ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಡಾ.ಗಜಾನನ ನಾಯ್ಕ, ‘ಬಸವಲಿಂಗಯ್ಯ ಅವರು ರಂಗಶಿಕ್ಷಣವನ್ನು ನಿನಾಸಂನಲ್ಲಿ ಪಡೆದು, ಉತ್ತರ ಕರ್ನಾಟಕದ ಗಮನಾರ್ಹ ಜಾನಪದ ರಂಗಕಲಾವಿದರಾಗಿದ್ದರು. ಸುಗಮ ಸಂಗೀತ, ರಂಗಗೀತೆಗಳನ್ನು ಮತ್ತು ಕುಲಗೋಡದ ಅಪರಾಳ ತಮ್ಮಣ್ಣ, ಶ್ರೀಕೃಷ್ಣ ಪಾರಿಜಾತ, 12 ತಾಸಿನ ನಾಟಕವನ್ನು ಮೂರು ತಾಸಿಗೆ ತಂದು ಜನಮನ್ನಣೆ ಪಡೆದಿದ್ದ ಕಂಚಿನ ಕಂಠದ ಗಾಯಕರಾಗಿದ್ದರು. ಹಲವು ಪ್ರಶಸ್ತಿಗೆ ಭಾಜನವಾಗಿದ್ದರು. ಅವರ ಅಗಲಿಕೆಯಿಂದ ಜಾನಪದ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ’ ಎಂದು ಕಂಬನಿ ಮಿಡಿದರು.