<p><strong>ಚನ್ನಮ್ಮನ ಕಿತ್ತೂರು:</strong> ‘ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ ಅವರು ಕ್ಷಮೆ ಯಾಚಿಸಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ’ ಎಂದು ರಾಷ್ಟ್ರೀಯ ಬಸವದಳದ ಕಾರ್ಯಕರ್ತ ಅಶೋಕ ಅಳ್ನಾವರ ತಿಳಿಸಿದರು.</p>.<p>ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಚೆಗೆ ನಡೆದ ಪ್ರತಿಭಟನೆ ವೇಳೆ ಸಂದೀಪ ಅವರು ಬಸವಣ್ಣನವರ ವಚನವನ್ನು ವ್ಯಂಗ್ಯವಾಗಿ ಹೇಳಿದ್ದರು. ಹಾಗಾಗಿ, ರಾಷ್ಟ್ರೀಯ ಬಸವ ದಳದಿಂದ ಅವರು ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.</p>.<p>‘ಅವರು ಕ್ಷಮೆ ಕೇಳಬೇಕೆಂಬುದೇ ನಮ್ಮ ಬೇಡಿಕೆಯಾಗಿತ್ತು. ಬಸವ ಅಭಿಮಾನಿಗಳ ಭಾವನೆಗೆ ಅವರು ಸ್ಪಂದಿಸಿದ್ದಾರೆ’ ಎಂದು ಬಸವರಾಜ ಕಡೇಮನಿ ಹೇಳಿದರು.</p>.<p><strong>‘ನಾನೂ ಬಸವಾಭಿಮಾನಿ’: </strong>ಇದಕ್ಕೂ ಮೊದಲು ಪ್ರತ್ಯೇಕವಾಗಿ ಸುದ್ದಿಗೋಷ್ಠಿ ನಡೆಸಿದ ಸಂದೀಪ ದೇಶಪಾಂಡೆ, ‘ನನ್ನ ಹೇಳಿಕೆಯನ್ನು ರಾಜಕೀಯಕ್ಕೆ ಆಹಾರವಾಗಿಸುವುದು ಬೇಡ. ಇದನ್ನು ಮುಂದುವರಿಸುವುದೂ ಬೇಡ. ಈ ಬಗ್ಗೆ ಕ್ಷಮೆ ಕೇಳಿದ್ದೇನೆ. ಇದನ್ನು ಮುಕ್ತಾಯಗೊಳಿಸಬೇಕು’ ಎಂದು ಮನವಿ ಮಾಡಿದರು.</p>.<p>‘ನನ್ನ ಹೃದಯದಲ್ಲೂ ಬಸವಣ್ಣ ಇದ್ದಾನೆ. ನಾನು ಅನೇಕ ವಚನಗಳನ್ನು ಹಾಡಿದ್ದೇನೆ. ನನಗೂ ಅಭಿಮಾನವಿದೆ’ ಎಂದರು.</p>.<p>ಪಂಚಮಸಾಲಿ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಆರ್. ಪಾಟೀಲ ಮಾತನಾಡಿ, ‘ಬಸವ ದಳದ ಕಾರ್ಯಕರ್ತರು ಪತ್ರಿಕಾಗೋಷ್ಠಿ ಬಗ್ಗೆ ನನಗೆ ತಿಳಿಸಿಲ್ಲ. ಸಮಾಜ ಇಬ್ಭಾಗ ಆಗುವುದು ಬೇಡ’ ಎಂದು ತಿಳಿಸಿದರು.</p>.