<p><strong>ಚನ್ನಮ್ಮನ ಕಿತ್ತೂರು:</strong> ಇಲ್ಲಿಯ ಸೋಮವಾರ ಪೇಟೆಯ ಕಸಾಯಿ ಗಲ್ಲಿಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕೂಡಿ ಹಾಕಲಾಗಿದೆ ಹಾಗೂ ಎರಡು ಹಸುಗಳನ್ನು ಹತ್ಯೆ ಮಾಡಲಾಗಿದೆ ಎಂಬ ದೂರಿನ ಮೇರೆಗೆ ಕಿತ್ತೂರು ಪೊಲೀಸರು ಕರ್ನಾಟಕ ಗೋ ಹತ್ಯೆ ನಿಷೇಧ ಹಾಗೂ ಜಾನುವಾರು ಸಂರಕ್ಷಣಾ ಕಾಯ್ದೆ ಅಡಿ 6 ಜನರ ವಿರುದ್ಧ ಶುಕ್ರವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಫಾರುಖ್ ಇಸ್ಮಾಯಿಲ್ ಬೇಪಾರಿ, ದಾದಾಫೀರ್ ಮಹಮ್ಮದಶರೀಫ್ ಬೇಪಾರಿ, ಮುಜಮಿಲ್ ನೂರಅಹ್ಮದ್ ಬೇಪಾರಿ, ಅಮಾನ್ ಮಹಮ್ಮದಲಿ ಬೇಪಾರಿ, ಮಹಮ್ಮದಯೂಸುಫ್ ಮಹಮ್ಮದಉಸ್ಮಾನ್ ಬೇಪಾರಿ ಹಾಗೂ ಖಲೀಲಅಹ್ಮದ್ ಜಮೀಲಅಹ್ಮದ್ ಪಠಾಣ ಆರೋಪಿಗಳು.</p>.<p>ಬಕ್ರೀದ್ ಹಿನ್ನೆಲೆಯಲ್ಲಿ ಹಸು, ಎತ್ತು, ಕರುಗಳನ್ನು ಅಕ್ರಮವಾಗಿ ಕೂಡಿ ಹಾಕಲಾಗಿತ್ತು. ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಬಜರಂಗದಳ ಕಾರ್ಯಕರ್ತರು ಸ್ಥಳಕ್ಕೆ ತೆರಳಿದಾಗ ಪ್ರಕ್ಷುಬ್ದ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಪಟ್ಟಣದಲ್ಲಿ ನಿಯೋಜಿಸಲಾಗಿತ್ತು.</p>.<p>ರಕ್ಷಣೆ ಮಾಡಿರುವ ಎಲ್ಲ ಜಾನುವಾರುಗಳನ್ನು ಧಾರವಾಡ ತಾಲ್ಲೂಕಿನ ಮದನಬಾವಿ ಬಳಿಯಿರುವ ಸರ್ಕಾರಿ ಗೋಶಾಲೆಗೆ ಕಳುಹಿಸಿಕೊಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಬಜರಂಗದಳ ರಾಜ್ಯ ಸಂಘಟನೆಯ ಸಹಸಂಚಾಲಕ ಶಿವಾನಂದ ಸತ್ತಿಗೇರಿ ಮಾತನಾಡಿ, ಅಕ್ರಮವಾಗಿ ಗೋಹತ್ಯೆ ಮಾಡುತ್ತಿರುವ ಎಲ್ಲರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು. ವಧೆ ಮಾಡುವ ಮನೆಯನ್ನು ಪೊಲೀಸರು ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.</p>.<p>ಹಿರೇಬಾಗೇವಾಡಿ: ಸಾರಾಯಿ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿದ್ದ ಗ್ರಾಮದ ಬಸವನಗರ ನಿವಾಸಿ ಬಸವರಾಜ ಚಂದ್ರಶೇಖರ ದೂಳಪ್ಪನವರ (50) ಎಂಬುವವನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.</p>.