<p>ಚನ್ನಮ್ಮನ ಕಿತ್ತೂರು: ‘ಸಣ್ಣ ಹೋಟೆಲ್ ನಡೆಸುವವರಿಗೆ ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಸಮರ್ಪಕವಾಗಿ ಆಗುತ್ತಿಲ್ಲ. ಈ ಲೋಪ ಸರಿಪಡಿಸಬೇಕು’ ಎಂದು ಆಗ್ರಹಿಸಿ ಹೋಟೆಲ್ ಮಾಲೀಕರ ಸಂಘಟನೆ ಸದಸ್ಯರು ಗ್ರೇಡ್ 2 ತಹಶೀಲ್ದಾರ್ ಪಿ. ವೈ. ಕೋರಿ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು.</p>.<p>ಬಳಿಕ ಮಾತನಾಡಿದ ಕರ್ನಾಟಕ ಯುವ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಕಿರಣ ವಾಳದ ಮಾತನಾಡಿ, ‘ಬಡವರು ಚಿಕ್ಕ, ಚಿಕ್ಕ ಹೋಟೆಲ್ ಇಟ್ಟುಕೊಂಡು ಉಪಜೀವನ ನಡೆಸಿಕೊಂಡು ಹೊರಟಿದ್ದಾರೆ. ಅವರಿಗೆಲ್ಲ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.</p>.<p>ಗೃಹ ಮತ್ತು ವಾಣಿಜ್ಯ ಬಳಕೆಯ ಸಿಲಿಂಡರ್ ಕೊರತೆಯಿಲ್ಲ ಎಂದು ಜಿಲ್ಲಾಧಿಕಾರಿ ಈಗಾಗಲೇ ಹೇಳಿಕೆ ನೀಡಿದ್ದಾರೆ. ಸಿಲಿಂಡರ್ ಪೂರೈಕೆಯ ಏಜೆನ್ಸಿ ಅವರನ್ನು ಕರೆದು ಸಮರ್ಪಕ ಪೂರೈಕೆ ಮಾಡುವಂತೆ ತಾಕೀತು ಮಾಡುತ್ತೇವೆ ಎಂದು ಗ್ರೇಡ್ 2 ತಹಶೀಲ್ದಾರ್ ಕೋರಿ ತಿಳಿಸಿದರು.ಗಣೇಶಪ್ರಸಾದ್, ಪೈ, ದುರ್ಗಾಂಬಾ, ಮಂದಾರ್ತಿ, ಮಹಾಲಕ್ಷ್ಮಿ, ದರ್ಶಿನಿ, ಗಜರಾಜ ಕ್ಯಾಂಟೀನ್, ಸಾಯಿ ಫಾಸ್ಟ್ ಪುಢ್, ವಿಜೇತಾ ಹೋಟೆಲ್ ಮಾಲೀಕರು, ಬಸವರಾಜ ಸಂಪಗಾವಿ, ಉಮೇಶ ಹುಂಬಿ, ಶಂಕರ ಗಂಗಪ್ಪನವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-21-1905598785</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಮ್ಮನ ಕಿತ್ತೂರು: ‘ಸಣ್ಣ ಹೋಟೆಲ್ ನಡೆಸುವವರಿಗೆ ವಾಣಿಜ್ಯ ಬಳಕೆ ಸಿಲಿಂಡರ್ ಪೂರೈಕೆ ಸಮರ್ಪಕವಾಗಿ ಆಗುತ್ತಿಲ್ಲ. ಈ ಲೋಪ ಸರಿಪಡಿಸಬೇಕು’ ಎಂದು ಆಗ್ರಹಿಸಿ ಹೋಟೆಲ್ ಮಾಲೀಕರ ಸಂಘಟನೆ ಸದಸ್ಯರು ಗ್ರೇಡ್ 2 ತಹಶೀಲ್ದಾರ್ ಪಿ. ವೈ. ಕೋರಿ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು.</p>.<p>ಬಳಿಕ ಮಾತನಾಡಿದ ಕರ್ನಾಟಕ ಯುವ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಕಿರಣ ವಾಳದ ಮಾತನಾಡಿ, ‘ಬಡವರು ಚಿಕ್ಕ, ಚಿಕ್ಕ ಹೋಟೆಲ್ ಇಟ್ಟುಕೊಂಡು ಉಪಜೀವನ ನಡೆಸಿಕೊಂಡು ಹೊರಟಿದ್ದಾರೆ. ಅವರಿಗೆಲ್ಲ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.</p>.<p>ಗೃಹ ಮತ್ತು ವಾಣಿಜ್ಯ ಬಳಕೆಯ ಸಿಲಿಂಡರ್ ಕೊರತೆಯಿಲ್ಲ ಎಂದು ಜಿಲ್ಲಾಧಿಕಾರಿ ಈಗಾಗಲೇ ಹೇಳಿಕೆ ನೀಡಿದ್ದಾರೆ. ಸಿಲಿಂಡರ್ ಪೂರೈಕೆಯ ಏಜೆನ್ಸಿ ಅವರನ್ನು ಕರೆದು ಸಮರ್ಪಕ ಪೂರೈಕೆ ಮಾಡುವಂತೆ ತಾಕೀತು ಮಾಡುತ್ತೇವೆ ಎಂದು ಗ್ರೇಡ್ 2 ತಹಶೀಲ್ದಾರ್ ಕೋರಿ ತಿಳಿಸಿದರು.ಗಣೇಶಪ್ರಸಾದ್, ಪೈ, ದುರ್ಗಾಂಬಾ, ಮಂದಾರ್ತಿ, ಮಹಾಲಕ್ಷ್ಮಿ, ದರ್ಶಿನಿ, ಗಜರಾಜ ಕ್ಯಾಂಟೀನ್, ಸಾಯಿ ಫಾಸ್ಟ್ ಪುಢ್, ವಿಜೇತಾ ಹೋಟೆಲ್ ಮಾಲೀಕರು, ಬಸವರಾಜ ಸಂಪಗಾವಿ, ಉಮೇಶ ಹುಂಬಿ, ಶಂಕರ ಗಂಗಪ್ಪನವರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-21-1905598785</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>