ಈ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಸರ್ಕಾರಿ ಅಭಿಯೋಜಕ ಮುರಳೀಧರ ಕುಲಕರ್ಣಿ, ‘ಈ ಸೊಸೈಟಿಯು ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಇದು 35 ಶಾಖೆ ಹೊಂದಿದೆ. ಆಕರ್ಷಕ ಹಾಗೂ ಹೆಚ್ಚಿನ ಬಡ್ಡಿ ನೀಡುವುದಾಗಿ, 26ಸಾವಿರಕ್ಕೂ ಹೆಚ್ಚಿನ ಗ್ರಾಹಕರಿಂದ ಒಟ್ಟು ₹ 281.14 ಕೋಟಿ ಠೇವಣಿ ಇರಿಸಿಕೊಂಡಿದ್ದಾರೆ. ಆದರೆ, ಅವರಿಗೆ ಬಡ್ಡಿ ಅಥವಾ ಅಸಲು ಮೊತ್ತವನ್ನಾಗಲಿ ಹಿಂತಿರುಗಿಸದೆ, ಸ್ವಂತಕ್ಕಾಗಿ ಬಳಸಿಕೊಂಡು ಠೇವಣಿದಾರರಿಗೆ ವಂಚಿಸಿದ ಬಗ್ಗೆ ಇಲ್ಲಿನ ಸಹಕಾರಿ ಸಂಘಗಳ ಉಪನಿಬಂಧಕರು 2017ರ ಸೆ.1ರಂದು ಖಡೇಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು’ ಎಂದು ತಿಳಿಸಿದರು.