<p><strong>ಚನ್ನಮ್ಮನ ಕಿತ್ತೂರು:</strong> ಬಾಲಕಿಯೊಬ್ಬಳ ಮೇಲೆ 2019ರಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಬೆಳಗಾವಿಯ ಹೆಚ್ಚುವರಿ ತ್ವರಿತ ಗತಿಯ ಜಿಲ್ಲಾ ಮತ್ತು ಸೆಷನ್ಸ್ ಪೋಕ್ಸೊ ನ್ಯಾಯಾಲಯವು ಐವರಿಗೆ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.</p>.<p>ಪ್ರಮುಖ ಆರೋಪಿ, ಮಹಾರಾಷ್ಟ್ರ ಕೊಲ್ಲಾಪುರ ಜಿಲ್ಲೆಯ ಉಪರಿಯ ಪ್ರವೀಣ ರಾಜೇಂದ್ರ ಬೆಡಕಿಹಾಳಗೆ 12 ವರ್ಷ ಕಠಿಣ ಶಿಕ್ಷೆ ಹಾಗೂ ₹15 ಸಾವಿರ ದಂಡ, ನಂತರದ ಆರೋಪಿಗಳಾದ ಕಿತ್ತೂರಿನ ಸದ್ಯ ಗೋಕಾಕದಲ್ಲಿ ವಾಸವಾಗಿರುವ ಲಕ್ಷ್ಮಿ ಮಾಂತೇಶ ಕರಬಿ, ಖಾನಾಪುರ ತಾಲ್ಲೂಕಿನ ತೋಲಗಿಯ ರೇಣುಕಾ ಬಸಪ್ಪ ಸಾಮ್ರಾಣಿ, ನಿಪ್ಪಾಣಿ ತಾಲ್ಲೂಕಿನ ಕುಣ್ಣೂರಿನ ನಿರ್ಮಾಲಾ ಶರದ್ ಮಗದುಮ್ ಅವರಿಗೆ 8 ವರ್ಷ ಕಠಿಣ ಶಿಕ್ಷೆ ಹಾಗೂ ಇದೇ ತಾಲ್ಲೂಕಿನ ಜನವಾಡ ಗ್ರಾಮದ ಮಹಾವೀರ ರಾಜಾರಾಮ ಶಮನೇವಾಡಿಗೆ ಎರಡು ವರ್ಷ ಸಾದಾ ಶಿಕ್ಷೆ ಮತ್ತು ₹5000 ದಂಡ ವಿಧಿಸಿ ನ್ಯಾಯಾಧೀಶರಾದ ಪುಷ್ಟಲತಾ ಅವರು ತೀರ್ಪು ನೀಡಿದ್ದಾರೆ.</p>.<p>ಅಂದಿನ ಬೈಲಹೊಂಗಲ ಎಎಸ್ಪಿ ಆಗಿದ್ದ ಪ್ರದೀಪ ಗುಂಟಿ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಬಾಹುಬಲಿ ಅಗಸಿಮನಿ ಎಲ್ಲ ಸಾಕ್ಷಿದಾರರನ್ನು ಕೋರ್ಟ್ ಎದುರು ಹಾಜರು ಪಡಿಸಿದ್ದರು. ಸರ್ಕಾರಿ ಅಭಿಯೋಜಕ ಎಲ್. ವಿ. ಪಾಟೀಲ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಮ್ಮನ ಕಿತ್ತೂರು:</strong> ಬಾಲಕಿಯೊಬ್ಬಳ ಮೇಲೆ 2019ರಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಬೆಳಗಾವಿಯ ಹೆಚ್ಚುವರಿ ತ್ವರಿತ ಗತಿಯ ಜಿಲ್ಲಾ ಮತ್ತು ಸೆಷನ್ಸ್ ಪೋಕ್ಸೊ ನ್ಯಾಯಾಲಯವು ಐವರಿಗೆ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.</p>.<p>ಪ್ರಮುಖ ಆರೋಪಿ, ಮಹಾರಾಷ್ಟ್ರ ಕೊಲ್ಲಾಪುರ ಜಿಲ್ಲೆಯ ಉಪರಿಯ ಪ್ರವೀಣ ರಾಜೇಂದ್ರ ಬೆಡಕಿಹಾಳಗೆ 12 ವರ್ಷ ಕಠಿಣ ಶಿಕ್ಷೆ ಹಾಗೂ ₹15 ಸಾವಿರ ದಂಡ, ನಂತರದ ಆರೋಪಿಗಳಾದ ಕಿತ್ತೂರಿನ ಸದ್ಯ ಗೋಕಾಕದಲ್ಲಿ ವಾಸವಾಗಿರುವ ಲಕ್ಷ್ಮಿ ಮಾಂತೇಶ ಕರಬಿ, ಖಾನಾಪುರ ತಾಲ್ಲೂಕಿನ ತೋಲಗಿಯ ರೇಣುಕಾ ಬಸಪ್ಪ ಸಾಮ್ರಾಣಿ, ನಿಪ್ಪಾಣಿ ತಾಲ್ಲೂಕಿನ ಕುಣ್ಣೂರಿನ ನಿರ್ಮಾಲಾ ಶರದ್ ಮಗದುಮ್ ಅವರಿಗೆ 8 ವರ್ಷ ಕಠಿಣ ಶಿಕ್ಷೆ ಹಾಗೂ ಇದೇ ತಾಲ್ಲೂಕಿನ ಜನವಾಡ ಗ್ರಾಮದ ಮಹಾವೀರ ರಾಜಾರಾಮ ಶಮನೇವಾಡಿಗೆ ಎರಡು ವರ್ಷ ಸಾದಾ ಶಿಕ್ಷೆ ಮತ್ತು ₹5000 ದಂಡ ವಿಧಿಸಿ ನ್ಯಾಯಾಧೀಶರಾದ ಪುಷ್ಟಲತಾ ಅವರು ತೀರ್ಪು ನೀಡಿದ್ದಾರೆ.</p>.<p>ಅಂದಿನ ಬೈಲಹೊಂಗಲ ಎಎಸ್ಪಿ ಆಗಿದ್ದ ಪ್ರದೀಪ ಗುಂಟಿ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಬಾಹುಬಲಿ ಅಗಸಿಮನಿ ಎಲ್ಲ ಸಾಕ್ಷಿದಾರರನ್ನು ಕೋರ್ಟ್ ಎದುರು ಹಾಜರು ಪಡಿಸಿದ್ದರು. ಸರ್ಕಾರಿ ಅಭಿಯೋಜಕ ಎಲ್. ವಿ. ಪಾಟೀಲ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>