<p><strong>ಬೆಳಗಾವಿ</strong>: ಕ್ರೆಡಾಯ್ (ಕಾನ್ಫೆಡರೇಷನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಷನ್) ಕರ್ನಾಟಕ ಅಧ್ಯಕ್ಷರಾಗಿ ಇಲ್ಲಿನ ಚೈತನ್ಯ ಕುಲಕರ್ಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಶುಕ್ರವಾರ ವರ್ಚುವಲ್ ವೇದಿಕೆಯಲ್ಲಿ ನಡೆದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ 2021-23ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಇದೇ ಮೊದಲ ಬಾರಿಗೆ ಬೆಂಗಳೂರಿನ ಹೊರಗಿನ ಸದಸ್ಯರೊಬ್ಬರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p>ನಿಕಟಪೂರ್ವ ಅಧ್ಯಕ್ಷ ಆಸ್ಟಿನ್ ರೋಚ್ ಅವರು ಚೈತನ್ಯ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ವಿಜಯಪುರದ ಅನುಪಮ್ ರುನುವಾಲ್ (ಕಾರ್ಯದರ್ಶಿ), ಬೆಂಗಳೂರಿನ ಶಿವರಾಮ ಕುಮಾರ ಮಲಕಾಲ (ಖಜಾಂಚಿ), ಸಂಜೋಗ್ ರಾಠಿ ಮತ್ತು ಡಿ.ಬಿ. ಮೆಹ್ತಾ (ಉಪಾಧ್ಯಕ್ಷರು), ಕೈಸ್ ನೂರಾನಿ ಹಾಗೂ ಸಿರಾಜ್ ಅಹ್ಮದ್ (ಜಂಟಿ ಕಾರ್ಯದರ್ಶಿ), ಪ್ರದೀಪ್ ಡಿ.ರಾಯ್ಕರ್ (ಪ್ರೆಸಿಡೆಂಟ್ ಎಲೆಕ್ಟ್) ಆಗಿ ಆಯ್ಕೆಯಾದರು.</p>.<p>ರಾಷ್ಟ್ರೀಯ ಉಪಾಧ್ಯಕ್ಷ ಜಿ.ರಾಮ ರಡ್ಡಿ ಮುಖ್ಯಅತಿಥಿಯಾಗಿ ಪಾಲ್ಗೊಂಡಿದ್ದರು. ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಶಂಕರ ಶಾಸ್ತ್ರಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ರಾಷ್ಟ್ರೀಯ ಸಮಿತಿ ಸದಸ್ಯ ಬಾಲಕೃಷ್ಣ ಹೆಗಡೆ, ರಾಷ್ಟ್ರೀಯ ಮಾಜಿ ಉಪಾಧ್ಯಕ್ಷ ನಾಗರಾಜ ರೆಡ್ಡಿ, ರಾಷ್ಟ್ರೀಯ ಸಮಿತಿ ಸದಸ್ಯ ಕೆ. ಶ್ರೀರಾಮ, ಕರ್ನಾಟಕ ಶಾಖೆಯ ಮಾಜಿ ಅಧ್ಯಕ್ಷ ಜಗದೀಶ ಬಾಬು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಕ್ರೆಡಾಯ್ (ಕಾನ್ಫೆಡರೇಷನ್ ಆಫ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಅಸೋಸಿಯೇಷನ್) ಕರ್ನಾಟಕ ಅಧ್ಯಕ್ಷರಾಗಿ ಇಲ್ಲಿನ ಚೈತನ್ಯ ಕುಲಕರ್ಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಶುಕ್ರವಾರ ವರ್ಚುವಲ್ ವೇದಿಕೆಯಲ್ಲಿ ನಡೆದ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ 2021-23ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಇದೇ ಮೊದಲ ಬಾರಿಗೆ ಬೆಂಗಳೂರಿನ ಹೊರಗಿನ ಸದಸ್ಯರೊಬ್ಬರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<p>ನಿಕಟಪೂರ್ವ ಅಧ್ಯಕ್ಷ ಆಸ್ಟಿನ್ ರೋಚ್ ಅವರು ಚೈತನ್ಯ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ವಿಜಯಪುರದ ಅನುಪಮ್ ರುನುವಾಲ್ (ಕಾರ್ಯದರ್ಶಿ), ಬೆಂಗಳೂರಿನ ಶಿವರಾಮ ಕುಮಾರ ಮಲಕಾಲ (ಖಜಾಂಚಿ), ಸಂಜೋಗ್ ರಾಠಿ ಮತ್ತು ಡಿ.ಬಿ. ಮೆಹ್ತಾ (ಉಪಾಧ್ಯಕ್ಷರು), ಕೈಸ್ ನೂರಾನಿ ಹಾಗೂ ಸಿರಾಜ್ ಅಹ್ಮದ್ (ಜಂಟಿ ಕಾರ್ಯದರ್ಶಿ), ಪ್ರದೀಪ್ ಡಿ.ರಾಯ್ಕರ್ (ಪ್ರೆಸಿಡೆಂಟ್ ಎಲೆಕ್ಟ್) ಆಗಿ ಆಯ್ಕೆಯಾದರು.</p>.<p>ರಾಷ್ಟ್ರೀಯ ಉಪಾಧ್ಯಕ್ಷ ಜಿ.ರಾಮ ರಡ್ಡಿ ಮುಖ್ಯಅತಿಥಿಯಾಗಿ ಪಾಲ್ಗೊಂಡಿದ್ದರು. ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಶಂಕರ ಶಾಸ್ತ್ರಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ರಾಷ್ಟ್ರೀಯ ಸಮಿತಿ ಸದಸ್ಯ ಬಾಲಕೃಷ್ಣ ಹೆಗಡೆ, ರಾಷ್ಟ್ರೀಯ ಮಾಜಿ ಉಪಾಧ್ಯಕ್ಷ ನಾಗರಾಜ ರೆಡ್ಡಿ, ರಾಷ್ಟ್ರೀಯ ಸಮಿತಿ ಸದಸ್ಯ ಕೆ. ಶ್ರೀರಾಮ, ಕರ್ನಾಟಕ ಶಾಖೆಯ ಮಾಜಿ ಅಧ್ಯಕ್ಷ ಜಗದೀಶ ಬಾಬು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>