<p>ಚನ್ನಮ್ಮನ ಕಿತ್ತೂರು: ಗ್ಯಾರಂಟಿ ಯೋಜನೆಗಳ ಸವಲತ್ತುಗಳು ನೈಜ ಫಲಾನುಭವಿಗೆ ಸಮರ್ಪಕವಾಗಿ ತಲುಪಿಸಲು ಅಧಿಕಾರಿಗಳು ಮತ್ತಷ್ಟು ದಕ್ಷತೆ ಹಾಗೂ ಸಮನ್ವಯದಿಂದ ಕೆಲಸ ನಿರ್ವಹಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಿಂಗಪ್ಪ ಮಸಳಿ ಸಲಹೆ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ಜವಾಬ್ದಾರಿ ಮತ್ತು ಸಮನ್ವಯತೆ ಪ್ರಮುಖ ಪಾತ್ರ ವಹಿಸುತ್ತವೆ. ಈ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಉತ್ತಮ ಫಲಿತಾಂಶ ಸಾಧಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.</p>.<p>ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷ ರುದ್ರಯ್ಯ ಹಿರೇಮಠ ಮಾತನಾಡಿ, ಸರ್ಕಾರದ ಈ ಯೋಜನೆಗಳು ಸಾಮಾನ್ಯ ಜನರ ಜೀವನಮಟ್ಟವನ್ನು ಉತ್ತಮಗೊಳಿಸುವಲ್ಲಿ ಹೆಚ್ಚು ಪರಿಣಾಮಕಾರಿ ಆಗಿವೆ ಎಂದರು.</p>.<p>ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಗಂಗಪ್ಪ ಹುರಕಡ್ಲಿ, ಸಹಾಯಕ ನಿರ್ದೇಶಕ ಮಹಮ್ಮದ್ ಗೌಸ್ ರಿಸಲ್ದಾರ್, ವಿಜಯ ಪಾಟೀಲ, ಕಚೇರಿ ವ್ಯವಸ್ಥಾಪಕಿ ರಾಜೇಶ್ವರಿ ಪಟ್ಟಣಶೆಟ್ಟಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-21-1338530998</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಮ್ಮನ ಕಿತ್ತೂರು: ಗ್ಯಾರಂಟಿ ಯೋಜನೆಗಳ ಸವಲತ್ತುಗಳು ನೈಜ ಫಲಾನುಭವಿಗೆ ಸಮರ್ಪಕವಾಗಿ ತಲುಪಿಸಲು ಅಧಿಕಾರಿಗಳು ಮತ್ತಷ್ಟು ದಕ್ಷತೆ ಹಾಗೂ ಸಮನ್ವಯದಿಂದ ಕೆಲಸ ನಿರ್ವಹಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನಿಂಗಪ್ಪ ಮಸಳಿ ಸಲಹೆ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ಜವಾಬ್ದಾರಿ ಮತ್ತು ಸಮನ್ವಯತೆ ಪ್ರಮುಖ ಪಾತ್ರ ವಹಿಸುತ್ತವೆ. ಈ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಉತ್ತಮ ಫಲಿತಾಂಶ ಸಾಧಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.</p>.<p>ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷ ರುದ್ರಯ್ಯ ಹಿರೇಮಠ ಮಾತನಾಡಿ, ಸರ್ಕಾರದ ಈ ಯೋಜನೆಗಳು ಸಾಮಾನ್ಯ ಜನರ ಜೀವನಮಟ್ಟವನ್ನು ಉತ್ತಮಗೊಳಿಸುವಲ್ಲಿ ಹೆಚ್ಚು ಪರಿಣಾಮಕಾರಿ ಆಗಿವೆ ಎಂದರು.</p>.<p>ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಗಂಗಪ್ಪ ಹುರಕಡ್ಲಿ, ಸಹಾಯಕ ನಿರ್ದೇಶಕ ಮಹಮ್ಮದ್ ಗೌಸ್ ರಿಸಲ್ದಾರ್, ವಿಜಯ ಪಾಟೀಲ, ಕಚೇರಿ ವ್ಯವಸ್ಥಾಪಕಿ ರಾಜೇಶ್ವರಿ ಪಟ್ಟಣಶೆಟ್ಟಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-21-1338530998</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>