‘ಅಧಿವೇಶನದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು, ಎಂಇಎಸ್ ಮತ್ತು ಶಿವಸೇನಾ ಕಾರ್ಯಕರ್ತರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗುವುದು ಎಂದು ಅಧಿಕೃತವಾಗಿ ಘೋಷಿಸಿದ್ದರು. ಇದಕ್ಕಾಗಿ ಕನ್ನಡಪರ ಸಂಘಟನೆಗಳಿಂದ ಸರ್ಕಾರವನ್ನು ಅಭಿನಂದಿಸಲಾಗಿತ್ತು. ಮೊಟ್ಟ ಮೊದಲಿಗೆ ಕಠಿಣ ಕ್ರಮಕ್ಕೆ ಮುಂದಾಗಿದ್ದಕ್ಕೆ ಸ್ವಾಗತಿಸಿದ್ದೆವು. ಆದರೆ, ದೋಷಾರೋಪ ಪಟ್ಟಿಯಲ್ಲಿ ಆರೋಪಿಗಳ ವಿರುದ್ಧ ದೇಶದ್ರೋಹದ ಪ್ರಕರಣ ಕೈಬಿಟ್ಟಿರುವ ಬಗ್ಗೆ ವರದಿಗಳು ಬರುತ್ತಿವೆ. ಸರ್ಕಾರದ ಈ ನಡೆ ಖಂಡನೀಯ’ ಎಂದರು.