<p>ಬಸಾಪುರ ರಸ್ತೆಯಲ್ಲಿ ಮಾರಾಟದ ಉದ್ದೇಶದಿಂದ ಸಂಗ್ರಹಿಸಿದ್ದಾಗ ಹಿರೇಬಾಗೇವಾಡಿ ಪೊಲೀಸರು ದಾಳಿ ನಡೆಸಿ ಆರೋಪಿಯಿಂದ ₹3,680 ಮೌಲ್ಯದ ಸಾರಾಯಿ ಪ್ಯಾಕೇಟ್ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-21-79089426</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಮ್ಮನ ಕಿತ್ತೂರು:</strong> ಇಲ್ಲಿಯ ಸೋಮವಾರ ಪೇಟೆಯ ಕಸಾಯಿ ಗಲ್ಲಿಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕೂಡಿ ಹಾಕಲಾಗಿದೆ ಹಾಗೂ ಎರಡು ಹಸುಗಳನ್ನು ಹತ್ಯೆ ಮಾಡಲಾಗಿದೆ ಎಂಬ ದೂರಿನ ಮೇರೆಗೆ ಕಿತ್ತೂರು ಪೊಲೀಸರು ಕರ್ನಾಟಕ ಗೋ ಹತ್ಯೆ ನಿಷೇಧ ಹಾಗೂ ಜಾನುವಾರು ಸಂರಕ್ಷಣಾ ಕಾಯ್ದೆ ಅಡಿ 6 ಜನರ ವಿರುದ್ಧ ಶುಕ್ರವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಫಾರುಖ್ ಇಸ್ಮಾಯಿಲ್ ಬೇಪಾರಿ, ದಾದಾಫೀರ್ ಮಹಮ್ಮದಶರೀಫ್ ಬೇಪಾರಿ, ಮುಜಮಿಲ್ ನೂರಅಹ್ಮದ್ ಬೇಪಾರಿ, ಅಮಾನ್ ಮಹಮ್ಮದಲಿ ಬೇಪಾರಿ, ಮಹಮ್ಮದಯೂಸುಫ್ ಮಹಮ್ಮದಉಸ್ಮಾನ್ ಬೇಪಾರಿ ಹಾಗೂ ಖಲೀಲಅಹ್ಮದ್ ಜಮೀಲಅಹ್ಮದ್ ಪಠಾಣ ಆರೋಪಿಗಳು.</p>.<p>ಬಕ್ರೀದ್ ಹಿನ್ನೆಲೆಯಲ್ಲಿ ಹಸು, ಎತ್ತು, ಕರುಗಳನ್ನು ಅಕ್ರಮವಾಗಿ ಕೂಡಿ ಹಾಕಲಾಗಿತ್ತು. ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಬಜರಂಗದಳ ಕಾರ್ಯಕರ್ತರು ಸ್ಥಳಕ್ಕೆ ತೆರಳಿದಾಗ ಪ್ರಕ್ಷುಬ್ದ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಪಟ್ಟಣದಲ್ಲಿ ನಿಯೋಜಿಸಲಾಗಿತ್ತು.</p>.<p>ರಕ್ಷಣೆ ಮಾಡಿರುವ ಎಲ್ಲ ಜಾನುವಾರುಗಳನ್ನು ಧಾರವಾಡ ತಾಲ್ಲೂಕಿನ ಮದನಬಾವಿ ಬಳಿಯಿರುವ ಸರ್ಕಾರಿ ಗೋಶಾಲೆಗೆ ಕಳುಹಿಸಿಕೊಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>ಬಜರಂಗದಳ ರಾಜ್ಯ ಸಂಘಟನೆಯ ಸಹಸಂಚಾಲಕ ಶಿವಾನಂದ ಸತ್ತಿಗೇರಿ ಮಾತನಾಡಿ, ಅಕ್ರಮವಾಗಿ ಗೋಹತ್ಯೆ ಮಾಡುತ್ತಿರುವ ಎಲ್ಲರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು. ವಧೆ ಮಾಡುವ ಮನೆಯನ್ನು ಪೊಲೀಸರು ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.</p>.<p>ಹಿರೇಬಾಗೇವಾಡಿ: ಸಾರಾಯಿ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿದ್ದ ಗ್ರಾಮದ ಬಸವನಗರ ನಿವಾಸಿ ಬಸವರಾಜ ಚಂದ್ರಶೇಖರ ದೂಳಪ್ಪನವರ (50) ಎಂಬುವವನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.</p>.<p>ಬಸಾಪುರ ರಸ್ತೆಯಲ್ಲಿ ಮಾರಾಟದ ಉದ್ದೇಶದಿಂದ ಸಂಗ್ರಹಿಸಿದ್ದಾಗ ಹಿರೇಬಾಗೇವಾಡಿ ಪೊಲೀಸರು ದಾಳಿ ನಡೆಸಿ ಆರೋಪಿಯಿಂದ ₹3,680 ಮೌಲ್ಯದ ಸಾರಾಯಿ ಪ್ಯಾಕೇಟ್ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-21-79089426</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>