<p><strong>ಬೆಳಗಾವಿ</strong>: ‘ಹುಕ್ಕೇರಿ ತಾಲ್ಲೂಕಿನ ಇಂಗಳಿಯಲ್ಲಿ ಶ್ರೀರಾಮ ಸೇನೆ ಸಂಘಟನೆಯ ಐವರು ಕಾರ್ಯಕರ್ತನ್ನು ಮರಕ್ಕೆ ಕಟ್ಟಿ ಥಳಿಸಿದ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ, ಜುಲೈ 3ರಂದು ‘ಚಲೋ ಇಂಗಳಿ’ ಹೋರಾಟ ಕೈಗೊಳ್ಳುತ್ತೇವೆ’ ಎಂದು ಶ್ರೀರಾಮ ಸೇನೆ ರಾಜ್ಯ ಘಟಕದ ಅಧ್ಯಕ್ಷ ಗಂಗಾಧರ ಕುಲಕರ್ಣಿ ಎಚ್ಚರಿಕೆ ನೀಡಿದರು.</p>.<p>‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರು ಘಟನೆಗೆ ಸಂಬಂಧಿಸಿ ಸುಳ್ಳಿನ ಕಂತೆ ಸೃಷ್ಟಿಸಿದ್ದಾರೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಸಂಘಟನೆಯ ಕಾರ್ಯಕರ್ತನಿಗೆ ರೌಡಿಶೀಟರ್ ಎನ್ನುವ ಅವರು, ಬೇರೆ ಪ್ರಕರಣಗಳಲ್ಲಿ ಯಾವ ರೀತಿ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡಿದ್ದಾರೆ ಎಂಬುದು ಗೊತ್ತಿದೆ’ ಎಂದರು.</p>.<p>ಮುಖಂಡರ ಹೇಳಿಕೆಗೆ ಆಕ್ಷೇಪ: ಇಂಗಳಿಯಲ್ಲಿ ಸೋಮವಾರ ರಾತ್ರಿ ಎಲ್ಲ ಸಮುದಾಯಗಳ ಹಿರಿಯರು ಸಭೆ ನಡೆಸಿ, ‘ನಮ್ಮೂರಿನಲ್ಲಿ ಹಿಂದೂ– ಮುಸ್ಲಿಮರು ಒಗ್ಗಟ್ಟಿನಿಂದ ಇದ್ದೇವೆ. ಹೊರಗಿನವರು ನಮ್ಮೂರಿಗೆ ಬರುವ ಅವಶ್ಯಕತೆ ಇಲ್ಲ’ ಎಂದರು.</p>.<p>ಇದಕ್ಕೆ ಗಂಗಾಧರ ಕುಲಕರ್ಣಿ ಅವರು, ‘ಸಂಘಟನೆಯ ಕಾರ್ಯಕರ್ತರನ್ನು ಹೊಡೆಯುವಾಗ ಗ್ರಾಮದ ಹಿರಿಯರು ಎಲ್ಲಿದ್ದರು? ಹೊರಗಿನವರು ನಮ್ಮೂರಿಗೆ ಬರಬೇಡಿ ಎನ್ನಲು ಇವರ್ಯಾರು’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಹುಕ್ಕೇರಿ ತಾಲ್ಲೂಕಿನ ಇಂಗಳಿಯಲ್ಲಿ ಶ್ರೀರಾಮ ಸೇನೆ ಸಂಘಟನೆಯ ಐವರು ಕಾರ್ಯಕರ್ತನ್ನು ಮರಕ್ಕೆ ಕಟ್ಟಿ ಥಳಿಸಿದ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ, ಜುಲೈ 3ರಂದು ‘ಚಲೋ ಇಂಗಳಿ’ ಹೋರಾಟ ಕೈಗೊಳ್ಳುತ್ತೇವೆ’ ಎಂದು ಶ್ರೀರಾಮ ಸೇನೆ ರಾಜ್ಯ ಘಟಕದ ಅಧ್ಯಕ್ಷ ಗಂಗಾಧರ ಕುಲಕರ್ಣಿ ಎಚ್ಚರಿಕೆ ನೀಡಿದರು.</p>.<p>‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರು ಘಟನೆಗೆ ಸಂಬಂಧಿಸಿ ಸುಳ್ಳಿನ ಕಂತೆ ಸೃಷ್ಟಿಸಿದ್ದಾರೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಸಂಘಟನೆಯ ಕಾರ್ಯಕರ್ತನಿಗೆ ರೌಡಿಶೀಟರ್ ಎನ್ನುವ ಅವರು, ಬೇರೆ ಪ್ರಕರಣಗಳಲ್ಲಿ ಯಾವ ರೀತಿ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡಿದ್ದಾರೆ ಎಂಬುದು ಗೊತ್ತಿದೆ’ ಎಂದರು.</p>.<p>ಮುಖಂಡರ ಹೇಳಿಕೆಗೆ ಆಕ್ಷೇಪ: ಇಂಗಳಿಯಲ್ಲಿ ಸೋಮವಾರ ರಾತ್ರಿ ಎಲ್ಲ ಸಮುದಾಯಗಳ ಹಿರಿಯರು ಸಭೆ ನಡೆಸಿ, ‘ನಮ್ಮೂರಿನಲ್ಲಿ ಹಿಂದೂ– ಮುಸ್ಲಿಮರು ಒಗ್ಗಟ್ಟಿನಿಂದ ಇದ್ದೇವೆ. ಹೊರಗಿನವರು ನಮ್ಮೂರಿಗೆ ಬರುವ ಅವಶ್ಯಕತೆ ಇಲ್ಲ’ ಎಂದರು.</p>.<p>ಇದಕ್ಕೆ ಗಂಗಾಧರ ಕುಲಕರ್ಣಿ ಅವರು, ‘ಸಂಘಟನೆಯ ಕಾರ್ಯಕರ್ತರನ್ನು ಹೊಡೆಯುವಾಗ ಗ್ರಾಮದ ಹಿರಿಯರು ಎಲ್ಲಿದ್ದರು? ಹೊರಗಿನವರು ನಮ್ಮೂರಿಗೆ ಬರಬೇಡಿ ಎನ್ನಲು ಇವರ್ಯಾರು’ ಎಂದು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>