<p>ಬಸವರಾಜ ಪರವಣ್ಣವರ, ಶಿವಾನಂದ ಹನುಮಸಾಗರ, ಅಜ್ಜಪ್ಪ ನೇಗಿನಹಾಳ, ಉಳವಪ್ಪ ಉಳ್ಳಾಗಡ್ಡಿ, ಬಸನಗೌಡ ಸಿದ್ರಾಮನಿ, ನಿಂಗಪ್ಪ ಹಣಜಿ, ರಾಯಪ್ಪ ಹಣಜಿ, ಕಿರಣ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಮ್ಮನ ಕಿತ್ತೂರು:</strong> ‘ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ ಅವರು ಕ್ಷಮೆ ಯಾಚಿಸಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ’ ಎಂದು ರಾಷ್ಟ್ರೀಯ ಬಸವದಳದ ಕಾರ್ಯಕರ್ತ ಅಶೋಕ ಅಳ್ನಾವರ ತಿಳಿಸಿದರು.</p>.<p>ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಚೆಗೆ ನಡೆದ ಪ್ರತಿಭಟನೆ ವೇಳೆ ಸಂದೀಪ ಅವರು ಬಸವಣ್ಣನವರ ವಚನವನ್ನು ವ್ಯಂಗ್ಯವಾಗಿ ಹೇಳಿದ್ದರು. ಹಾಗಾಗಿ, ರಾಷ್ಟ್ರೀಯ ಬಸವ ದಳದಿಂದ ಅವರು ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.</p>.<p>‘ಅವರು ಕ್ಷಮೆ ಕೇಳಬೇಕೆಂಬುದೇ ನಮ್ಮ ಬೇಡಿಕೆಯಾಗಿತ್ತು. ಬಸವ ಅಭಿಮಾನಿಗಳ ಭಾವನೆಗೆ ಅವರು ಸ್ಪಂದಿಸಿದ್ದಾರೆ’ ಎಂದು ಬಸವರಾಜ ಕಡೇಮನಿ ಹೇಳಿದರು.</p>.<p><strong>‘ನಾನೂ ಬಸವಾಭಿಮಾನಿ’: </strong>ಇದಕ್ಕೂ ಮೊದಲು ಪ್ರತ್ಯೇಕವಾಗಿ ಸುದ್ದಿಗೋಷ್ಠಿ ನಡೆಸಿದ ಸಂದೀಪ ದೇಶಪಾಂಡೆ, ‘ನನ್ನ ಹೇಳಿಕೆಯನ್ನು ರಾಜಕೀಯಕ್ಕೆ ಆಹಾರವಾಗಿಸುವುದು ಬೇಡ. ಇದನ್ನು ಮುಂದುವರಿಸುವುದೂ ಬೇಡ. ಈ ಬಗ್ಗೆ ಕ್ಷಮೆ ಕೇಳಿದ್ದೇನೆ. ಇದನ್ನು ಮುಕ್ತಾಯಗೊಳಿಸಬೇಕು’ ಎಂದು ಮನವಿ ಮಾಡಿದರು.</p>.<p>‘ನನ್ನ ಹೃದಯದಲ್ಲೂ ಬಸವಣ್ಣ ಇದ್ದಾನೆ. ನಾನು ಅನೇಕ ವಚನಗಳನ್ನು ಹಾಡಿದ್ದೇನೆ. ನನಗೂ ಅಭಿಮಾನವಿದೆ’ ಎಂದರು.</p>.<p>ಪಂಚಮಸಾಲಿ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಆರ್. ಪಾಟೀಲ ಮಾತನಾಡಿ, ‘ಬಸವ ದಳದ ಕಾರ್ಯಕರ್ತರು ಪತ್ರಿಕಾಗೋಷ್ಠಿ ಬಗ್ಗೆ ನನಗೆ ತಿಳಿಸಿಲ್ಲ. ಸಮಾಜ ಇಬ್ಭಾಗ ಆಗುವುದು ಬೇಡ’ ಎಂದು ತಿಳಿಸಿದರು.</p>.<p>ಬಸವರಾಜ ಪರವಣ್ಣವರ, ಶಿವಾನಂದ ಹನುಮಸಾಗರ, ಅಜ್ಜಪ್ಪ ನೇಗಿನಹಾಳ, ಉಳವಪ್ಪ ಉಳ್ಳಾಗಡ್ಡಿ, ಬಸನಗೌಡ ಸಿದ್ರಾಮನಿ, ನಿಂಗಪ್ಪ ಹಣಜಿ, ರಾಯಪ್ಪ ಹಣಜಿ, ಕಿರಣ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>