<p><strong>ಅಥಣಿ:</strong> ಪಟ್ಟಣದ ವೀರ ರಾಣಿ ಚನ್ನಮ್ಮ ಪುತ್ಥಳಿ ನಿರ್ಮಾಣದ ಫಲಕವನ್ನು ತೆರವುಗೊಳಿಸಿದ ಸ್ಥಳದಲ್ಲೇ ಶನಿವಾರ ಬೆಳಿಗ್ಗೆ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ಲಿಂಗಾಯತ ಪಂಚಮಸಾಲಿ ಸಮಾಜದ ಮುಖಂಡರು ಸೇರಿ ಮರು ಸ್ಥಾಪನೆ ಮಾಡಿ ಪೂಜೆ ಸಲ್ಲಿಸಿದರು .</p>.<p>ಈ ವೇಳೆ ಮಾಜಿ ಶಾಸಕ ಮಹೇಶ ಕುಮಠಳ್ಳಿ ಮಾತನಾಡಿ, ಇಲ್ಲಿರುವ ವೀರ ರಾಣಿ ಚನ್ನಮ್ಮ ಪುತ್ಥಳಿ ನಿರ್ಮಾಣ ಫಲಕವನ್ನು ಯಾರು ತೆಗೆದು ಹಾಕಿದರು ಎನ್ನುವದು ಈವರೆಗೂ ತಿಳಿದಿಲ್ಲ, ಇನ್ನೂ ಮುಂದೆ ಈ ತರಹ ಘಟನೆಗಳು ಆದಲ್ಲಿ ಉಗ್ರ ಹೋರಾಟ ಮಾಡಲಾಗುವುದು. ಇದೇ ಸ್ಥಳದಲ್ಲಿ ₹ 50 ಲಕ್ಷ ವೆಚ್ಚದಲ್ಲಿ ದೊಡ್ಡ ಮೂರ್ತಿ ಹಾಗೂ ಉದ್ಯಾನವನ್ನು ಸ್ಥಾಪನೆ ಮಾಡಬೇಕು ಇಲ್ಲವಾದಲ್ಲಿ ನಾವು ಪಕ್ಷಾತೀತವಾಗಿ ಹಾಗೂ ಜಾತ್ಯಾತೀತವಾಗಿ ಇಲ್ಲಿ ಪುತ್ಥಳಿ ನಿರ್ಮಾಣ ಮಾಡೆ ಮಾಡುತ್ತೇವೆ ಎಂದರು .</p>.<p>ಈ ವೇಳೆ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ, ಕನ್ನಡ ಪರ ಹೋರಾಟಗಾರ ಬಸನಗೌಡ ಪಾಟೀಲ (ಬಮ್ಮನಾಳ), ಶಿವರುದ್ರ ಘೂಳಪ್ಪನ್ನವರ,ಮಿತೇಶ ಪಟ್ಟಣ,ಪ್ರಮೋದ ಬೀಳ್ಳೂರ, ಆಕಾಶ ನಂದಗಾವ ಮಾತನಾಡಿದರು.</p>.<p>ಈ ವೇಳೆ ಮುಖಂಡರಾದ ಪುರಸಭೆ ಸದಸ್ಯರಾದ ರಾಜಶೇಖರ ಗುಡೋಡಗಿ, ಮಲ್ಲೇಶ ಹುದ್ದಾರ, ರಾಮನಗೌಡಾ ಪಾಟೀಲ, ಬಸವರಾಜ ಪಾಟೀಲ, ಮುಖಂಡರಾದ ಧರೇಪ್ಪಾ ಠಕ್ಕಣ್ಣವರ, ಗಿರೀಶ ಬುಟಾಳಿ, ಸಂಪತ್ತಕುಮಾರ ಶೇಟ್ಟಿ,ನಾನಾಸಾಬ ಅವತಾಡೆ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ:</strong> ಪಟ್ಟಣದ ವೀರ ರಾಣಿ ಚನ್ನಮ್ಮ ಪುತ್ಥಳಿ ನಿರ್ಮಾಣದ ಫಲಕವನ್ನು ತೆರವುಗೊಳಿಸಿದ ಸ್ಥಳದಲ್ಲೇ ಶನಿವಾರ ಬೆಳಿಗ್ಗೆ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ಲಿಂಗಾಯತ ಪಂಚಮಸಾಲಿ ಸಮಾಜದ ಮುಖಂಡರು ಸೇರಿ ಮರು ಸ್ಥಾಪನೆ ಮಾಡಿ ಪೂಜೆ ಸಲ್ಲಿಸಿದರು .</p>.<p>ಈ ವೇಳೆ ಮಾಜಿ ಶಾಸಕ ಮಹೇಶ ಕುಮಠಳ್ಳಿ ಮಾತನಾಡಿ, ಇಲ್ಲಿರುವ ವೀರ ರಾಣಿ ಚನ್ನಮ್ಮ ಪುತ್ಥಳಿ ನಿರ್ಮಾಣ ಫಲಕವನ್ನು ಯಾರು ತೆಗೆದು ಹಾಕಿದರು ಎನ್ನುವದು ಈವರೆಗೂ ತಿಳಿದಿಲ್ಲ, ಇನ್ನೂ ಮುಂದೆ ಈ ತರಹ ಘಟನೆಗಳು ಆದಲ್ಲಿ ಉಗ್ರ ಹೋರಾಟ ಮಾಡಲಾಗುವುದು. ಇದೇ ಸ್ಥಳದಲ್ಲಿ ₹ 50 ಲಕ್ಷ ವೆಚ್ಚದಲ್ಲಿ ದೊಡ್ಡ ಮೂರ್ತಿ ಹಾಗೂ ಉದ್ಯಾನವನ್ನು ಸ್ಥಾಪನೆ ಮಾಡಬೇಕು ಇಲ್ಲವಾದಲ್ಲಿ ನಾವು ಪಕ್ಷಾತೀತವಾಗಿ ಹಾಗೂ ಜಾತ್ಯಾತೀತವಾಗಿ ಇಲ್ಲಿ ಪುತ್ಥಳಿ ನಿರ್ಮಾಣ ಮಾಡೆ ಮಾಡುತ್ತೇವೆ ಎಂದರು .</p>.<p>ಈ ವೇಳೆ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ, ಕನ್ನಡ ಪರ ಹೋರಾಟಗಾರ ಬಸನಗೌಡ ಪಾಟೀಲ (ಬಮ್ಮನಾಳ), ಶಿವರುದ್ರ ಘೂಳಪ್ಪನ್ನವರ,ಮಿತೇಶ ಪಟ್ಟಣ,ಪ್ರಮೋದ ಬೀಳ್ಳೂರ, ಆಕಾಶ ನಂದಗಾವ ಮಾತನಾಡಿದರು.</p>.<p>ಈ ವೇಳೆ ಮುಖಂಡರಾದ ಪುರಸಭೆ ಸದಸ್ಯರಾದ ರಾಜಶೇಖರ ಗುಡೋಡಗಿ, ಮಲ್ಲೇಶ ಹುದ್ದಾರ, ರಾಮನಗೌಡಾ ಪಾಟೀಲ, ಬಸವರಾಜ ಪಾಟೀಲ, ಮುಖಂಡರಾದ ಧರೇಪ್ಪಾ ಠಕ್ಕಣ್ಣವರ, ಗಿರೀಶ ಬುಟಾಳಿ, ಸಂಪತ್ತಕುಮಾರ ಶೇಟ್ಟಿ,ನಾನಾಸಾಬ ಅವತಾಡೆ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>