<p><strong>ಅಥಣಿ:</strong> ತಾಲ್ಲೂಕಿನ ಹಾಲಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಆ.20ರಂದು ನಡೆದ ಸರಗಳ್ಳತನ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.</p><p>ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮೀರಜ್ ತಾಲ್ಲೂಕಿನ ಲಿಂಗನೂರ ಗ್ರಾಮದ ಪ್ರದೀಪ ನಾಯಿಕ, ರಾಜೇಂದ್ರ ನಾಯಿಕ, ಅಂಕುಶ ಲೋಹಾರ ಬಂಧಿತರು. ಅವರಿಂದ ಎರಡು ದ್ವಿಚಕ್ರ ವಾಹನ, ₹6 ಲಕ್ಷ ಮೌಲ್ಯದ 60 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.</p><p>‘ಗೌರವ್ವ ಕಲಶೆಟ್ಟಿ ಅವರು, ಹಾಲಳ್ಳಿ ಬಸ್ ನಿಲ್ದಾಣದಿಂದ ತೆಲಸಂಗ ರಸ್ತೆ ಮಾರ್ಗವಾಗಿ ತಮ್ಮ ಜಮೀನಿಗೆ ಹೊರಟಿದ್ದರು. ಆಗ ಬೈಕ್ನಲ್ಲಿ ಬಂದ ಇಬ್ಬರು ಕಳ್ಳರು, ಮಹಿಳೆ ಕೊರಳಲ್ಲಿದ್ದ ಮಂಗಳಸೂತ್ರ, ಚಿನ್ನದ ಸರ ಕದ್ದು ಪರಾರಿಯಾಗಿದ್ದರು. ಈ ಬಗ್ಗೆ ಐಗಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಬಗ್ಗೆ ಕನಿಷ್ಠ ಸುಳಿವು ಇರದಿದ್ದರೂ, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ 15 ದಿನಗಳಲ್ಲಿ ಬಂಧಿಸಿದ್ದೇವೆ’ ಎಂದು ಎಸ್ಪಿ ಡಾ.ಭೀಮಾಶಂಕರ ಗುಳೇದ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p><p>‘ಐಗಳಿ ಠಾಣೆಯಲ್ಲಿ ದಾಖಲಾದ 4, ಅಥಣಿ ಠಾಣೆಯ 2, ರಾಯಬಾಗ, ಕುಡಚಿ ಮತ್ತು ಮಹಾರಾಷ್ಟ್ರದ ಮೀರಜ್ ಗ್ರಾಮೀಣ ಠಾಣೆ ತಲಾ 1 ಸೇರಿದಂತೆ 9 ಪ್ರಕರಣಗಳಲ್ಲಿ ಆರೋಪಿಗಳು ಕಳ್ಳತನ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ತನಿಖೆ ಮುಂದುವರಿದಿದೆ’ ಎಂದರು.</p>.ಬೆಳಗಾವಿ | ಪಿಸ್ತೂಲ್ ತೋರಿಸಿ ದರೋಡೆಗೆ ಯತ್ನ: ಇಬ್ಬರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ:</strong> ತಾಲ್ಲೂಕಿನ ಹಾಲಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಆ.20ರಂದು ನಡೆದ ಸರಗಳ್ಳತನ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.</p><p>ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮೀರಜ್ ತಾಲ್ಲೂಕಿನ ಲಿಂಗನೂರ ಗ್ರಾಮದ ಪ್ರದೀಪ ನಾಯಿಕ, ರಾಜೇಂದ್ರ ನಾಯಿಕ, ಅಂಕುಶ ಲೋಹಾರ ಬಂಧಿತರು. ಅವರಿಂದ ಎರಡು ದ್ವಿಚಕ್ರ ವಾಹನ, ₹6 ಲಕ್ಷ ಮೌಲ್ಯದ 60 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.</p><p>‘ಗೌರವ್ವ ಕಲಶೆಟ್ಟಿ ಅವರು, ಹಾಲಳ್ಳಿ ಬಸ್ ನಿಲ್ದಾಣದಿಂದ ತೆಲಸಂಗ ರಸ್ತೆ ಮಾರ್ಗವಾಗಿ ತಮ್ಮ ಜಮೀನಿಗೆ ಹೊರಟಿದ್ದರು. ಆಗ ಬೈಕ್ನಲ್ಲಿ ಬಂದ ಇಬ್ಬರು ಕಳ್ಳರು, ಮಹಿಳೆ ಕೊರಳಲ್ಲಿದ್ದ ಮಂಗಳಸೂತ್ರ, ಚಿನ್ನದ ಸರ ಕದ್ದು ಪರಾರಿಯಾಗಿದ್ದರು. ಈ ಬಗ್ಗೆ ಐಗಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಬಗ್ಗೆ ಕನಿಷ್ಠ ಸುಳಿವು ಇರದಿದ್ದರೂ, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ 15 ದಿನಗಳಲ್ಲಿ ಬಂಧಿಸಿದ್ದೇವೆ’ ಎಂದು ಎಸ್ಪಿ ಡಾ.ಭೀಮಾಶಂಕರ ಗುಳೇದ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p><p>‘ಐಗಳಿ ಠಾಣೆಯಲ್ಲಿ ದಾಖಲಾದ 4, ಅಥಣಿ ಠಾಣೆಯ 2, ರಾಯಬಾಗ, ಕುಡಚಿ ಮತ್ತು ಮಹಾರಾಷ್ಟ್ರದ ಮೀರಜ್ ಗ್ರಾಮೀಣ ಠಾಣೆ ತಲಾ 1 ಸೇರಿದಂತೆ 9 ಪ್ರಕರಣಗಳಲ್ಲಿ ಆರೋಪಿಗಳು ಕಳ್ಳತನ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ತನಿಖೆ ಮುಂದುವರಿದಿದೆ’ ಎಂದರು.</p>.ಬೆಳಗಾವಿ | ಪಿಸ್ತೂಲ್ ತೋರಿಸಿ ದರೋಡೆಗೆ ಯತ್ನ: ಇಬ್ಬರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>