಈ ಭಾಗದ ಸಂಸದರು, ಶಾಸಕರು ಹಾಗೂ ಗ್ರಾಮ ಪಂಚಾಯ್ತಿ ಅಧ್ಯಕ್ಷರ ಭಾವಚಿತ್ರವನ್ನು ಕಾಮಗಾರಿಯ ಫಲಕದಲ್ಲಿ ಅಳವಡಿಸಬೇಕು’ ಎಂದು ಒತ್ತಾಯಿಸದರು.